Andolana originals

ಕೌಶಲ ತರಬೇತಿಗೆ ಯುವನಿಧಿ ಫಲಾನುಭವಿಗಳ ನಿರಾಸಕ್ತಿ

ಕೆ.ಎಂ.ಅನುಚೇತನ್

೬ ಸಾವಿರ ಅರ್ಜಿಗಳಲ್ಲಿ ಶೇ.೯೦ರಷ್ಟು ಮಂದಿ ತರಬೇತಿಗೆ ಗೈರು

ಅತ್ಯಾಧುನಿಕ ತಂತ್ರಜ್ಞಾನದ ಕೃತಕ ಬುದ್ಧಿಮತ್ತೆ(ಎಐ)ಗೆ ಬೇಡಿಕೆ

ಮೈಸೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಫಲಾನುಭವಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಆಯೋಜಿಸುವ ಕೌಶಲ ತರಬೇತಿಗೆ ಫಲಾನುಭವಿಗಳು ನಿರಾಸಕ್ತಿ ತೋರುತ್ತಿದ್ದಾರೆ.

ಯುವ ಜನತೆ ಹಾಗೂ ಉನ್ನತ ಶಿಕ್ಷಣ ಪಡೆದವರಿಗಾಗಿ ರಾಜ್ಯ ಸರ್ಕಾರ ನಿರುದ್ಯೋಗಿಗಳಿಗೆ ಯುವನಿಧಿ ಗ್ಯಾರಂಟಿ ಯೋಜನೆ ಮೂಲಕ ಸಹಾಯ ಧನ ನೀಡುತ್ತಿದೆ. ಅಲ್ಲದೇ ಯುವಕರು ಉದ್ಯಮಗಳಲ್ಲಿ, ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಪಡೆದುಕೊಳ್ಳಲು ಶಿಕ್ಷಣದ ಜತೆಗೆ ಕೌಶಲದವೂ ಮುಖ್ಯವಾಗಿದೆ. ಅಂತಹ ಕೌಶಲ ತರಬೇತಿ ನೀಡಲು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಗಳಿಗೆ ಸರ್ಕಾರ ನಿರ್ದೇಶನ ನೀಡಿ ಉಚಿತ ಕೌಶಲ ತರಬೇತಿ ನೀಡಲು ನಿರ್ಧರಿಸಿತ್ತು. ಆದರೆ, ಆರಂಭದಲ್ಲಿ ಆಸಕ್ತಿ ತೋರಿದ್ದ ಯುವ ನಿಧಿ ಫಲಾನುಭವಿಗಳು, ಇದೀಗ ತರಬೇತಿಗೆ ಹಾಜರಾಗಲು ಆಸಕ್ತಿ ತೋರದ ಸ್ಥಿತಿ ಎದುರಾಗಿದೆ.

ಮೈಸೂರಿನ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಸೇರಿದಂತೆ ರಾಜ್ಯದಲ್ಲಿ ೭ ಕೇಂದ್ರಗಳಲ್ಲಿ ಈ ಕೌಶಲ ತರಬೇತಿ ನೀಡಲು ಸರ್ಕಾರ ಮುಂದಾಗಿದ್ದು, ಇಲ್ಲಿ ಇಂಜಿನಿಯರಿಂಗ್, ಡಿಪ್ಲೊಮೋ ಪದವೀಧರರಿಗೆ ತರಬೇತಿ ನೀಡಲಾಗುತ್ತಿದೆ. ಪದವಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಮಾಸಾಶನದ ಜತೆಗೆ ತರಬೇತಿಯನ್ನು ನೀಡಿ ಉದ್ಯೋಗ ಕೊಡಿಸುವ ಜವಾಬ್ದಾರಿಯನ್ನು ಇಲಾಖೆಗಳಿಗೆ ವಹಿಸಿದ್ದು,ಇದರಿಂದ ಫಲಾನುಭವಿಗಳಿಗೆ ಸಹಕಾರಿಯಾಗುವಂತಹ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ರೂಪಿಸಿದೆ.

