ಓದುಗರ ಪತ್ರ
ನಾಡ ಹಬ್ಬ ದಸರಾ ಕಾರ್ಯಕ್ರಮಗಳಲ್ಲಿ ಯುವ ದಸರಾ ಕಾರ್ಯಕ್ರಮ ಯುವ ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಪ್ರತಿ ವರ್ಷ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಸಲಾಗುತ್ತಿತ್ತು. ಆದರೆ ಕಳೆದ ವರ್ಷ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ಕರೆಸಿದಕ್ಕೆ ಹೆಚ್ಚು ಜನ ಸೇರಲಿ ಎಂದು ಉತ್ತನಹಳ್ಳಿ ಸಮೀಪ ಏರ್ಪಡಿಸಲಾಗಿತ್ತು.
ಈ ಬಾರಿ ಮೊದಲಿನಂತೆಯೇ ಮಹಾರಾಜ ಕಾಲೇಜು ಮೈದಾನದಲ್ಲೇ ಯುವ ದಸರಾ ಕಾರ್ಯಕ್ರಮವನ್ನು ಏರ್ಪಡಿಸಿದರೆ ಕಾಲೇಜು ವಿದ್ಯಾರ್ಥಿಗಳು, ಹಾಸ್ಟೆಲ್ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸುತ್ತಾರೆ. ಈ ಬಾರಿಯೂ ಉತ್ತನಹಳ್ಳಿ ಬಳಿ ಯುವ ದಸರಾ ಏರ್ಪಡಿಸಿದರೆ ಕಾಲೇಜು ವಿದ್ಯಾರ್ಥಿಗಳು, ಹಾಸ್ಟೆಲ್ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ, ಹಿರಿಯ ನಾಗರಿಕರಿಗೆ ತುಂಬಾ ತೊಂದರೆಯಾಗುತ್ತದೆ. ಏಕೆಂದರೆ ಎಲ್ಲರ ಬಳಿಯೂ ವಾಹನ ಸೌಕರ್ಯ ಇರುವುದಿಲ್ಲ. ಆಟೋ ಪ್ರಯಾಣ ದರ ತುಂಬಾ ದುಬಾರಿ.
ಕಾರ್ಯಕ್ರಮವು ನಗರದ ಹೊರ ಭಾಗದಲ್ಲಿ ನಡೆಯುವುದರಿಂದ ಕುಟುಂಬದವರೆಲ್ಲ ಒಟ್ಟಾಗಿ ಭಾಗವಹಿಸಿ ಕಾರ್ಯಕ್ರಮ ನೋಡಲು ತುಂಬಾ ಕಷ್ಟವಾಗುತ್ತದೆ. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಈ ಬಗ್ಗೆ ಗಮನ ಹರಿಸಿ ಯುವ ದಸರಾ ಕಾರ್ಯಕ್ರಮವನ್ನು ಮಹಾರಾಜ ಕಾಲೇಜು ಮೈದಾನದಲ್ಲಿಯೇ ಆಯೋಜಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಅಹಲ್ಯ ಸಿ. ನಾ. ಚಂದ್ರ, ಜನತಾ ನಗರ, ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…