Andolana originals

ʼಪಿ.ಪಟ್ಟಣಕ್ಕೆ ವಲಯ ಅರಣ್ಯ ಅಧಿಕಾರಿ ಕಚೇರಿ ಸ್ಥಳಾಂತರಿಸಿʼ

ಮಹೇಶ ಕೋಗಿಲವಾಡಿ

ಪಿರಿಯಾಪಟ್ಟಣ: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಕಚೇರಿಯನ್ನು ಪಿರಿಯಾಪಟ್ಟಣ ತಾಲ್ಲೂಕಿಗೆ ವರ್ಗಾವಣೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪಿರಿಯಾಪಟ್ಟಣ ತಾಲ್ಲೂಕು ಕೊಡಗಿನ ಗಡಿಭಾಗಕ್ಕೆ ಹೊಂದಿಕೊಂಡಂತಿದ್ದು, ಅರೆ ಮಲೆನಾಡು ಪ್ರದೇಶವಾಗಿದೆ. ಅತಿ ಹೆಚ್ಚಿನ ಅರಣ್ಯ ಪ್ರದೇಶವನ್ನು ಒಳಗೊಂಡಿರುವ ತಾಲ್ಲೂಕು ಇದಾಗಿದ್ದು, 60 ಕಿ.ಮೀ. ವ್ಯಾಪ್ತಿಗಳಲ್ಲಿ ನೂರಕ್ಕೂ ಹೆಚ್ಚು ಗ್ರಾಮಗಳು ಅರಣ್ಯದ ಅಂಚಿನಲ್ಲಿವೆ. 30ಕ್ಕೂ ಹೆಚ್ಚು ಹಾಡಿಗಳು ನಾಗರಹೊಳೆ ವನ್ಯಜೀವಿ ಅರಣ್ಯ ಪ್ರದೇಶದಲ್ಲಿವೆ.

ಇಷ್ಟೆಲ್ಲಾ ವನ್ಯಜೀವಿ ವಲಯ, ಅರಣ್ಯ ಪ್ರದೇಶ ಇಲ್ಲಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ವನ್ಯಜೀವಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಇಲ್ಲದೆ ಹುಣಸೂರು ತಾಲ್ಲೂಕಿನಲ್ಲಿ ಕಚೇರಿ ನಿರ್ಮಾಣ ಮಾಡಿರುವುದರಿಂದ ಪಿರಿಯಾಪಟ್ಟಣ ತಾಲ್ಲೂಕಿನ ರೈತರು ಮತ್ತು ಸಾರ್ವಜನಿಕರಿಗೆ ತೊಂದರೆಯಾಗಿದೆ.

ಈ ಅರಣ್ಯ ಪ್ರದೇಶಕ್ಕೆ ತಾಲ್ಲೂಕಿನ ನೂರಾರು ಗ್ರಾಮಗಳು ಹೊಂದಿಕೊಂಡಂತಿದ್ದು, ಈ ಅರಣ್ಯ ಪ್ರದೇಶದಿಂದ ಪ್ರತಿನಿತ್ಯ ಕಾಡುಪ್ರಾಣಿಗಳು ರೈತರ ಜಮೀನುಗಳಿಗೆ ಬೆಳೆಗಳಿಗೆ ಲಗ್ಗೆಯಿಟ್ಟು ಲಕ್ಷಾಂತರ ರೂ. ಮೌಲ್ಯದ ಬೆಳೆಗಳನ್ನು ನಾಶಪಡಿಸುತ್ತಿದ್ದು ಪರಿಹಾರಕ್ಕಾಗಿ ಹುಣಸೂರು ತಾಲ್ಲೂಕಿಗೆ ಹೋಗಲು ತೊಂದರೆಯಾಗುತ್ತಿದೆ. ಅದೇ ರೀತಿ ಇದುವರೆಗೂ ಕಾಡುಪ್ರಾಣಿಗಳಿಂದ ನಾಶವಾದಂತಹ ಬೆಳೆಗಳಿಗೆ ಯಾವುದೇ ಪರಿಹಾರ ದೊರೆಯುತ್ತಿಲ್ಲ.
ಆದ್ದರಿಂದ ತಾಲ್ಲೂಕಿನ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಪಿರಿಯಾಪಟ್ಟಣ ತಾಲ್ಲೂಕಿಗೆ ವನ್ಯಜೀವಿ ರಾಷ್ಟ್ರೀಯ ಉದ್ಯಾನವನದ ವಲಯ ಅರಣ್ಯಾಧಿಕಾರಿಗಳ ಕಚೇರಿಯನ್ನು ವರ್ಗಾಯಿಸಿಕೊಡಬೇಕೆಂದು ಅನೇಕ ಪ್ರಗತಿಪರ ಚಿಂತಕರು, ರೈತರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕೋಟ್ಸ್‌))

ತಾಲ್ಲೂಕಿಗೆ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿಗಳ ಕಚೇರಿಯು ಅಗತ್ಯವಾಗಿ ಬೇಕಿದ್ದು, ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿಗಳ ಕಚೇರಿಯನ್ನು ಪಿ.ಪಟ್ಟಣಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು. -ಕೆ.ವೆಂಕಟೇಶ್, ಪಶುಸಂಗೋಪನೆ ಸಚಿವರು

ತಾಲ್ಲೂಕಿನಲ್ಲಿ ಅರಣ್ಯ ಪ್ರದೇಶದ ವ್ಯಾಪ್ತಿ ಹೆಚ್ಚಾಗಿದ್ದು, ಈ ಅರಣ್ಯ ಪ್ರದೇಶದ ವ್ಯಾಪ್ತಿಗೆ ಬರುವ ಅನೇಕ ಗ್ರಾಮಗಳವರು ಕಾಡುಪ್ರಾಣಿಗಳಿಂದ ಉಂಟಾಗುವಂತಹ ತೊಂದರೆಗಳಿಗಾಗಲಿ, ಅರಣ್ಯ ಇಲಾಖೆಯಿಂದ ಸಿಗುವ ಸೌಲಭ್ಯಗಳಿಗಾಗಲಿ ವನ್ಯಜೀವಿ ವಿಭಾಗದ ಅರಣ್ಯ ಅಧಿಕಾರಿಗಳನ್ನು ಭೇಟಿ ಮಾಡಲು ಹುಣಸೂರು ತಾಲ್ಲೂಕಿಗೆ ಹೋಗಬೇಕಾಗಿದ್ದು, ಇದರಿಂದ ತಾಲ್ಲೂಕಿನ ಸಾವಿರಾರು ರೈತರಿಗೆ ಸಮಸ್ಯೆ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಕಚೇರಿಯನ್ನು ಸ್ಥಳಾಂತರಿಸಿದರೆ ತಾಲ್ಲೂಕಿನ ಜನತೆಗೆ ಅನುಕೂಲವಾಗಲಿದೆ.
-ಸುರೇಶ್‌, ರೈತ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

2 mins ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 mins ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

11 mins ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

16 mins ago

ಜಂಬೂಸವಾರಿಯಲ್ಲಿ ಈ ಬಾರಿ ತಾರಾ ಮೆರುಗು

ಕೆ.ಬಿ.ರಮೇಶನಾಯಕ ರವಿಚಂದ್ರನ್, ಶಿವರಾಜ್‌ಕುಮಾರ್, ಯಶ್, ರಿಷಭ್ ಶೆಟ್ಟಿ, ರಚಿತಾ ರಾಮ್, ಸಪ್ತಮಿ ಗೌಡ ಸೇರಿ ೩೦ ಕಲಾವಿದರು ಭಾಗಿ ಮೈಸೂರು:…

22 mins ago