ತರಬೇತಿ ನಿರಾಸಕ್ತಿಗೆ ಕಾರಣವೇನು?: ಕರ್ನಾಟಕ ಜರ್ಮನ್ ಸ್ಟಾಟಂ ತಾಂತ್ರಿಕ ತರಬೇತಿ ಸಂಸ್ಥೆಯು, ಡಿಪ್ಲೊಮೊ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ೮ ಕೋರ್ಸ್ ಗಳ ತರಬೇತಿ ನೀಡುತ್ತಿದೆ. ಅದರಲ್ಲಿ ಪಿಎಲ್‌ಸಿ, ಸ್ಕಾಡಾ, ಎಚ್ ಎಂಎ ತರಬೇತಿ ಒಳಗೊಂಡಿವೆ. ಇದೇ ಮಾದರಿಯಲ್ಲಿ ೩ ತಿಂಗಳುಗಳ ತರಬೇತಿಯನ್ನು ಯುವನಿಧಿ ಫಲಾನುಭವಿಗಳಿಗೆ ನೀಡಲಾಗುತ್ತಿದೆ. ಕಳೆದ ಒಂದು ವರ್ಷದಿಂದ ತರಬೇತಿ ಆರಂಭಿಸಲಾಗಿದ್ದು, ಸಂಸ್ಥೆಯ ಅಧಿಕಾರಿಗಳೇ ಯುವ ನಿಧಿ ಫಲಾನುಭವಿಗಳ ಮಾಹಿತಿ ಪಡೆದು ೬ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕರೆ ಮಾಡಿ ಕೌಶಲ ತರಬೇತಿ ಮಾಹಿತಿ ನೀಡಿ, ತರಬೇತಿಗೆ ಆಹ್ವಾನಿಸಿದ್ದಾರೆ.

ಆದರೆ, ಇದರಲ್ಲಿ ಶೇ.೯೦ಕ್ಕೂ ಹೆಚ್ಚಿನ ಫಲಾನುಭವಿಗಳು ಕೌಶಲ ತೆರಬೇತಿ ಬಗ್ಗೆ ಆಸಕ್ತಿ ತೋರಿಲ್ಲ. ಹೆಚ್ಚಿನದಾಗಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ಈ ತರಬೇತಿಯನ್ನು ನಿರಾಕರಿಸುತ್ತಿದ್ದಾರೆ. ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್‌ಗೆ ಸಂಬಂಧಿಸಿದಂತೆ ತರಬೇತಿ ಸೌಲಭ್ಯವಿಲ್ಲ. ಸಂಸ್ಥೆಯ ಕೋರ್ಸ್‌ಗಳ ತರಬೇತಿಗೆ ಬದಲಾಗಿ, ಫಲಾನುಭವಿಗಳು ತಮಗೆ ಬೇಕಾದ ಕೋರ್ಸ್‌ಗಳ ತರಬೇತಿಗೆ ಬೇಡಿಕೆ ಇಡುತ್ತಿದ್ದಾರೆ. ಕೆಲವರು ಉನ್ನತ ಶಿಕ್ಷಣದ ಮೊರೆ ಹೋಗಿದ್ದಾರೆ. ಹಲವರು ಸಿಕ್ಕ ಉದ್ಯೋಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇನ್ನೊಂದಷ್ಟು ಮಂದಿ ತಮ್ಮಿಷ್ಟದ ಕೋಸ್ ಗಳ ತರಬೇತಿಯನ್ನು ಬೇರೆಡೆ ಪಡೆಯುತ್ತಿದ್ದಾರೆ.

ಇದುವರೆಗೂ ಪ್ರತಿ ಬ್ಯಾಚ್‌ನಲ್ಲಿ ೨೦ ಫಲಾನುಭವಿಗಳು ಭಾಗವಹಿಸಿದರೆ ಅದೇ ಹೆಚ್ಚು ಎಂದು ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಮೈಸೂರು ನಿರ್ದೇಶಕ ರಾಜು ಪಾಟೀಲ್ ತಿಳಿಸಿದ್ದಾರೆ.

