Andolana originals

ಉತ್ತನಹಳ್ಳಿಯಲ್ಲೇ ಯುವ ದಸರಾ ಜೋಶ್

ಕೆ.ಬಿ.ರಮೇಶನಾಯಕ

ಸೆ.೨೩ರಿಂದ ೨೭ ರವರೆಗೆ ಐದು ದಿನಗಳ ಕಾಲ ಖ್ಯಾತನಾಮರ ಸಂಗೀತ ಕಾರ್ಯಕ್ರಮ 

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಲಕ್ಷಾಂತರ ಯುವ ಸಮೂಹವನ್ನು ಕುಣಿದು ಕುಪ್ಪಳಿಸುವಂತೆ ಮಾಡುವ ಯುವ ದಸರಾ ಕಾರ್ಯಕ್ರಮ ಈ ಬಾರಿಯೂ ರಿಂಗ್ ರಸ್ತೆಯಲ್ಲಿರುವ ಉತ್ತನಹಳ್ಳಿ ಸಮೀಪ ನಡೆಯಲಿದೆ. ಇದರಿಂದಾಗಿ ಹಲವು ದಿನ ಗಳಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿದೆಯೇ ಅಥವಾ ಉತ್ತನಹಳ್ಳಿ ಗ್ರಾಮದ ಬಳಿ ನಡೆ ಯುವುದೇ ಎನ್ನುವ ಬಗ್ಗೆ ಉಂಟಾಗಿದ್ದ ಕುತೂಹಲ, ಗೊಂದಲಕ್ಕೆ ತೆರೆ ಬಿದ್ದಂತಾಗಿದೆ.

ಕಳೆದ ವರ್ಷ ಹೆಸರಾಂತ ಸಂಗೀತ ನಿರ್ದೇಶಕರಾದ ಇಳಯ ರಾಜ, ಎ.ಆರ್.ರೆಹಮಾನ್ಕಾರ್ಯಕ್ರಮ ನಡೆಸಿ ಕೊಟ್ಟಿದ್ದ ಜಾಗದಲ್ಲೇ ಈ ಬಾರಿ ಹಾಲಿವುಡ್, ಬಾಲಿವುಡ್ ಗಾಯಕರು ಮೋಡಿ ಮಾಡಲಿದ್ದು, ಕಲಾವಿದರ ದಿನಾಂಕ ನಿಗದಿಯಾಗಿದೆ. ಯುವ ದಸರಾ ಉಪ ಸಮಿತಿ ಪದಾಧಿಕಾರಿಗಳು ಈಗಾಗಲೇ ಕಲಾವಿದರ ಜೊತೆಗೆ ಮಾತುಕತೆ ನಡೆಸಿ ದಿನಾಂಕ ನಿಗದಿಪಡಿಸಿದ್ದು, ಶೀಘ್ರದಲ್ಲೇ ಅಂತಿಮ ಹಂತಕ್ಕೆ ಬರಲಿದೆ ಎಂದು ಹೇಳಲಾಗಿದೆ.

ಐದು ದಿನಗಳ ಕಾಲ ಮೋಡಿ: ಸೆ.೨೩ರಿಂದ ೨೭ರವರೆಗೆ ಐದು ದಿನಗಳ ಕಾಲ ಯುವ ದಸರಾ ನಡೆಯಲಿದ್ದು, ಮೊದಲನೇ ದಿನವೇ ಅರ್ಜುನ್ ಜನ್ಯ ನೇತೃತ್ವದ ಸ್ಯಾಂಡಲ್‌ವುಡ್ ಕಲಾವಿದರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸೆ.೨೪ರಂದು ಪ್ರೀತಂ ಚಕ್ರವರ್ತಿ, ಸೆ.೨೫ರಂದು ಜುಬಿನ್ ನೌಟಿಯಾ, ೨೬ರಂದು ದೇವಿಶ್ರೀ ಪ್ರಸಾದ್, ೨೭ರಂದು ಸುನಿಧಿ ಚೌಹಾಣ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸ್ಯಾಂಡಲ್‌ವೈಟ್ ನೈಟ್‌ನಲ್ಲಿ ಸಾಧುಕೋಕಿಲ ತಂಡ ಸೇರಿದಂತೆ ಅನೇಕ ತಂಡಗಳು ಕಾರ್ಯಕ್ರಮ ನಡೆಸಿದ್ದು, ಅರ್ಜುನ್ ಜನ್ಯ ಅವರಿಗೆ ಮೊದಲನೆಯದಾಗಿದೆ ಎಂದು ಹೇಳಲಾಗಿದೆ.

ಸಿದ್ಧತಾ ಕಾರ್ಯ ಶೀಘ್ರ ಆರಂಭ: ಉತ್ತನಹಳ್ಳಿ ಸಮೀಪದ ದೇವಲಾಪುರ ಗ್ರಾಮದ ಮಾರ್ಗದಲ್ಲಿ ನೂರು ಎಕರೆ ವಿಶಾಲ ಪ್ರದೇಶದಲ್ಲಿವೇದಿಕೆ ನಿರ್ಮಾಣ ಮಾಡುವ ಕಾರ್ಯ ಶೀಘ್ರ ಶುರುವಾಗಲಿದೆ. ಐದು ಸಾವಿರ ಮಂದಿ ಪ್ರಾಯೋಜಕತ್ವದವರು, ಐದು ಸಾವಿರ ಅಧಿಕಾರಿಗಳ ವರ್ಗ, ಜನಪ್ರತಿನಿಧಿಗಳು, ಪಾಸ್ ಹೊಂದಿರುವವರು, ೩೦ರಿಂದ ೫೦ ಸಾವಿರ ಮಂದಿ ಕುಳಿತು ವೀಕ್ಷಣೆ ಮಾಡುವ ರೀತಿಯಲ್ಲಿ ಶಾಮಿಯಾನ ಹಾಕಲಾಗುತ್ತದೆ ಎಂದು ಅಧಿಕಾರಿಗಳ ಮೂಲಗಳು ಖಚಿತಪಡಿಸಿವೆ. ಕಳೆದ ಬಾರಿ ಯುವ ದಸರೆಗೆ ಹದಿನೈದು ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದ್ದು, ಈ ಬಾರಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

” ಈ ಬಾರಿಯೂ ಯುವ ದಸರೆಯು ಉತ್ತನಹಳ್ಳಿ ಗ್ರಾಮದ ಸಮೀಪದಲ್ಲೇ ನಡೆಯಲಿದೆ. ಐದು ದಿನಗಳ ಕಾಲ ಹೆಸರಾಂತ ಕಲಾವಿದರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಶೀಘ್ರದಲ್ಲೇ ವೇದಿಕೆ ನಿರ್ಮಾಣ ಮಾಡಲಾಗುತ್ತದೆ. ಪ್ರಾಯೋಜಕತ್ವ ವಹಿಸಿಕೊಳ್ಳುವಂತೆ ಕೆಲವರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ.”

ಕೆ.ಆರ್.ರಕ್ಷಿತ್, ಆಯುಕ್ತರು, ಎಂಡಿಎ

ಪ್ರಾಯೋಜಕತ್ವಕ್ಕೆ ಮೊರೆ: ನಾಡಹಬ್ಬಕ್ಕೆ ರಾಜ್ಯಸರ್ಕಾರ ಉದಾರವಾಗಿ ಅನುದಾನ ನೀಡಿದರೂ ಯುವ ದಸರಾ ಉಪ ಸಮಿತಿಯು ಪ್ರಾಯೋಜಕತ್ವದ ಮೂಲಕ ಒಂದಿಷ್ಟು ಹಣ ಸಂಗ್ರಹಿಸಲು ಪ್ಲಾನ್ ಮಾಡಿದೆ. ದೊಡ್ಡ ದೊಡ್ಡಕಂಪೆನಿಗಳು, ಕಾರ್ಖಾನೆಗಳು, ಬಿಲ್ಡರ‍್ಸ್ ಸಂಸ್ಥೆಗಳು ಸೇರಿದಂತೆ ಇನ್ನಿತರ ಅಂದರೆ ೫ ರಿಂದ ೨೫ ಲಕ್ಷ ರೂ. ತನಕ ಪ್ರಾಯೋಜಕತ್ವ ನೀಡುವಂತಹ ಸಂಸ್ಥೆಗಳ ಮೊರೆ  ಹೋಗಲಾಗಿದೆ.

ಆಂದೋಲನ ಡೆಸ್ಕ್

Recent Posts

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

24 mins ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

3 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

6 hours ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

9 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

9 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

9 hours ago