Andolana originals

ದಸರಾ ಮಹೋತ್ಸವದ ʼಯುವ ದಸರಾʼ ಸಂಪನ್ನ; ಮಳೆಗೆ ಸೆಡ್ಡು ಹೊಡೆದ ಇಳಯರಾಜ ಸಂಗೀತ

ಮೈಸೂರು: ಸ್ವರಗಳ ಸಂತ ಇಳಯರಾಜ ಸಂಗೀತ ಸುಧೆಯೊಂದಿಗೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಯುವ ದಸರಾ ಸಂಪನ್ನಗೊಂಡಿತು. ಸಂಗೀತದ ಮೋಡಿಗಾರನ ಗಾನಸುಧೆಯೊಂದಿಗೆ ಐದು ದಿನಗಳ ಯುವ ದಸರಾ ಸಂಭ್ರಮದಿಂದ ಮುಕ್ತಾಯಗೊಂಡಿತು.

ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಸಂಗೀತ ಕಾರ್ಯಕ್ರಮ ನೀಡಿದ ಇಳಯರಾಜ ನೆರೆದಿದ್ದ ಸಹಸ್ರಾರು ಜನರ ಮನಗೆದ್ದರು. ಗುರುವಾರ ಸಂಜೆ ಮಳೆಯ ಸಿಂಚನದೊಂದಿಗೆ ಇಳಯರಾಜ ತಂಡದ ಸಂಗೀತ ಕಾರ್ಯಕ್ರಮ ಆರಂಭಗೊಂಡಿತು. ಗಾಯನಕ್ಕೆ ಮನಸೋತ ವರುಣ ಕೃಪೆ ತೋರಿದ್ದರಿಂದ ಕೇಳುಗರು ನಾದಲೋಕದಲ್ಲಿ ಮಿಂದೆದ್ದರು. ಮಳೆಯನ್ನೂ ಲೆಕ್ಕಿಸದ ಜನತೆ ಕುಳಿತ ಜಾಗದಲ್ಲಿಯೇ ತಲೆದೂಗುತ್ತಾ ಶಿಳ್ಳೆ, ಚಪ್ಪಾಳೆ ಹೊಡೆಯುತ್ತಾ ಪ್ರೋತ್ಸಾಹಿಸಿದರು.

ತಂಡದ ಪರವಾಗಿ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್. ಪಿ. ಬಿ. ಚರಣ್ ಅವರು ಸಂತೋಷಕ್ಕೆ ಹಾಡು ಸಂತೋಷಕ್ಕೆ. . . ಎಂಬ ಗೀತೆ ಹಾಡುತ್ತಿದ್ದಂತೆ ನೆರೆದಿದ್ದವರೆಲ್ಲ ಚಳಿ, ತುಂತುರು ಮಳೆಯ ನಡುವೆಯೂ ಕುಣಿದು ಕುಪ್ಪಳಿಸಿದರು. ಅಲ್ಲದೇ ಎಂಥಾ ಸೌಂದರ್ಯ ನೋಡು ನಮ್ಮ ಕರುನಾಡ ಬೀಡು… ಎಂಬ ಗೀತೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾ ಯಿತು. ತಂಡದ ಕಲಾವಿದರು ಆಕಾಶದಿಂದ ಜಾರಿ ಭೂಮಿಗೆ ಬಂದ ನೋಡಿ ಗೀತೆಯನ್ನು ಪ್ರಸ್ತುತಪಡಿಸಿದರು. ಗಾಯಕಿ ಶ್ವೇತಾ ಮೋಹನ್, ಹೇಳೇ ಕೋಗಿಲೆ ಇಂಪಾಗಲಾ.. ಹೇಳೇ ಇಬ್ಬನಿ ತಂಪಾಗಲಾ… ಗೀತೆಯ ಮೂಲಕ ಸಂಗೀತ ಸುಧೆ ಹರಿಸಿದರು. ಈ ಸಂದರ್ಭದಲ್ಲಿ ಕೆಲವರು ಕೊಡೆಯನ್ನು ಹಿಡಿದೇ ಕುಣಿದು ಕುಪ್ಪಳಿಸಿದರು. ಬಳಿಕ ಕೇಳಿಬಂದ ಐ ಲವ್ ಯು.. ಜೀವ ಹೂ ಆಗಿದೆ… ಗೀತೆ ಸಂಗೀತಲೋಕವನ್ನೇ ಸೃಷ್ಟಿಸಿತು. ಸನ್ಮಾನ: ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ, ಪಶು ಸಂಗೋಪನ ಸಚಿವ ಕೆ. ವೆಂಕಟೇಶ್, ಸಂಸದ ಸುನಿಲ್ ಇನ್ನಿತರರು ಇಳಯರಾಜ ಅವರಿಗೆ ಮೈಸೂರು ಪೇಟಾ-ಶಾಲು ಹಾಕಿ ಸನ್ಮಾನಿಸಿದರು.

 

 

andolana

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

44 mins ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago