Andolana originals

ಯುವನಿಧಿ: ಕೊಡಗಿನಲ್ಲಿ 1711 ಮಂದಿ ನೋಂದಣಿ

೨೦೨೫ರ ನೋಂದಣಿ ಪ್ರಕ್ರಿಯೆ ಪ್ರಾರಂಭ; ಅಗತ್ಯ ದಾಖಲಾತಿಗಳೊಂದಿಗೆ ಅರ್ಹರು ನೋಂದಾಯಿಸಿಕೊಳ್ಳಲು ಮನವಿ

ನವೀನ್ ಡಿಸೋಜ

ಮಡಿಕೇರಿ: ೨೦೨೫ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಜಿಲ್ಲೆಯಲ್ಲಿ ಸುಮಾರು ೧,೭೦೦ ಮಂದಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.

೨೦೨೪ರ ಜನವರಿಯಿಂದ ೨೦೨೫ ಜುಲೈವರೆಗೆ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ೧,೭೧೧ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ ೪೬೬, ಪೊನ್ನಂಪೇಟೆ ತಾಲ್ಲೂಕಿನಲ್ಲಿ ೧೯೩, ಕುಶಾಲನಗರ ತಾಲ್ಲೂಕಿನಲ್ಲಿ ೨೬೯, ಸೋಮವಾರಪೇಟೆ ತಾಲ್ಲೂಕಿನಲ್ಲಿ ೪೮೩, ವಿರಾಜಪೇಟೆ ತಾಲ್ಲೂಕಿನಲ್ಲಿ ೩೦೦ ಮಂದಿ ಹೆಸರು ನೋಂದಾಯಿಸಿಕೊಂಡಿದ್ದು, ಯುವನಿಧಿ ಸೌಲಭ್ಯ ಪಡೆಯುತ್ತಿದ್ದಾರೆ.

ಪದವಿ ಹಾಗೂ ಸ್ನಾತಕೋತ್ತರ ಪದವಿ ನಿರುದ್ಯೋಗಿಗಳಿಗೆ ಮೂರು ಸಾವಿರ ರೂ. ಹಾಗೂ ಡಿಪ್ಲೊಮೊ ತೇರ್ಗಡೆಯಾದವರಿಗೆ ಪ್ರತಿ ತಿಂಗಳು ೧,೫೦೦ ರೂ. ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತಿದೆ. ೨೦೨೫ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಈ ಯೋಜನೆಗೆ ಅರ್ಹರು ಹೆಸರು ನೋಂದಣಿ ಮಾಡಿಕೊಳ್ಳಬೇಕಿದೆ.

೨೦೨೩, ೨೦೨೪ ಹಾಗೂ ೨೦೨೫ರಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮೊ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಹರಾಗಿದ್ದು, ಫಲಿತಾಂಶ ಪ್ರಕಟವಾದ ೧೮೦ ದಿನಗಳ ನಂತರವೂ ಸಾರ್ವಜನಿಕ, ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿ ಇರದವರು, ಸ್ವಯಂ ಉದ್ಯೋಗದಲ್ಲಿ ಇರದವರು ಅರ್ಹರಾಗಿದ್ದಾರೆ. ಉನ್ನತ ವ್ಯಾಸಂಗ ಮುಂದುವರಿಸದೆ ಇರುವವರು ಹಾಗೂ ಕನಿಷ್ಠ ೬ ವರ್ಷ ಕರ್ನಾಟಕ ನಿವಾಸಿಯಾಗಿರುವವರು ಅರ್ಹರಾಗಿದ್ದಾರೆ.

ಯುವನಿಧೀ ಪ್ಲಸ್ ಕೌಶಲ ತರಬೇತಿ ಕಾರ್ಯಕ್ರಮದಡಿ ಯುವನಿಧಿ ಫಲಾನುಭವಿಗಳು ಉಚಿತ ಕೌಶಲ ತರಬೇತಿ ಕೂಡ ಪಡೆಯಬಹುದಾಗಿದೆ. ಈ ಸೌಲಭ್ಯ ಪಡೆಯಲು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವೆಬ್‌ಸೈಟ್ www. kaushalkar.com ಮೂಲಕ ನೋಂದಾಯಿಸಿಕೊಳ್ಳಬಹು ದಾಗಿದೆ. ಜಿಟಿಟಿಸಿ, ಕೆಜಿಟಿಟಿಐ, ಸಿಡಾಕ್, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಮುಖಾಂತರ ಸಿಎಂಕೆಕೆವೈ ಯೋಜನೆಯಡಿ ಉಚಿತ ಕೌಶಲ ತರಬೇತಿ ನೀಡಲಾಗುತ್ತದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ಡಿಪ್ಲೊಮೊ ಪ್ರಮಾಣಪತ್ರ ಸೇರಿದಂತೆ ನೋಂದಣಿಗೆ ಅಗತ್ಯ ದಾಖಲಾತಿ ಒದಗಿಸಬೇಕು. ಪ್ರತಿ ತ್ರೈಮಾಸಿಕ ೧ರಿಂದ ೨೫ರೊಳಗೆ ಸ್ವಯಂ ಘೋಷಣೆ ನೀಡುವುದು,ನೋಂದಾಯಿಸಿಕೊಳ್ಳಲು ಸೇವಾಸಿಂಧು ಪೋರ್ಟಲ್ಬಳಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ೧೮೦೦-೫೯೯-೭೧೫೪ಅನ್ನು ಸಂಪರ್ಕಿಸಬಹುದು. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮೊ ಪ್ರಮಾಣ ಪತ್ರಗಳನ್ನು ನ್ಯಾಡ್ ಪೋರ್ಟಲ್‌ನಲ್ಲಿ ಇಂಡೀಕರಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು.

” ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ೨೦೨೪ರ ಜ.೧ರಂದು ಯುವನಿಧಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಪ್ರತಿ ತಿಂಗಳು ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತಿದೆ. ಆ ನಿಟ್ಟಿನಲ್ಲಿ ೨೦೨೫ರ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.”

-ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ

” ಯುವನಿಧಿ ಯೋಜನೆಯಡಿ ಪದವಿ ಹಾಗೂ ಸ್ನಾತಕೋತ್ತರ ಪದವಿ ನಿರುದ್ಯೋಗಿಗಳಿಗೆ ಮೂರು ಸಾವಿರ ರೂ. ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ ೧,೫೦೦ ರೂ.ಗಳನ್ನು ನೀಡಲಾಗುತ್ತಿದೆ. ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಹೆಸರು ನೋಂದಾಯಿಸುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು.”

-ಮಂಜುನಾಥ್, ಜಿಲ್ಲಾ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧಿಕಾರಿ

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

2 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

3 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

4 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

4 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

5 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago