ಮೈಸೂರು: ಸ್ವರಗಳ ಸಂತ ಇಳಯರಾಜ ಸಂಗೀತ ಸುಧೆಯೊಂದಿಗೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಯುವ ದಸರಾ ಸಂಪನ್ನಗೊಂಡಿತು. ಸಂಗೀತದ ಮೋಡಿಗಾರನ ಗಾನಸುಧೆಯೊಂದಿಗೆ ಐದು ದಿನಗಳ ಯುವ ದಸರಾ ಸಂಭ್ರಮದಿಂದ ಮುಕ್ತಾಯಗೊಂಡಿತು.
ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಸಂಗೀತ ಕಾರ್ಯಕ್ರಮ ನೀಡಿದ ಇಳಯರಾಜ ನೆರೆದಿದ್ದ ಸಹಸ್ರಾರು ಜನರ ಮನಗೆದ್ದರು. ಗುರುವಾರ ಸಂಜೆ ಮಳೆಯ ಸಿಂಚನದೊಂದಿಗೆ ಇಳಯರಾಜ ತಂಡದ ಸಂಗೀತ ಕಾರ್ಯಕ್ರಮ ಆರಂಭಗೊಂಡಿತು. ಗಾಯನಕ್ಕೆ ಮನಸೋತ ವರುಣ ಕೃಪೆ ತೋರಿದ್ದರಿಂದ ಕೇಳುಗರು ನಾದಲೋಕದಲ್ಲಿ ಮಿಂದೆದ್ದರು. ಮಳೆಯನ್ನೂ ಲೆಕ್ಕಿಸದ ಜನತೆ ಕುಳಿತ ಜಾಗದಲ್ಲಿಯೇ ತಲೆದೂಗುತ್ತಾ ಶಿಳ್ಳೆ, ಚಪ್ಪಾಳೆ ಹೊಡೆಯುತ್ತಾ ಪ್ರೋತ್ಸಾಹಿಸಿದರು.
ತಂಡದ ಪರವಾಗಿ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್. ಪಿ. ಬಿ. ಚರಣ್ ಅವರು ಸಂತೋಷಕ್ಕೆ ಹಾಡು ಸಂತೋಷಕ್ಕೆ. . . ಎಂಬ ಗೀತೆ ಹಾಡುತ್ತಿದ್ದಂತೆ ನೆರೆದಿದ್ದವರೆಲ್ಲ ಚಳಿ, ತುಂತುರು ಮಳೆಯ ನಡುವೆಯೂ ಕುಣಿದು ಕುಪ್ಪಳಿಸಿದರು. ಅಲ್ಲದೇ ಎಂಥಾ ಸೌಂದರ್ಯ ನೋಡು ನಮ್ಮ ಕರುನಾಡ ಬೀಡು… ಎಂಬ ಗೀತೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾ ಯಿತು. ತಂಡದ ಕಲಾವಿದರು ಆಕಾಶದಿಂದ ಜಾರಿ ಭೂಮಿಗೆ ಬಂದ ನೋಡಿ ಗೀತೆಯನ್ನು ಪ್ರಸ್ತುತಪಡಿಸಿದರು. ಗಾಯಕಿ ಶ್ವೇತಾ ಮೋಹನ್, ಹೇಳೇ ಕೋಗಿಲೆ ಇಂಪಾಗಲಾ.. ಹೇಳೇ ಇಬ್ಬನಿ ತಂಪಾಗಲಾ… ಗೀತೆಯ ಮೂಲಕ ಸಂಗೀತ ಸುಧೆ ಹರಿಸಿದರು. ಈ ಸಂದರ್ಭದಲ್ಲಿ ಕೆಲವರು ಕೊಡೆಯನ್ನು ಹಿಡಿದೇ ಕುಣಿದು ಕುಪ್ಪಳಿಸಿದರು. ಬಳಿಕ ಕೇಳಿಬಂದ ಐ ಲವ್ ಯು.. ಜೀವ ಹೂ ಆಗಿದೆ… ಗೀತೆ ಸಂಗೀತಲೋಕವನ್ನೇ ಸೃಷ್ಟಿಸಿತು. ಸನ್ಮಾನ: ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ, ಪಶು ಸಂಗೋಪನ ಸಚಿವ ಕೆ. ವೆಂಕಟೇಶ್, ಸಂಸದ ಸುನಿಲ್ ಇನ್ನಿತರರು ಇಳಯರಾಜ ಅವರಿಗೆ ಮೈಸೂರು ಪೇಟಾ-ಶಾಲು ಹಾಕಿ ಸನ್ಮಾನಿಸಿದರು.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…