Andolana originals

ಜಿಲ್ಲಾ ಯುವ ಒಕ್ಕೂಟದ ಕೈಸೇರಿದ ಯುವ ಭವನ

 ನವೀನ್ ಡಿಸೋಜ

ಮಹಿಳಾ ಕಾಲೇಜಿಗೆ ಕಟ್ಟಡ ಬಿಟ್ಟುಕೊಟ್ಟು ಪರಿತಪಿಸುತ್ತಿದ್ದ ಯುವ ಒಕ್ಕೂಟ; ಕಟ್ಟಡ ದೊರೆತಿರುವುದರಿಂದ ಕಾರ್ಯಚಟುವಟಿಕೆಗೆ ಅನುಕೂಲ 

ಮಡಿಕೇರಿ: ಕೊಡಗು ಜಿಯ ಯುವ ಜನತೆಗೆ ಮಾರ್ಗ ದರ್ಶನ, ವಿವಿಧ ತರಬೇತಿ ಮತ್ತು ಶಿಬಿರ ಆಯೋಜನೆ, ಯುವ ಸಮ್ಮೇಳನ, ಯುವಜನೋತ್ಸವ ಮತ್ತಿತರ ಕಾರ್ಯ ಕ್ರಮ ನಡೆಸಲೆಂದೇ ನಿರ್ಮಿಸಲಾಗಿದ್ದ ಯುವಭವನ ೧೨ ವರ್ಷಗಳ ಬಳಿಕ ಜಿಲ್ಲಾ ಯುವ ಒಕ್ಕೂಟದ ಕೈಸೇರಿದ್ದು, ಇನ್ನು ಮುಂದೆ ಕಾರ್ಯಚಟುವಟಿಕೆ ನಡೆಸಲು ಅನುಕೂಲವಾಗಲಿದೆ.

೨೦೦೪ರಲ್ಲಿ ಜಿಲ್ಲಾ ಯುವ ಭವನ ಕಟ್ಟಡ ನಿರ್ಮಾಣಕ್ಕಾಗಿ ಅಂದಿನ ಜಿಲ್ಲಾಧಿಕಾರಿಗಳು ಜಾಗ ಗುರುತು ಮಾಡಿದ್ದರು. ೨೦೦೫ರಲ್ಲಿ ಅಂದಿನ ಸಂಸದ ಡಿ.ವಿ.ಸದಾನಂದಗೌಡ ೧ ಲಕ್ಷ ರೂ. ಅನುದಾನ ನೀಡಿ ಭೂಮಿ ಪೂಜೆ ನೆರವೇರಿಸಿದ್ದರು. ೨೦೧೩ರಲ್ಲಿ ನಗರದ ಸುದರ್ಶನ ವೃತ್ತದ ಬಳಿ ಸುಸಜ್ಜಿತ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿತ್ತು.

೨೦೧೪-೧೫ನೇ ಸಾಲಿನಲ್ಲಿ ಮಡಿಕೇರಿ ನಗರದಲ್ಲಿ ಹೊಸದಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿತ್ತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಕಾಲೇಜು ಸ್ಥಾಪನೆಗೆ ವಿಶೇಷ ಮುತುವರ್ಜಿ ವಹಿಸಿದ್ದರು. ೨೦೧೪-೧೫ನೇ ಸಾಲಿನಲ್ಲಿ ಕಾಲೇಜು ಆರಂಭವಾದರೂ ಸ್ವಂತ ಕಟ್ಟಡವಿಲ್ಲದೆ, ಜಿಲ್ಲಾ ಯುವ ಒಕ್ಕೂಟಕ್ಕೆ ಸೇರಿದ ಯುವ ಭವನ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಕಾಲೇಜು ಆರಂಭಿಸಲಾಗಿತ್ತು.

ಬಳಿಕ ೧೨ ವರ್ಷಗಳು ಕಳೆದರೂ ಜಿಲ್ಲಾ ಯುವಭವನ ಯುವ ಒಕ್ಕೂಟದ ಕೈ ಸೇರದೆ ಮಾಸಿಕ ಸಭೆ, ವಿವಿಧ ಚಟುವಟಿಕೆ ನಡೆಸಲು ಸೂಕ್ತ ಸ್ಥಳವಿಲ್ಲದೆ ಬಾಡಿಗೆ ಕಟ್ಟಡಗಳಲ್ಲಿ ನಡೆಸುವಂತಾಗಿತ್ತು. ಕಟ್ಟಡ ಹಸ್ತಾಂತರಿಸುವಂತೆ ಸಾಕಷ್ಟು ಬಾರಿ ಜಿಲ್ಲಾಧಿಕಾರಿ, ಶಾಸಕರಿಗೆ ಮನವಿ ಸಲ್ಲಿಸಲಾಗಿತ್ತು.

ಪ್ರತಿಭಟನೆ ನಡೆಸಿಯೂ ಗಮನ ಸೆಳೆಯುವ ಕೆಲಸ ಮಾಡಲಾಗಿತ್ತು. ಆದರೆ ೧೨ ವರ್ಷಗಳಿಂದ ಕಟ್ಟಡವನ್ನು ಪಡೆಯಲು ಸಾಧ್ಯವಾಗದೆ ಯುವ ಒಕ್ಕೂಟ ಪರಿತಪಿಸುತ್ತಿತ್ತು. ಜೂನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡು ಇತ್ತೀಚೆಗೆ ಉಸ್ತುವಾರಿ ಸಚಿವರು ಉದ್ಘಾಟಿಸಿದ್ದಾರೆ. ಜಿಲ್ಲಾ ಯುವ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಕಾಲೇಜನ್ನು ಜೂನಿಯರ್ ಕಾಲೇಜು ಆವರಣದಲ್ಲಿ ನಿರ್ಮಾಣವಾಗಿರುವ ನೂತನ ಕಟ್ಟಡಕ್ಕೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಒಕ್ಕೂಟಕ್ಕೆ ಕಡೆಗೂ ಕಟ್ಟಡ ದೊರಕಿದೆ. ಜಿಲ್ಲೆಯಲ್ಲಿ ಯುವಕರ ಸಂಘ, ಯುವತಿ ಮಂಡಳಿ, ಮಹಿಳಾ ಸಮಾಜ ಸೇರಿದಂತೆ ೨೫೦ಕ್ಕೂ ಅಽಕ ಸಂಘಗಳಿದ್ದು, ಯುವಭವನ ದೊರಕಿರುವು ದರಿಂದ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.

ಅ.೧೬ರಂದು ಯುವಜನೋತ್ಸವ:

ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಅ.೧೬ರಂದು ಮಡಿಕೇರಿಯಲ್ಲಿ ನಡೆಯಲಿದ್ದು, ಯುವ ಸಮೂಹಕ್ಕಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸಹಯೋಗದೊಂದಿಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸ್ಪರ್ಧೆಗಳು ನಡೆಯಲಿವೆ. ಆಸಕ್ತ ಸ್ಪರ್ಧಿಗಳು ಅಂದು ಬೆಳಿಗ್ಗೆ ೯.೩೦ ಗಂಟೆಯೊಳಗೆ ಹಾಜರಿದ್ದು ಹೆಸರು ನೋಂದಾಯಿಸಿಕೊಳ್ಳಬೇಕಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ ೯೫೯೧೧೩೭೨೭೫ ಅನ್ನು ಸಂಪರ್ಕಿಸಬಹುದು.

” ಯುವಭವನ ಕಟ್ಟಡವನ್ನು ಮಹಿಳಾ ಕಾಲೇಜಿಗೆ ಬಿಟ್ಟುಕೊಟ್ಟು ೧೨ ವರ್ಷಗಳಿಂದ ಸಮಸ್ಯೆ ಎದುರಿಸವಂತಾಗಿತ್ತು. ಇದೀಗ ಶಾಸಕರ ಮುತುವರ್ಜಿಯಿಂದಕಟ್ಟಡ ಮತ್ತರ ಯುವ ಒಕ್ಕೂಟಕ್ಕೆ ದೊರೆತಿದೆ. ಒಂದಷ್ಟು ಸಣ್ಣ ಪುಟ್ಟ ದುರಸ್ತಿ ಕಾರ್ಯ ಬಾಕಿ ಇದ್ದು, ದುರಸ್ತಿ ಮಾಡಿಕೊಡಲು ಶಾಸಕರಿಗೆ ಮನವಿ ಮಾಡಲಾಗಿದೆ. ಸ್ವಂತ ಕಟ್ಟಡ ದೊರಕಿರುವುದರಿಂದ ಸಭೆ, ಸಮಾರಂಭ ಸೇರಿದಂತೆ ಇನ್ನಿತರ ಚಟುವಟಿಕೆಗೆ ಅನುಕೂಲವಾಗಲಿದೆ.”

-ಪಿ.ಪಿ.ಸುಕುಮಾರ್, ಅಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ

ಆಂದೋಲನ ಡೆಸ್ಕ್

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

9 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

22 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

24 hours ago