Andolana originals

ಜಿಲ್ಲಾ ಯುವ ಒಕ್ಕೂಟದ ಕೈಸೇರಿದ ಯುವ ಭವನ

 ನವೀನ್ ಡಿಸೋಜ

ಮಹಿಳಾ ಕಾಲೇಜಿಗೆ ಕಟ್ಟಡ ಬಿಟ್ಟುಕೊಟ್ಟು ಪರಿತಪಿಸುತ್ತಿದ್ದ ಯುವ ಒಕ್ಕೂಟ; ಕಟ್ಟಡ ದೊರೆತಿರುವುದರಿಂದ ಕಾರ್ಯಚಟುವಟಿಕೆಗೆ ಅನುಕೂಲ 

ಮಡಿಕೇರಿ: ಕೊಡಗು ಜಿಯ ಯುವ ಜನತೆಗೆ ಮಾರ್ಗ ದರ್ಶನ, ವಿವಿಧ ತರಬೇತಿ ಮತ್ತು ಶಿಬಿರ ಆಯೋಜನೆ, ಯುವ ಸಮ್ಮೇಳನ, ಯುವಜನೋತ್ಸವ ಮತ್ತಿತರ ಕಾರ್ಯ ಕ್ರಮ ನಡೆಸಲೆಂದೇ ನಿರ್ಮಿಸಲಾಗಿದ್ದ ಯುವಭವನ ೧೨ ವರ್ಷಗಳ ಬಳಿಕ ಜಿಲ್ಲಾ ಯುವ ಒಕ್ಕೂಟದ ಕೈಸೇರಿದ್ದು, ಇನ್ನು ಮುಂದೆ ಕಾರ್ಯಚಟುವಟಿಕೆ ನಡೆಸಲು ಅನುಕೂಲವಾಗಲಿದೆ.

೨೦೦೪ರಲ್ಲಿ ಜಿಲ್ಲಾ ಯುವ ಭವನ ಕಟ್ಟಡ ನಿರ್ಮಾಣಕ್ಕಾಗಿ ಅಂದಿನ ಜಿಲ್ಲಾಧಿಕಾರಿಗಳು ಜಾಗ ಗುರುತು ಮಾಡಿದ್ದರು. ೨೦೦೫ರಲ್ಲಿ ಅಂದಿನ ಸಂಸದ ಡಿ.ವಿ.ಸದಾನಂದಗೌಡ ೧ ಲಕ್ಷ ರೂ. ಅನುದಾನ ನೀಡಿ ಭೂಮಿ ಪೂಜೆ ನೆರವೇರಿಸಿದ್ದರು. ೨೦೧೩ರಲ್ಲಿ ನಗರದ ಸುದರ್ಶನ ವೃತ್ತದ ಬಳಿ ಸುಸಜ್ಜಿತ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡಿತ್ತು.

೨೦೧೪-೧೫ನೇ ಸಾಲಿನಲ್ಲಿ ಮಡಿಕೇರಿ ನಗರದಲ್ಲಿ ಹೊಸದಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಿಸಲು ಶಿಕ್ಷಣ ಇಲಾಖೆ ಅನುಮತಿ ನೀಡಿತ್ತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಕಾಲೇಜು ಸ್ಥಾಪನೆಗೆ ವಿಶೇಷ ಮುತುವರ್ಜಿ ವಹಿಸಿದ್ದರು. ೨೦೧೪-೧೫ನೇ ಸಾಲಿನಲ್ಲಿ ಕಾಲೇಜು ಆರಂಭವಾದರೂ ಸ್ವಂತ ಕಟ್ಟಡವಿಲ್ಲದೆ, ಜಿಲ್ಲಾ ಯುವ ಒಕ್ಕೂಟಕ್ಕೆ ಸೇರಿದ ಯುವ ಭವನ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಕಾಲೇಜು ಆರಂಭಿಸಲಾಗಿತ್ತು.

ಬಳಿಕ ೧೨ ವರ್ಷಗಳು ಕಳೆದರೂ ಜಿಲ್ಲಾ ಯುವಭವನ ಯುವ ಒಕ್ಕೂಟದ ಕೈ ಸೇರದೆ ಮಾಸಿಕ ಸಭೆ, ವಿವಿಧ ಚಟುವಟಿಕೆ ನಡೆಸಲು ಸೂಕ್ತ ಸ್ಥಳವಿಲ್ಲದೆ ಬಾಡಿಗೆ ಕಟ್ಟಡಗಳಲ್ಲಿ ನಡೆಸುವಂತಾಗಿತ್ತು. ಕಟ್ಟಡ ಹಸ್ತಾಂತರಿಸುವಂತೆ ಸಾಕಷ್ಟು ಬಾರಿ ಜಿಲ್ಲಾಧಿಕಾರಿ, ಶಾಸಕರಿಗೆ ಮನವಿ ಸಲ್ಲಿಸಲಾಗಿತ್ತು.

