ಆಂದೋಲನ ಪುರವಣಿ

ಸಿನಿಮಾಲ್‌: ನವರಸಗಳನ್ನು ಆಧರಿಸಿ ‘9ಸುಳ್ಳು ಕಥೆಗಳು’

ರಂಗಭೂಮಿ ಹಿನ್ನೆಲೆಯ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘೯ ಸುಳ್ಳು ಕಥೆಗಳು’. ಇದರ ಟ್ರ್ತ್ಯೈಲರ್ ಮತ್ತು ಆಡಿೋಂ ಬಿಡುಗಡೆಯನ್ನು ಪತ್ರಕರ್ತ, ನಿರ್ದೇಶಕರಾದ ಸದಾಶಿವ ಶೆಣೈ ಮತ್ತು ಇಂದ್ರಜಿತ್ ಲಂಕೇಶ್ ಅವರು ಮಾಡಿದರು. ಶಿವರಾಜಕುಮಾರ್ ಈ ಚಿತ್ರದ ಟ್ರ್ತ್ಯೈಲರ್‌ಗೆ ಧ್ವನಿ ನೀಡಿರುವುದು ವಿಶೇಷ. ‘ಇದೊಂದು ನೈಜ ಘಟನೆ ಆಧಾರಿತ ಚಿತ್ರ. ನವರಸಗಳನ್ನು ಆಧರಿಸಿ ಈ ಚಿತ್ರದ ಕಥೆ ಮಾಡಿದೆ. ನಂತರ ನಿರ್ಮಾಪಕರಿಗೆ ಹುಡುಕಾಡಿದೆ. ಯಾರೂ ಸಿಗಲಿಲ್ಲ. ನನ್ನ ಸ್ನೇಹಿತ ಸೂರ್ಯನಾರಾಯಣ್ ಮೊದಲು ದೊಡ್ಡ ಮೊತ್ತದ ಹಣ ನೀಡಿ ಈ ಚಿತ್ರಕ್ಕೆ ಚಾಲನೆ ನೀಡಿದರು. ನಂತರ ಸಾಕಷ್ಟು ಗೆಳೆಯರು ನನ್ನ ಜೊತೆಯಾದರು’ ಎಂದರು ಮಂಜುನಾಥ ಮುನಿಯಪ್ಪ.

‘ಚಿತ್ರದಲ್ಲಿ ಆರು ಹಾಡುಗಳಿವೆ. ಸಂತ ಶಿಶುನಾಳ ಶರೀಫರ ಗೀತೆೊಂಂದನ್ನು ಬಳಸಿಕೊಂಡಿದ್ದೇವೆ. ವಿಕ್ರಮ್ ವಸಿಷ್ಠ, ಸತೀಶ್ ಬೆಲ್ಲೂರು ಹಾಗೂ ಕಿರಣ್ ವಿಪ್ರ ಹಾಡುಗಳನ್ನು ಬರೆದಿದ್ದಾರೆ. ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ವಾರಿಜಾಶ್ರೀ, ಶಶಿಧರ್ ಕೋಟೆ, ಚಿಂತನ್ ವಿಕಾಸ್ ಸೇರಿದಂತೆ ಪ್ರಸಿದ್ಧ ಗಾಯಕರು ಈ ಹಾಡುಗಳನ್ನು ಹಾಡಿದ್ದಾರೆ. ನಟ, ನಿರ್ದೇಶಕ ರಿಷಭ್ ಶೆಟ್ಟಿ ನಮ್ಮ ಚಿತ್ರದ ಹಾಡೊಂದನ್ನು ಹಾಡಿದ್ದಾರೆ’ ಎಂಬುದು ಸಂಗೀತ ಸಂಯೋಜಕರಾದ ಪ್ರವೀಣ್ ಮತ್ತು ಪ್ರದೀಪ್ ಮಾತು. ಪರಮೇಶ್ ಛಾಯಾಗ್ರಹಣ, ಶ್ರೀಕಾಂತ್ ಸಂಕಲನದ ಚಿತ್ರ ‘೯ ಸುಳ್ಳು ಕಥೆಗಳು’ ಚಿತ್ರದ ತಾರಾಬಳಗದಲ್ಲಿ ಪ್ರಮೋದ್ ಶೆಟ್ಟಿ, ವಿನಾಯಕ ಜೋಶಿ, ಕೃಷ್ಣ ಹೆಬ್ಬಾಳೆ, ಸುಕೃತ ವಾಗ್ಲೆ, ಕರಿಸುಬ್ಬು, ನಂದಗೋಪಾಲ್, ಲಕ್ಷಿ ್ಮೀ ಚಂದ್ರಶೇಖರ್, ಶ್ರೀನಿವಾಸಪ್ರಭು, ಸುನೇತ್ರ ಪಂಡಿತ್, ಸುಪ್ರೀತಾ ಶೆಟ್ಟಿ, ಸುಂದರ್ ವೀಣಾ, ವೀಳ್ಯಾ ರಾಘವೇಂದ್ರ ಸೇರಿದಂತೆ ನೂರಕ್ಕೂ ಅಧಿಕ ಕಲಾವಿದರು ಇದ್ದಾರಂತೆ.

 

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

11 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

38 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago