ಓದುಗರ ಪತ್ರ
ನಾಡ ಹಬ್ಬ ದಸರಾ ಕಾರ್ಯಕ್ರಮಗಳಲ್ಲಿ ಯುವ ದಸರಾ ಕಾರ್ಯಕ್ರಮ ಯುವ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಪ್ರತಿ ವರ್ಷ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಸಲಾಗುತ್ತಿತ್ತು. ಆದರೆ ಕಳೆದ ವರ್ಷ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ಕರೆಸಿದಕ್ಕೆ ಹೆಚ್ಚು ಜನ ಸೇರಲಿ ಎಂದು ಉತ್ತನಹಳ್ಳಿ ಸಮೀಪ ಏರ್ಪಡಿಸಲಾಗಿತ್ತು.
ಈ ಬಾರಿ ಮೊದಲಿನಂತೆಯೇ ಮಹಾರಾಜ ಕಾಲೇಜು ಮೈದಾನದಲ್ಲೇ ಯುವ ದಸರಾ ಕಾರ್ಯಕ್ರಮವನ್ನು ಏರ್ಪಡಿಸಿದರೆ ಕಾಲೇಜು ವಿದ್ಯಾರ್ಥಿಗಳು, ಹಾಸ್ಟೆಲ್ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸುತ್ತಾರೆ. ಈ ಬಾರಿಯೂ ಉತ್ತನಹಳ್ಳಿ ಬಳಿ ಯುವ ದಸರಾ ಏರ್ಪಡಿಸಿದರೆ ಕಾಲೇಜು ವಿದ್ಯಾರ್ಥಿಗಳು, ಹಾಸ್ಟೆಲ್ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ, ಹಿರಿಯ ನಾಗರಿಕರಿಗೆ ತುಂಬಾ ತೊಂದರೆಯಾಗುತ್ತದೆ. ಏಕೆಂದರೆ ಎಲ್ಲರ ಬಳಿಯೂ ವಾಹನ ಸೌಕರ್ಯ ಇರುವುದಿಲ್ಲ. ಆಟೋ ಪ್ರಯಾಣ ದರ ತುಂಬಾ ದುಬಾರಿ.
ಕಾರ್ಯಕ್ರಮವು ನಗರದ ಹೊರ ಭಾಗದಲ್ಲಿ ನಡೆಯುವುದರಿಂದ ಕುಟುಂಬದವರೆಲ್ಲ ಒಟ್ಟಾಗಿ ಭಾಗವಹಿಸಿ ಕಾರ್ಯಕ್ರಮ ನೋಡಲು ತುಂಬಾ ಕಷ್ಟವಾಗುತ್ತದೆ. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಈ ಬಗ್ಗೆ ಗಮನ ಹರಿಸಿ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿಯೇ ಆಯೋಜಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಅಹಲ್ಯ ಸಿ. ನಾ. ಚಂದ್ರ, ಜನತಾ ನಗರ, ಮೈಸೂರು
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…
ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…
2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…
ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…
ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…