ಪ್ರತಿಭಟನೆ ನಡೆಸಿಯೂ ಗಮನ ಸೆಳೆಯುವ ಕೆಲಸ ಮಾಡಲಾಗಿತ್ತು. ಆದರೆ ೧೨ ವರ್ಷಗಳಿಂದ ಕಟ್ಟಡವನ್ನು ಪಡೆಯಲು ಸಾಧ್ಯವಾಗದೆ ಯುವ ಒಕ್ಕೂಟ ಪರಿತಪಿಸುತ್ತಿತ್ತು. ಜೂನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡು ಇತ್ತೀಚೆಗೆ ಉಸ್ತುವಾರಿ ಸಚಿವರು ಉದ್ಘಾಟಿಸಿದ್ದಾರೆ. ಜಿಲ್ಲಾ ಯುವ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಕಾಲೇಜನ್ನು ಜೂನಿಯರ್ ಕಾಲೇಜು ಆವರಣದಲ್ಲಿ ನಿರ್ಮಾಣವಾಗಿರುವ ನೂತನ ಕಟ್ಟಡಕ್ಕೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಒಕ್ಕೂಟಕ್ಕೆ ಕಡೆಗೂ ಕಟ್ಟಡ ದೊರಕಿದೆ. ಜಿಲ್ಲೆಯಲ್ಲಿ ಯುವಕರ ಸಂಘ, ಯುವತಿ ಮಂಡಳಿ, ಮಹಿಳಾ ಸಮಾಜ ಸೇರಿದಂತೆ ೨೫೦ಕ್ಕೂ ಅಽಕ ಸಂಘಗಳಿದ್ದು, ಯುವಭವನ ದೊರಕಿರುವು ದರಿಂದ ಚಟುವಟಿಕೆಗಳಿಗೆ ಅನುಕೂಲವಾಗಲಿದೆ.

ಅ.೧೬ರಂದು ಯುವಜನೋತ್ಸವ:

ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಅ.೧೬ರಂದು ಮಡಿಕೇರಿಯಲ್ಲಿ ನಡೆಯಲಿದ್ದು, ಯುವ ಸಮೂಹಕ್ಕಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸಹಯೋಗದೊಂದಿಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸ್ಪರ್ಧೆಗಳು ನಡೆಯಲಿವೆ. ಆಸಕ್ತ ಸ್ಪರ್ಧಿಗಳು ಅಂದು ಬೆಳಿಗ್ಗೆ ೯.೩೦ ಗಂಟೆಯೊಳಗೆ ಹಾಜರಿದ್ದು ಹೆಸರು ನೋಂದಾಯಿಸಿಕೊಳ್ಳಬೇಕಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ ೯೫೯೧೧೩೭೨೭೫ ಅನ್ನು ಸಂಪರ್ಕಿಸಬಹುದು.

” ಯುವಭವನ ಕಟ್ಟಡವನ್ನು ಮಹಿಳಾ ಕಾಲೇಜಿಗೆ ಬಿಟ್ಟುಕೊಟ್ಟು ೧೨ ವರ್ಷಗಳಿಂದ ಸಮಸ್ಯೆ ಎದುರಿಸವಂತಾಗಿತ್ತು. ಇದೀಗ ಶಾಸಕರ ಮುತುವರ್ಜಿಯಿಂದಕಟ್ಟಡ ಮತ್ತರ ಯುವ ಒಕ್ಕೂಟಕ್ಕೆ ದೊರೆತಿದೆ. ಒಂದಷ್ಟು ಸಣ್ಣ ಪುಟ್ಟ ದುರಸ್ತಿ ಕಾರ್ಯ ಬಾಕಿ ಇದ್ದು, ದುರಸ್ತಿ ಮಾಡಿಕೊಡಲು ಶಾಸಕರಿಗೆ ಮನವಿ ಮಾಡಲಾಗಿದೆ. ಸ್ವಂತ ಕಟ್ಟಡ ದೊರಕಿರುವುದರಿಂದ ಸಭೆ, ಸಮಾರಂಭ ಸೇರಿದಂತೆ ಇನ್ನಿತರ ಚಟುವಟಿಕೆಗೆ ಅನುಕೂಲವಾಗಲಿದೆ.”

-ಪಿ.ಪಿ.ಸುಕುಮಾರ್, ಅಧ್ಯಕ್ಷರು, ಜಿಲ್ಲಾ ಯುವ ಒಕ್ಕೂಟ

ಆಂದೋಲನ ಡೆಸ್ಕ್

Recent Posts

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

1 hour ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

7 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

7 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

7 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

7 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

8 hours ago