Andolana originals

ಯುವನಿಧಿ: ಕೊಡಗಿನಲ್ಲಿ 1711 ಮಂದಿ ನೋಂದಣಿ

೨೦೨೫ರ ನೋಂದಣಿ ಪ್ರಕ್ರಿಯೆ ಪ್ರಾರಂಭ; ಅಗತ್ಯ ದಾಖಲಾತಿಗಳೊಂದಿಗೆ ಅರ್ಹರು ನೋಂದಾಯಿಸಿಕೊಳ್ಳಲು ಮನವಿ

ನವೀನ್ ಡಿಸೋಜ

ಮಡಿಕೇರಿ: ೨೦೨೫ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸುಮಾರು ೧,೭೦೦ ಮಂದಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.

೨೦೨೪ರ ಜನವರಿಯಿಂದ ೨೦೨೫ ಜುಲೈವರೆಗೆ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ೧,೭೧೧ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ ೪೬೬, ಪೊನ್ನಂಪೇಟೆ ತಾಲ್ಲೂಕಿನಲ್ಲಿ ೧೯೩, ಕುಶಾಲನಗರ ತಾಲ್ಲೂಕಿನಲ್ಲಿ ೨೬೯, ಸೋಮವಾರಪೇಟೆ ತಾಲ್ಲೂಕಿನಲ್ಲಿ ೪೮೩, ವಿರಾಜಪೇಟೆ ತಾಲ್ಲೂಕಿನಲ್ಲಿ ೩೦೦ ಮಂದಿ ಹೆಸರು ನೋಂದಾಯಿಸಿಕೊಂಡಿದ್ದು, ಯುವನಿಧಿ ಸೌಲಭ್ಯ ಪಡೆಯುತ್ತಿದ್ದಾರೆ.

ಪದವಿ ಹಾಗೂ ಸ್ನಾತಕೋತ್ತರ ಪದವಿ ನಿರುದ್ಯೋಗಿಗಳಿಗೆ ಮೂರು ಸಾವಿರ ರೂ. ಹಾಗೂ ಡಿಪ್ಲೊಮೊ ತೇರ್ಗಡೆಯಾದವರಿಗೆ ಪ್ರತಿ ತಿಂಗಳು ೧,೫೦೦ ರೂ. ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತಿದೆ. ೨೦೨೫ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಈ ಯೋಜನೆಗೆ ಅರ್ಹರು ಹೆಸರು ನೋಂದಣಿ ಮಾಡಿಕೊಳ್ಳಬೇಕಿದೆ.

೨೦೨೩, ೨೦೨೪ ಹಾಗೂ ೨೦೨೫ರಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮೊ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಹರಾಗಿದ್ದು, ಫಲಿತಾಂಶ ಪ್ರಕಟವಾದ ೧೮೦ ದಿನಗಳ ನಂತರವೂ ಸಾರ್ವಜನಿಕ, ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿ ಇರದವರು, ಸ್ವಯಂ ಉದ್ಯೋಗದಲ್ಲಿ ಇರದವರು ಅರ್ಹರಾಗಿದ್ದಾರೆ. ಉನ್ನತ ವ್ಯಾಸಂಗ ಮುಂದುವರಿಸದೆ ಇರುವವರು ಹಾಗೂ ಕನಿಷ್ಠ ೬ ವರ್ಷ ಕರ್ನಾಟಕ ನಿವಾಸಿಯಾಗಿರುವವರು ಅರ್ಹರಾಗಿದ್ದಾರೆ.

ಯುವನಿಧೀ ಪ್ಲಸ್ ಕೌಶಲ ತರಬೇತಿ ಕಾರ್ಯಕ್ರಮದಡಿ ಯುವನಿಧಿ ಫಲಾನುಭವಿಗಳು ಉಚಿತ ಕೌಶಲ ತರಬೇತಿ ಕೂಡ ಪಡೆಯಬಹುದಾಗಿದೆ. ಈ ಸೌಲಭ್ಯ ಪಡೆಯಲು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವೆಬ್‌ಸೈಟ್ www. kaushalkar.com ಮೂಲಕ ನೋಂದಾಯಿಸಿಕೊಳ್ಳಬಹು ದಾಗಿದೆ. ಜಿಟಿಟಿಸಿ, ಕೆಜಿಟಿಟಿಐ, ಸಿಡಾಕ್, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಮುಖಾಂತರ ಸಿಎಂಕೆಕೆವೈ ಯೋಜನೆಯಡಿ ಉಚಿತ ಕೌಶಲ ತರಬೇತಿ ನೀಡಲಾಗುತ್ತದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ಡಿಪ್ಲೊಮೊ ಪ್ರಮಾಣಪತ್ರ ಸೇರಿದಂತೆ ನೋಂದಣಿಗೆ ಅಗತ್ಯ ದಾಖಲಾತಿ ಒದಗಿಸಬೇಕು. ಪ್ರತಿ ತ್ರೈಮಾಸಿಕ ೧ರಿಂದ ೨೫ರೊಳಗೆ ಸ್ವಯಂ ಘೋಷಣೆ ನೀಡುವುದು,ನೋಂದಾಯಿಸಿಕೊಳ್ಳಲು ಸೇವಾಸಿಂಧು ಪೋರ್ಟಲ್ಬಳಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ೧೮೦೦-೫೯೯-೭೧೫೪ಅನ್ನು ಸಂಪರ್ಕಿಸಬಹುದು. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮೊ ಪ್ರಮಾಣ ಪತ್ರಗಳನ್ನು ನ್ಯಾಡ್ ಪೋರ್ಟಲ್‌ನಲ್ಲಿ ಇಂಡೀಕರಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು.

” ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ೨೦೨೪ರ ಜ.೧ರಂದು ಯುವನಿಧಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಪ್ರತಿ ತಿಂಗಳು ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತಿದೆ. ಆ ನಿಟ್ಟಿನಲ್ಲಿ ೨೦೨೫ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.”

-ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ

” ಯುವನಿಧಿ ಯೋಜನೆಯಡಿ ಪದವಿ ಹಾಗೂ ಸ್ನಾತಕೋತ್ತರ ಪದವಿ ನಿರುದ್ಯೋಗಿಗಳಿಗೆ ಮೂರು ಸಾವಿರ ರೂ. ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ ೧,೫೦೦ ರೂ.ಗಳನ್ನು ನೀಡಲಾಗುತ್ತಿದೆ. ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಹೆಸರು ನೋಂದಾಯಿಸುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು.”

-ಮಂಜುನಾಥ್, ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

2 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

2 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

2 hours ago

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

5 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

5 hours ago