Andolana originals

ಜಿಲ್ಲಾ ಯುವ ಒಕ್ಕೂಟದ ಕೈಸೇರಿದ ಯುವ ಭವನ

 ನವೀನ್ ಡಿಸೋಜ

ಮಹಿಳಾ ಕಾಲೇಜಿಗೆ ಕಟ್ಟಡ ಬಿಟ್ಟುಕೊಟ್ಟು ಪರಿತಪಿಸುತ್ತಿದ್ದ ಯುವ ಒಕ್ಕೂಟ; ಕಟ್ಟಡ ದೊರೆತಿರುವುದರಿಂದ ಕಾರ್ಯಚಟುವಟಿಕೆಗೆ ಅನುಕೂಲ 

ಮಡಿಕೇರಿ: ಕೊಡಗು ಜಿಯ ಯುವ ಜನತೆಗೆ ಮಾರ್ಗ ದರ್ಶನ, ವಿವಿಧ ತರಬೇತಿ ಮತ್ತು ಶಿಬಿರ ಆಯೋಜನೆ, ಯುವ ಸಮ್ಮೇಳನ, ಯುವಜನೋತ್ಸವ ಮತ್ತಿತರ ಕಾರ್ಯ ಕ್ರಮ ನಡೆಸಲೆಂದೇ ನಿರ್ಮಿಸಲಾಗಿದ್ದ ಯುವಭವನ ೧೨ ವರ್ಷಗಳ ಬಳಿಕ ಜಿಲ್ಲಾ ಯುವ ಒಕ್ಕೂಟದ ಕೈಸೇರಿದ್ದು, ಇನ್ನು ಮುಂದೆ ಕಾರ್ಯಚಟುವಟಿಕೆ ನಡೆಸಲು ಅನುಕೂಲವಾಗಲಿದೆ.

೨೦೦೪ರಲ್ಲಿ ಜಿಲ್ಲಾ ಯುವ ಭವನ ಕಟ್ಟಡ ನಿರ್ಮಾಣಕ್ಕಾಗಿ ಅಂದಿನ ಜಿಲ್ಲಾಧಿಕಾರಿಗಳು ಜಾಗ ಗುರುತು ಮಾಡಿದ್ದರು. ೨೦೦೫ರಲ್ಲಿ ಅಂದಿನ ಸಂಸದ ಡಿ.ವಿ.ಸದಾನಂದಗೌಡ ೧ ಲಕ್ಷ ರೂ. ಅನುದಾನ ನೀಡಿ ಭೂಮಿ ಪೂಜೆ ನೆರವೇರಿಸಿದ್ದರು. ೨೦೧೩ರಲ್ಲಿ ನಗರದ ಸುದರ್ಶನ ವೃತ್ತದ ಬಳಿ ಸುಸಜ್ಜಿತ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿತ್ತು.

೨೦೧೪-೧೫ನೇ ಸಾಲಿನಲ್ಲಿ ಮಡಿಕೇರಿ ನಗರದಲ್ಲಿ ಹೊಸದಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿತ್ತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಕಾಲೇಜು ಸ್ಥಾಪನೆಗೆ ವಿಶೇಷ ಮುತುವರ್ಜಿ ವಹಿಸಿದ್ದರು. ೨೦೧೪-೧೫ನೇ ಸಾಲಿನಲ್ಲಿ ಕಾಲೇಜು ಆರಂಭವಾದರೂ ಸ್ವಂತ ಕಟ್ಟಡವಿಲ್ಲದೆ, ಜಿಲ್ಲಾ ಯುವ ಒಕ್ಕೂಟಕ್ಕೆ ಸೇರಿದ ಯುವ ಭವನ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಕಾಲೇಜು ಆರಂಭಿಸಲಾಗಿತ್ತು.

ಬಳಿಕ ೧೨ ವರ್ಷಗಳು ಕಳೆದರೂ ಜಿಲ್ಲಾ ಯುವಭವನ ಯುವ ಒಕ್ಕೂಟದ ಕೈ ಸೇರದೆ ಮಾಸಿಕ ಸಭೆ, ವಿವಿಧ ಚಟುವಟಿಕೆ ನಡೆಸಲು ಸೂಕ್ತ ಸ್ಥಳವಿಲ್ಲದೆ ಬಾಡಿಗೆ ಕಟ್ಟಡಗಳಲ್ಲಿ ನಡೆಸುವಂತಾಗಿತ್ತು. ಕಟ್ಟಡ ಹಸ್ತಾಂತರಿಸುವಂತೆ ಸಾಕಷ್ಟು ಬಾರಿ ಜಿಲ್ಲಾಧಿಕಾರಿ, ಶಾಸಕರಿಗೆ ಮನವಿ ಸಲ್ಲಿಸಲಾಗಿತ್ತು.

