ಮೈಸೂರು: ಸ್ವರಗಳ ಸಂತ ಇಳಯರಾಜ ಸಂಗೀತ ಸುಧೆಯೊಂದಿಗೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಯುವ ದಸರಾ ಸಂಪನ್ನಗೊಂಡಿತು. ಸಂಗೀತದ ಮೋಡಿಗಾರನ ಗಾನಸುಧೆಯೊಂದಿಗೆ ಐದು ದಿನಗಳ ಯುವ ದಸರಾ ಸಂಭ್ರಮದಿಂದ ಮುಕ್ತಾಯಗೊಂಡಿತು.
ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಸಂಗೀತ ಕಾರ್ಯಕ್ರಮ ನೀಡಿದ ಇಳಯರಾಜ ನೆರೆದಿದ್ದ ಸಹಸ್ರಾರು ಜನರ ಮನಗೆದ್ದರು. ಗುರುವಾರ ಸಂಜೆ ಮಳೆಯ ಸಿಂಚನದೊಂದಿಗೆ ಇಳಯರಾಜ ತಂಡದ ಸಂಗೀತ ಕಾರ್ಯಕ್ರಮ ಆರಂಭಗೊಂಡಿತು. ಗಾಯನಕ್ಕೆ ಮನಸೋತ ವರುಣ ಕೃಪೆ ತೋರಿದ್ದರಿಂದ ಕೇಳುಗರು ನಾದಲೋಕದಲ್ಲಿ ಮಿಂದೆದ್ದರು. ಮಳೆಯನ್ನೂ ಲೆಕ್ಕಿಸದ ಜನತೆ ಕುಳಿತ ಜಾಗದಲ್ಲಿಯೇ ತಲೆದೂಗುತ್ತಾ ಶಿಳ್ಳೆ, ಚಪ್ಪಾಳೆ ಹೊಡೆಯುತ್ತಾ ಪ್ರೋತ್ಸಾಹಿಸಿದರು.
ತಂಡದ ಪರವಾಗಿ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್. ಪಿ. ಬಿ. ಚರಣ್ ಅವರು ಸಂತೋಷಕ್ಕೆ ಹಾಡು ಸಂತೋಷಕ್ಕೆ. . . ಎಂಬ ಗೀತೆ ಹಾಡುತ್ತಿದ್ದಂತೆ ನೆರೆದಿದ್ದವರೆಲ್ಲ ಚಳಿ, ತುಂತುರು ಮಳೆಯ ನಡುವೆಯೂ ಕುಣಿದು ಕುಪ್ಪಳಿಸಿದರು. ಅಲ್ಲದೇ ಎಂಥಾ ಸೌಂದರ್ಯ ನೋಡು ನಮ್ಮ ಕರುನಾಡ ಬೀಡು… ಎಂಬ ಗೀತೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾ ಯಿತು. ತಂಡದ ಕಲಾವಿದರು ಆಕಾಶದಿಂದ ಜಾರಿ ಭೂಮಿಗೆ ಬಂದ ನೋಡಿ ಗೀತೆಯನ್ನು ಪ್ರಸ್ತುತಪಡಿಸಿದರು. ಗಾಯಕಿ ಶ್ವೇತಾ ಮೋಹನ್, ಹೇಳೇ ಕೋಗಿಲೆ ಇಂಪಾಗಲಾ.. ಹೇಳೇ ಇಬ್ಬನಿ ತಂಪಾಗಲಾ… ಗೀತೆಯ ಮೂಲಕ ಸಂಗೀತ ಸುಧೆ ಹರಿಸಿದರು. ಈ ಸಂದರ್ಭದಲ್ಲಿ ಕೆಲವರು ಕೊಡೆಯನ್ನು ಹಿಡಿದೇ ಕುಣಿದು ಕುಪ್ಪಳಿಸಿದರು. ಬಳಿಕ ಕೇಳಿಬಂದ ಐ ಲವ್ ಯು.. ಜೀವ ಹೂ ಆಗಿದೆ… ಗೀತೆ ಸಂಗೀತಲೋಕವನ್ನೇ ಸೃಷ್ಟಿಸಿತು. ಸನ್ಮಾನ: ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ, ಪಶು ಸಂಗೋಪನ ಸಚಿವ ಕೆ. ವೆಂಕಟೇಶ್, ಸಂಸದ ಸುನಿಲ್ ಇನ್ನಿತರರು ಇಳಯರಾಜ ಅವರಿಗೆ ಮೈಸೂರು ಪೇಟಾ-ಶಾಲು ಹಾಕಿ ಸನ್ಮಾನಿಸಿದರು.
ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…
ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…