Andolana originals

ಯುವನಿಧಿ ಯೋಜನೆ; 2,116 ಮಂದಿ ನೋಂದಣಿ

ನವೀನ್ ಡಿಸೋಜ

2079 ಪದವಿ, 37 ಮಂದಿ ಡಿಪ್ಲೊಮಾ ಪದವೀಧರರು, 877 ಯುವಕರು, 1239 ಮಂದಿ ಯುವತಿಯರಿಂದ ನೋಂದಣಿ

ಮಡಿಕೇರಿ: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಜಾರಿಗೊಂಡು ಡಿಸೆಂಬರ್ ತಿಂಗಳಿಗೆ ಎರಡು ವರ್ಷಗಳು ಪೂರ್ಣಗೊಂಡಿದ್ದು, ಕೊಡಗು ಜಿಲ್ಲೆಯಲ್ಲಿ ಜನವರಿ ಅಂತ್ಯಕ್ಕೆ ಒಟ್ಟು ೨,೧೧೬ ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಾರಿಗೊಳಿಸಲಾಗಿರುವ ಯುವನಿಧಿ ಯೋಜನೆ ಯನ್ನು ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ ೩ ಸಾವಿರ ರೂ. ಮತ್ತು ಡಿಪ್ಲೊಮಾ ತೇರ್ಗಡೆಯಾದವರಿಗೆ ೧,೫೦೦ ರೂ.ಗಳನ್ನು ೨ ವರ್ಷಗಳವರೆಗೆ ನೀಡಲಾಗುತ್ತದೆ.

೨೦೨೩ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು, ಪದವಿ, ಡಿಪ್ಲೊಮಾ ನಂತರ ಕನಿಷ್ಠ ೬ ತಿಂಗಳವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರು, ರಾಜ್ಯದಲ್ಲಿ ವಾಸವಿರುವ ಕನಿಷ್ಠ ೬ ವರ್ಷಗಳವರೆಗೆ ಪದವಿ, ಡಿಪ್ಲೊಮಾ ಉತ್ತೀರ್ಣರಾದವರು ಯುವನಿಧಿ ಸೌಲಭ್ಯ ಪಡೆಯಲು ಅರ್ಹರಿದ್ದಾರೆ.

ಸದ್ಯ ಯುವನಿಧಿ ಯೋಜನೆಯಡಿ ಇಲ್ಲಿಯವರೆಗೆ ಜಿಲ್ಲೆಯಲ್ಲಿ ೨,೧೧೬ ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ೨,೦೭೯ ಪದವೀಧರರು ಮತ್ತು ೩೭ ಮಂದಿ ಡಿಪ್ಲೊಮಾ ಪದವೀಧರರು ಒಳಗೊಂಡಿದ್ದಾರೆ. ಹಾಗೆಯೇ ಇವರಲ್ಲಿ ೮೭೭ ಮಂದಿ ಯುವಕರು ಹಾಗೂ ೧,೨೩೯ ಮಂದಿ ಯುವತಿಯರು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಹೆಸರು ನೋಂದಾಯಿತ ೨,೧೧೬ ಯುವ ಜನರ ಪೈಕಿ ೧,೬೪೯ ಮಂದಿಗೆ ಡಿಬಿಟಿ ಮೂಲಕ ಪ್ರತೀ ತಿಂಗಳು ಹಣ ಪಾವತಿಯಾಗುತ್ತಿದೆ. ತಾಲ್ಲೂಕುವಾರು ಗಮನಿಸಿದಾಗ ಮಡಿಕೇರಿ ತಾಲ್ಲೂಕಿನಲ್ಲಿ ೫೭೫ ಮಂದಿ ಹೆಸರು ನೋಂದಾಯಿಸಿದ್ದಾರೆ. ಕುಶಾಲನಗರ ತಾಲ್ಲೂಕಿನಲ್ಲಿ ೩೩೯, ಪೊನ್ನಂಪೇಟೆ ತಾಲ್ಲೂಕಿನಲ್ಲಿ ೨೩೭, ವಿರಾಜಪೇಟೆ ತಾಲ್ಲೂಕಿನಲ್ಲಿ ೩೫೬ ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ ೬೦೯ ಮಂದಿ ಹೆಸರು ನೋಂದಾಯಿಸಿದ್ದಾರೆ.

ಇವರಲ್ಲಿ ಮಡಿಕೇರಿ ತಾಲ್ಲೂಕಿನ ೪೪೩ ಮಂದಿ, ಕುಶಾಲನಗರ ೨೭೨, ಪೊನ್ನಂಪೇಟೆ ೧೭೨, ಸೋಮವಾರಪೇಟೆ ೪೮೦ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ೨೮೨ ಮಂದಿ ಸೇರಿದಂತೆ ಜಿಲ್ಲೆಯ ಒಟ್ಟು ೧,೬೪೯ ಮಂದಿಗೆ ಯುವ ನಿಧಿ ಯೋಜನೆ ಸೌಲಭ್ಯ ದೊರೆಯುತ್ತಿದೆ.

ಯಾವುದೇ ಪದವಿ, ಡಿಪ್ಲೊಮಾ, ಸ್ನಾತ ಕೋತ್ತರ ಪದವಿ ಉತ್ತೀರ್ಣರಾಗಿ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಿ ಹಾಗೂ ಉಚಿತವಾಗಿ ಕರ್ನಾಟಕ ಒನ್, ಗ್ರಾಮ ಒನ್ ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳ ಮುಖಾಂತರ ಅರ್ಜಿ ಸಲ್ಲಿಸಬಹುದು.

ಸೇವಾ ಸಿಂಧು ಪೋರ್ಟಲ್ ಮುಖಪುಟದಲ್ಲಿರುವ ನ್ಯಾಡ್ ಲಿಂಕ್ ಉಪಯೋಗಿಸಿ ಕೊಂಡು ತಮ್ಮ ದಾಖಲೆಗಳು ಅಪ್‌ಲೋಡ್ ಆಗುವುದನ್ನು ಖಚಿತಪಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: ೧೮೦೦೫೯೯೯೯೧೮ಕ್ಕೆ ಕರೆ ಮಾಡಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಬಿ.ಮಂಜುನಾಥ್ ತಿಳಿಸಿದ್ದಾರೆ.

” ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ, ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯಡಿ ನೋಂದಣಿಯಾಗಿರುವ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಆದವರಿಗೆ ಆರ್ಥಿಕ ನೆರವಿನ ರೂಪದಲ್ಲಿ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತಿದೆ. ಅದರಂತೆ ಪದವೀಧರರಿಗೆ ಮಾಸಿಕ ೩ ಸಾವಿರ ರೂ. ಮತ್ತು ಡಿಪ್ಲೊಮಾ ಪಡೆದವರಿಗೆ ಮಾಸಿಕ ೧,೫೦೦ ರೂ. ನೀಡಲಾಗುತ್ತಿದೆ. ಆಸಕ್ತರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಈವರೆಗೆ ಜಿಲ್ಲೆಯಲ್ಲಿ ೨,೧೧೬ ಮಂದಿ ಹೆಸರು ನೋಂದಾಯಿಸಿಕೊಂಡಿದಾರೆ.”

-ಮಂಜುನಾಥ್, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ

 

 

ಆಂದೋಲನ ಡೆಸ್ಕ್

Recent Posts

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

7 mins ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

56 mins ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

1 hour ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

6 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

8 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

8 hours ago