ಪ್ರತಿಭಟನೆ ನಡೆಸಿಯೂ ಗಮನ ಸೆಳೆಯುವ ಕೆಲಸ ಮಾಡಲಾಗಿತ್ತು. ಆದರೆ ೧೨ ವರ್ಷಗಳಿಂದ ಕಟ್ಟಡವನ್ನು ಪಡೆಯಲು ಸಾಧ್ಯವಾಗದೆ ಯುವ ಒಕ್ಕೂಟ ಪರಿತಪಿಸುತ್ತಿತ್ತು. ಜೂನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡು ಇತ್ತೀಚೆಗೆ ಉಸ್ತುವಾರಿ ಸಚಿವರು ಉದ್ಘಾಟಿಸಿದ್ದಾರೆ. ಜಿಲ್ಲಾ ಯುವ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಕಾಲೇಜನ್ನು ಜೂನಿಯರ್ ಕಾಲೇಜು ಆವರಣದಲ್ಲಿ ನಿರ್ಮಾಣವಾಗಿರುವ ನೂತನ ಕಟ್ಟಡಕ್ಕೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಒಕ್ಕೂಟಕ್ಕೆ ಕಡೆಗೂ ಕಟ್ಟಡ ದೊರಕಿದೆ. ಜಿಲ್ಲೆಯಲ್ಲಿ ಯುವಕರ ಸಂಘ, ಯುವತಿ ಮಂಡಳಿ, ಮಹಿಳಾ ಸಮಾಜ ಸೇರಿದಂತೆ ೨೫೦ಕ್ಕೂ ಅಽಕ ಸಂಘಗಳಿದ್ದು, ಯುವಭವನ ದೊರಕಿರುವು ದರಿಂದ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.

ಅ.೧೬ರಂದು ಯುವಜನೋತ್ಸವ:

ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಅ.೧೬ರಂದು ಮಡಿಕೇರಿಯಲ್ಲಿ ನಡೆಯಲಿದ್ದು, ಯುವ ಸಮೂಹಕ್ಕಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸಹಯೋಗದೊಂದಿಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸ್ಪರ್ಧೆಗಳು ನಡೆಯಲಿವೆ. ಆಸಕ್ತ ಸ್ಪರ್ಧಿಗಳು ಅಂದು ಬೆಳಿಗ್ಗೆ ೯.೩೦ ಗಂಟೆಯೊಳಗೆ ಹಾಜರಿದ್ದು ಹೆಸರು ನೋಂದಾಯಿಸಿಕೊಳ್ಳಬೇಕಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ ೯೫೯೧೧೩೭೨೭೫ ಅನ್ನು ಸಂಪರ್ಕಿಸಬಹುದು.

” ಯುವಭವನ ಕಟ್ಟಡವನ್ನು ಮಹಿಳಾ ಕಾಲೇಜಿಗೆ ಬಿಟ್ಟುಕೊಟ್ಟು ೧೨ ವರ್ಷಗಳಿಂದ ಸಮಸ್ಯೆ ಎದುರಿಸವಂತಾಗಿತ್ತು. ಇದೀಗ ಶಾಸಕರ ಮುತುವರ್ಜಿಯಿಂದಕಟ್ಟಡ ಮತ್ತರ ಯುವ ಒಕ್ಕೂಟಕ್ಕೆ ದೊರೆತಿದೆ. ಒಂದಷ್ಟು ಸಣ್ಣ ಪುಟ್ಟ ದುರಸ್ತಿ ಕಾರ್ಯ ಬಾಕಿ ಇದ್ದು, ದುರಸ್ತಿ ಮಾಡಿಕೊಡಲು ಶಾಸಕರಿಗೆ ಮನವಿ ಮಾಡಲಾಗಿದೆ. ಸ್ವಂತ ಕಟ್ಟಡ ದೊರಕಿರುವುದರಿಂದ ಸಭೆ, ಸಮಾರಂಭ ಸೇರಿದಂತೆ ಇನ್ನಿತರ ಚಟುವಟಿಕೆಗೆ ಅನುಕೂಲವಾಗಲಿದೆ.”

-ಪಿ.ಪಿ.ಸುಕುಮಾರ್, ಅಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ

ಆಂದೋಲನ ಡೆಸ್ಕ್

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

6 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

9 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

11 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

11 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

11 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

12 hours ago