Andolana originals

ʼಪಿ.ಪಟ್ಟಣಕ್ಕೆ ವಲಯ ಅರಣ್ಯ ಅಧಿಕಾರಿ ಕಚೇರಿ ಸ್ಥಳಾಂತರಿಸಿʼ

ಮಹೇಶ ಕೋಗಿಲವಾಡಿ

ಪಿರಿಯಾಪಟ್ಟಣ: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಕಚೇರಿಯನ್ನು ಪಿರಿಯಾಪಟ್ಟಣ ತಾಲ್ಲೂಕಿಗೆ ವರ್ಗಾವಣೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕು ಕೊಡಗಿನ ಗಡಿಭಾಗಕ್ಕೆ ಹೊಂದಿಕೊಂಡಂತಿದ್ದು, ಅರೆ ಮಲೆನಾಡು ಪ್ರದೇಶವಾಗಿದೆ. ಅತಿ ಹೆಚ್ಚಿನ ಅರಣ್ಯ ಪ್ರದೇಶವನ್ನು ಒಳಗೊಂಡಿರುವ ತಾಲ್ಲೂಕು ಇದಾಗಿದ್ದು, 60 ಕಿ.ಮೀ. ವ್ಯಾಪ್ತಿಗಳಲ್ಲಿ ನೂರಕ್ಕೂ ಹೆಚ್ಚು ಗ್ರಾಮಗಳು ಅರಣ್ಯದ ಅಂಚಿನಲ್ಲಿವೆ. 30ಕ್ಕೂ ಹೆಚ್ಚು ಹಾಡಿಗಳು ನಾಗರಹೊಳೆ ವನ್ಯಜೀವಿ ಅರಣ್ಯ ಪ್ರದೇಶದಲ್ಲಿವೆ.

ಇಷ್ಟೆಲ್ಲಾ ವನ್ಯಜೀವಿ ವಲಯ, ಅರಣ್ಯ ಪ್ರದೇಶ ಇಲ್ಲಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ವನ್ಯಜೀವಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಇಲ್ಲದೆ ಹುಣಸೂರು ತಾಲ್ಲೂಕಿನಲ್ಲಿ ಕಚೇರಿ ನಿರ್ಮಾಣ ಮಾಡಿರುವುದರಿಂದ ಪಿರಿಯಾಪಟ್ಟಣ ತಾಲ್ಲೂಕಿನ ರೈತರು ಮತ್ತು ಸಾರ್ವಜನಿಕರಿಗೆ ತೊಂದರೆಯಾಗಿದೆ.

ಈ ಅರಣ್ಯ ಪ್ರದೇಶಕ್ಕೆ ತಾಲ್ಲೂಕಿನ ನೂರಾರು ಗ್ರಾಮಗಳು ಹೊಂದಿಕೊಂಡಂತಿದ್ದು, ಈ ಅರಣ್ಯ ಪ್ರದೇಶದಿಂದ ಪ್ರತಿನಿತ್ಯ ಕಾಡುಪ್ರಾಣಿಗಳು ರೈತರ ಜಮೀನುಗಳಿಗೆ ಬೆಳೆಗಳಿಗೆ ಲಗ್ಗೆಯಿಟ್ಟು ಲಕ್ಷಾಂತರ ರೂ. ಮೌಲ್ಯದ ಬೆಳೆಗಳನ್ನು ನಾಶಪಡಿಸುತ್ತಿದ್ದು ಪರಿಹಾರಕ್ಕಾಗಿ ಹುಣಸೂರು ತಾಲ್ಲೂಕಿಗೆ ಹೋಗಲು ತೊಂದರೆಯಾಗುತ್ತಿದೆ. ಅದೇ ರೀತಿ ಇದುವರೆಗೂ ಕಾಡುಪ್ರಾಣಿಗಳಿಂದ ನಾಶವಾದಂತಹ ಬೆಳೆಗಳಿಗೆ ಯಾವುದೇ ಪರಿಹಾರ ದೊರೆಯುತ್ತಿಲ್ಲ.
ಆದ್ದರಿಂದ ತಾಲ್ಲೂಕಿನ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಪಿರಿಯಾಪಟ್ಟಣ ತಾಲ್ಲೂಕಿಗೆ ವನ್ಯಜೀವಿ ರಾಷ್ಟ್ರೀಯ ಉದ್ಯಾನವನದ ವಲಯ ಅರಣ್ಯಾಧಿಕಾರಿಗಳ ಕಚೇರಿಯನ್ನು ವರ್ಗಾಯಿಸಿಕೊಡಬೇಕೆಂದು ಅನೇಕ ಪ್ರಗತಿಪರ ಚಿಂತಕರು, ರೈತರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕೋಟ್ಸ್‌))

