Andolana originals

ಕೌಶಲ ತರಬೇತಿಗೆ ಯುವನಿಧಿ ಫಲಾನುಭವಿಗಳ ನಿರಾಸಕ್ತಿ

ಕೆ.ಎಂ.ಅನುಚೇತನ್

೬ ಸಾವಿರ ಅರ್ಜಿಗಳಲ್ಲಿ ಶೇ.೯೦ರಷ್ಟು ಮಂದಿ ತರಬೇತಿಗೆ ಗೈರು

ಅತ್ಯಾಧುನಿಕ ತಂತ್ರಜ್ಞಾನದ ಕೃತಕ ಬುದ್ಧಿಮತ್ತೆ(ಎಐ)ಗೆ ಬೇಡಿಕೆ

ಮೈಸೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಫಲಾನುಭವಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಆಯೋಜಿಸುವ ಕೌಶಲ ತರಬೇತಿಗೆ ಫಲಾನುಭವಿಗಳು ನಿರಾಸಕ್ತಿ ತೋರುತ್ತಿದ್ದಾರೆ.

ಯುವ ಜನತೆ ಹಾಗೂ ಉನ್ನತ ಶಿಕ್ಷಣ ಪಡೆದವರಿಗಾಗಿ ರಾಜ್ಯ ಸರ್ಕಾರ ನಿರುದ್ಯೋಗಿಗಳಿಗೆ ಯುವನಿಧಿ ಗ್ಯಾರಂಟಿ ಯೋಜನೆ ಮೂಲಕ ಸಹಾಯ ಧನ ನೀಡುತ್ತಿದೆ. ಅಲ್ಲದೇ ಯುವಕರು ಉದ್ಯಮಗಳಲ್ಲಿ, ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಪಡೆದುಕೊಳ್ಳಲು ಶಿಕ್ಷಣದ ಜತೆಗೆ ಕೌಶಲದವೂ ಮುಖ್ಯವಾಗಿದೆ. ಅಂತಹ ಕೌಶಲ ತರಬೇತಿ ನೀಡಲು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳಿಗೆ ಸರ್ಕಾರ ನಿರ್ದೇಶನ ನೀಡಿ ಉಚಿತ ಕೌಶಲ ತರಬೇತಿ ನೀಡಲು ನಿರ್ಧರಿಸಿತ್ತು. ಆದರೆ, ಆರಂಭದಲ್ಲಿ ಆಸಕ್ತಿ ತೋರಿದ್ದ ಯುವ ನಿಧಿ ಫಲಾನುಭವಿಗಳು, ಇದೀಗ ತರಬೇತಿಗೆ ಹಾಜರಾಗಲು ಆಸಕ್ತಿ ತೋರದ ಸ್ಥಿತಿ ಎದುರಾಗಿದೆ.

ಮೈಸೂರಿನ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಸೇರಿದಂತೆ ರಾಜ್ಯದಲ್ಲಿ ೭ ಕೇಂದ್ರಗಳಲ್ಲಿ ಈ ಕೌಶಲ ತರಬೇತಿ ನೀಡಲು ಸರ್ಕಾರ ಮುಂದಾಗಿದ್ದು, ಇಲ್ಲಿ ಇಂಜಿನಿಯರಿಂಗ್, ಡಿಪ್ಲೊಮೋ ಪದವೀಧರರಿಗೆ ತರಬೇತಿ ನೀಡಲಾಗುತ್ತಿದೆ. ಪದವಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಮಾಸಾಶನದ ಜತೆಗೆ ತರಬೇತಿಯನ್ನು ನೀಡಿ ಉದ್ಯೋಗ ಕೊಡಿಸುವ ಜವಾಬ್ದಾರಿಯನ್ನು ಇಲಾಖೆಗಳಿಗೆ ವಹಿಸಿದ್ದು,ಇದರಿಂದ ಫಲಾನುಭವಿಗಳಿಗೆ ಸಹಕಾರಿಯಾಗುವಂತಹ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ರೂಪಿಸಿದೆ.

ತರಬೇತಿ ನಿರಾಸಕ್ತಿಗೆ ಕಾರಣವೇನು?: ಕರ್ನಾಟಕ ಜರ್ಮನ್ ಸ್ಟಾಟಂ ತಾಂತ್ರಿಕ ತರಬೇತಿ ಸಂಸ್ಥೆಯು, ಡಿಪ್ಲೊಮೊ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ೮ ಕೋರ್ಸ್ ಗಳ ತರಬೇತಿ ನೀಡುತ್ತಿದೆ. ಅದರಲ್ಲಿ ಪಿಎಲ್‌ಸಿ, ಸ್ಕಾಡಾ, ಎಚ್ ಎಂಎ ತರಬೇತಿ ಒಳಗೊಂಡಿವೆ. ಇದೇ ಮಾದರಿಯಲ್ಲಿ ೩ ತಿಂಗಳುಗಳ ತರಬೇತಿಯನ್ನು ಯುವನಿಧಿ ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಕಳೆದ ಒಂದು ವರ್ಷದಿಂದ ತರಬೇತಿ ಆರಂಭಿಸಲಾಗಿದ್ದು, ಸಂಸ್ಥೆಯ ಅಧಿಕಾರಿಗಳೇ ಯುವ ನಿಧಿ ಫಲಾನುಭವಿಗಳ ಮಾಹಿತಿ ಪಡೆದು ೬ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆ ಮಾಡಿ ಕೌಶಲ ತರಬೇತಿ ಮಾಹಿತಿ ನೀಡಿ, ತರಬೇತಿಗೆ ಆಹ್ವಾನಿಸಿದ್ದಾರೆ.

ಆದರೆ, ಇದರಲ್ಲಿ ಶೇ.೯೦ಕ್ಕೂ ಹೆಚ್ಚಿನ ಫಲಾನುಭವಿಗಳು ಕೌಶಲ ತೆರಬೇತಿ ಬಗ್ಗೆ ಆಸಕ್ತಿ ತೋರಿಲ್ಲ. ಹೆಚ್ಚಿನದಾಗಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ಈ ತರಬೇತಿಯನ್ನು ನಿರಾಕರಿಸುತ್ತಿದ್ದಾರೆ. ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್‌ಗೆ ಸಂಬಂಧಿಸಿದಂತೆ ತರಬೇತಿ ಸೌಲಭ್ಯವಿಲ್ಲ. ಸಂಸ್ಥೆಯ ಕೋರ್ಸ್‌ಗಳ ತರಬೇತಿಗೆ ಬದಲಾಗಿ, ಫಲಾನುಭವಿಗಳು ತಮಗೆ ಬೇಕಾದ ಕೋರ್ಸ್‌ಗಳ ತರಬೇತಿಗೆ ಬೇಡಿಕೆ ಇಡುತ್ತಿದ್ದಾರೆ. ಕೆಲವರು ಉನ್ನತ ಶಿಕ್ಷಣದ ಮೊರೆ ಹೋಗಿದ್ದಾರೆ. ಹಲವರು ಸಿಕ್ಕ ಉದ್ಯೋಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇನ್ನೊಂದಷ್ಟು ಮಂದಿ ತಮ್ಮಿಷ್ಟದ ಕೋಸ್ ಗಳ ತರಬೇತಿಯನ್ನು ಬೇರೆಡೆ ಪಡೆಯುತ್ತಿದ್ದಾರೆ.

ಇದುವರೆಗೂ ಪ್ರತಿ ಬ್ಯಾಚ್‌ನಲ್ಲಿ ೨೦ ಫಲಾನುಭವಿಗಳು ಭಾಗವಹಿಸಿದರೆ ಅದೇ ಹೆಚ್ಚು ಎಂದು ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಮೈಸೂರು ನಿರ್ದೇಶಕ ರಾಜು ಪಾಟೀಲ್ ತಿಳಿಸಿದ್ದಾರೆ.

ಎಐ ಕೌಶಲ ತರಬೇತಿಗೆ ಬೇಡಿಕೆ: 

ಇಂದಿನ ಕೈಗಾರಿಕಾ ಕ್ಷೇತ್ರ ಹಾಗೂ ಉದ್ಯಮಗಳು ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗುತ್ತಿದ್ದು, ಅದಕ್ಕನುಗುಣವಾಗಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಬಳಕೆಯ ಕೌಶಲ ತರಬೇತಿಗೆ ಫಲಾನುಭವಿಗಳು ಬೇಡಿಕೆಯಿಡುತ್ತಿದ್ದಾರೆ. ಈ ಮೂಲಕ ಎಐ ಆಧಾರಿತ ತರಬೇತಿಗಳಿಂದ ಭವಿಷ್ಯದಲ್ಲಿ ಉತ್ತಮವಾದ ಉದ್ಯೋಗ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂಬುದು ಫಲಾನುಭವಿಗಳ ಆಶಯ. ಇದೀಗ ಸಂಸ್ಥೆಯು ಫಲಾನುಭವಿಗಳ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದು, ಎಐ ಆಧಾರಿತ ತರಬೇತಿಗೆ ಸಿದ್ಧತೆ ನಡೆಸುತ್ತಿದೆ.

” ಫಲಾನುಭವಿಗಳಿಂದ ಎಐ ಕೌಶಲ ತರಬೇತಿಗೆ ಬೇಡಿಕೆಯಿದೆ. ಸರ್ಕಾರಕ್ಕೆಮ ಮಾಹಿತಿ ನೀಡಲಾಗಿದ್ದು, ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಎಐ ಕೌಶಲ ತರಬೇತಿ ಪ್ರಾರಂಭಿಸಲಾಗುವುದು.”

-ರಾಜು ಪಾಟೀಲ್, ನಿರ್ದೇಶಕ, ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ: ಕೆ.ಎನ್‌.ರಾಜಣ್ಣ

ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…

1 hour ago

ರಾಜ್ಯ ರಾಜಕಾರಣಕ್ಕೆ ವಾಪಸ್‌ ಆಗುವ ಚಿಂತನೆ ಇಲ್ಲ: ವಿ.ಸೋಮಣ್ಣ

ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

1 hour ago

ಮೈಸೂರು ಮುಡಾ ಹಗರಣ: ಹೊಸ ಬಾಂಬ್‌ ಸಿಡಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ಮುಖ್ಯ…

2 hours ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಶವ ಪತ್ತೆ ಪ್ರಕರಣ: ಸ್ಕೂಟರ್‌ ಕ್ಲಚ್‌ ವೈರ್‌ ಉರುಳಿಗೆ ವ್ಯಾಘ್ರ ಬಲಿ?

ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…

2 hours ago

ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್‌ಗೆ ಭೇಟಿ: ನೆತನ್ಯಾಹು ಘೋಷಣೆ

ಟೆಲ್‌ ಅವಿವ್:‌ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ಪ್ರಯಾಣಿಸಲಿದ್ದಾರೆ ಎಂದು…

2 hours ago

ಹಲವು ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ ದಿಢೀರ್‌ ರದ್ದು?

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…

3 hours ago