ಎಐ ಕೌಶಲ ತರಬೇತಿಗೆ ಬೇಡಿಕೆ: 

ಇಂದಿನ ಕೈಗಾರಿಕಾ ಕ್ಷೇತ್ರ ಹಾಗೂ ಉದ್ಯಮಗಳು ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗುತ್ತಿದ್ದು, ಅದಕ್ಕನುಗುಣವಾಗಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಬಳಕೆಯ ಕೌಶಲ ತರಬೇತಿಗೆ ಫಲಾನುಭವಿಗಳು ಬೇಡಿಕೆಯಿಡುತ್ತಿದ್ದಾರೆ. ಈ ಮೂಲಕ ಎಐ ಆಧಾರಿತ ತರಬೇತಿಗಳಿಂದ ಭವಿಷ್ಯದಲ್ಲಿ ಉತ್ತಮವಾದ ಉದ್ಯೋಗ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂಬುದು ಫಲಾನುಭವಿಗಳ ಆಶಯ. ಇದೀಗ ಸಂಸ್ಥೆಯು ಫಲಾನುಭವಿಗಳ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದು, ಎಐ ಆಧಾರಿತ ತರಬೇತಿಗೆ ಸಿದ್ಧತೆ ನಡೆಸುತ್ತಿದೆ.

” ಫಲಾನುಭವಿಗಳಿಂದ ಎಐ ಕೌಶಲ ತರಬೇತಿಗೆ ಬೇಡಿಕೆಯಿದೆ. ಸರ್ಕಾರಕ್ಕೆಮ ಮಾಹಿತಿ ನೀಡಲಾಗಿದ್ದು, ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಎಐ ಕೌಶಲ ತರಬೇತಿ ಪ್ರಾರಂಭಿಸಲಾಗುವುದು.”

-ರಾಜು ಪಾಟೀಲ್, ನಿರ್ದೇಶಕ, ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

4 hours ago

ಓದುಗರ ಪತ್ರ: ಒಟಿಟಿ ವೇದಿಕೆಗಳು ಕನ್ನಡ ಭಾಷೆಗೂ ಆದ್ಯತೆ ನೀಡಲಿ

ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…

4 hours ago

ಓದುಗರ ಪತ್ರ: ಖಾಸಗಿ ಕಾಲೇಜುಗಳ ಅನಗತ್ಯ ಶುಲ್ಕ ಹೆಚ್ಚಳ ನಿಯಂತ್ರಿಸಿ

ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮೂರಡಿಯ ಮೂರ್ತಿಗೆ ಡಾಕ್ಟರಾದ ಕೀರ್ತಿ

ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…

4 hours ago

ಬರದಲ್ಲೂ ಜಾನುವಾರುಗಳ ಮೇವಿಗಿಲ್ಲ ಕೊರತೆ

ಕೆ.ಬಿ.ರಮೇಶನಾಯಕ ಹೋಬಳಿಗೊಂದರಂತೆ ೨೯ ಮೇವು ಬ್ಯಾಂಕ್ ತೆರೆಯಲು ಪ್ರಸ್ತಾವನೆ  ಮೈಸೂರು: ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ಕೈಕೊಟ್ಟಿದ್ದರಿಂದಾಗಿ ಮಳೆಯಾಶ್ರಿತ…

4 hours ago

ಮಂಜಿನ ನಡುವೆ ಕೇಸರಿ ರೈಲು; ಕಾಗಿನೆರೆ ದೃಶ್ಯ ವೈರಲ್

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಧಾನಿ ಮೋದಿ, ರೈಲ್ವೆ  ಸಚಿವ ಅಶ್ವಿನಿ ವೈಷ್ಣವ್ ಗಮನ ಸೆಳೆದ ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಸೋಮವಾರಪೇಟೆ: ಪಶ್ಚಿಮಘಟ್ಟದ…

4 hours ago