ತಾಲ್ಲೂಕಿಗೆ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿಗಳ ಕಚೇರಿಯು ಅಗತ್ಯವಾಗಿ ಬೇಕಿದ್ದು, ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿಗಳ ಕಚೇರಿಯನ್ನು ಪಿ.ಪಟ್ಟಣಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು. -ಕೆ.ವೆಂಕಟೇಶ್, ಪಶುಸಂಗೋಪನೆ ಸಚಿವರು

ತಾಲ್ಲೂಕಿನಲ್ಲಿ ಅರಣ್ಯ ಪ್ರದೇಶದ ವ್ಯಾಪ್ತಿ ಹೆಚ್ಚಾಗಿದ್ದು, ಈ ಅರಣ್ಯ ಪ್ರದೇಶದ ವ್ಯಾಪ್ತಿಗೆ ಬರುವ ಅನೇಕ ಗ್ರಾಮಗಳವರು ಕಾಡುಪ್ರಾಣಿಗಳಿಂದ ಉಂಟಾಗುವಂತಹ ತೊಂದರೆಗಳಿಗಾಗಲಿ, ಅರಣ್ಯ ಇಲಾಖೆಯಿಂದ ಸಿಗುವ ಸೌಲಭ್ಯಗಳಿಗಾಗಲಿ ವನ್ಯಜೀವಿ ವಿಭಾಗದ ಅರಣ್ಯ ಅಧಿಕಾರಿಗಳನ್ನು ಭೇಟಿ ಮಾಡಲು ಹುಣಸೂರು ತಾಲ್ಲೂಕಿಗೆ ಹೋಗಬೇಕಾಗಿದ್ದು, ಇದರಿಂದ ತಾಲ್ಲೂಕಿನ ಸಾವಿರಾರು ರೈತರಿಗೆ ಸಮಸ್ಯೆ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಕಚೇರಿಯನ್ನು ಸ್ಥಳಾಂತರಿಸಿದರೆ ತಾಲ್ಲೂಕಿನ ಜನತೆಗೆ ಅನುಕೂಲವಾಗಲಿದೆ.
-ಸುರೇಶ್‌, ರೈತ

ಆಂದೋಲನ ಡೆಸ್ಕ್

Recent Posts

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

20 mins ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

47 mins ago

ದ್ವೇಷ ಕಾರುವವರಿಗೆ ಬೀಳಲಿದೆಯೇ ಕಡಿವಾಣ?

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…

2 hours ago

ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಕ್ಕೆ ಚಾಲನೆ

ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…

4 hours ago

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ…

4 hours ago

ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ: ಆಕಾಂಕ್ಷಿಗಳ ಕಸರತ್ತು

ಕೆ.ಬಿ.ರಮೇಶನಾಯಕ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷರ ಹುದ್ದೆಯತ್ತ ಶಾಸಕ ಅನಿಲ್ ಚಿತ್ತ ತಂದೆಗೆ ಅಧ್ಯಕ್ಷ ಹುದ್ದೆ ಕೊಡಿಸಲು ಶಾಸಕ ಡಿ.ರವಿಶಂಕರ್ ಯತ್ನ …

4 hours ago