ರಂಗಭೂಮಿ ಹಿನ್ನೆಲೆಯ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘೯ ಸುಳ್ಳು ಕಥೆಗಳು’. ಇದರ ಟ್ರ್ತ್ಯೈಲರ್ ಮತ್ತು ಆಡಿೋಂ ಬಿಡುಗಡೆಯನ್ನು ಪತ್ರಕರ್ತ, ನಿರ್ದೇಶಕರಾದ ಸದಾಶಿವ ಶೆಣೈ ಮತ್ತು ಇಂದ್ರಜಿತ್ ಲಂಕೇಶ್ ಅವರು ಮಾಡಿದರು. ಶಿವರಾಜಕುಮಾರ್ ಈ ಚಿತ್ರದ ಟ್ರ್ತ್ಯೈಲರ್ಗೆ ಧ್ವನಿ ನೀಡಿರುವುದು ವಿಶೇಷ. ‘ಇದೊಂದು ನೈಜ ಘಟನೆ ಆಧಾರಿತ ಚಿತ್ರ. ನವರಸಗಳನ್ನು ಆಧರಿಸಿ ಈ ಚಿತ್ರದ ಕಥೆ ಮಾಡಿದೆ. ನಂತರ ನಿರ್ಮಾಪಕರಿಗೆ ಹುಡುಕಾಡಿದೆ. ಯಾರೂ ಸಿಗಲಿಲ್ಲ. ನನ್ನ ಸ್ನೇಹಿತ ಸೂರ್ಯನಾರಾಯಣ್ ಮೊದಲು ದೊಡ್ಡ ಮೊತ್ತದ ಹಣ ನೀಡಿ ಈ ಚಿತ್ರಕ್ಕೆ ಚಾಲನೆ ನೀಡಿದರು. ನಂತರ ಸಾಕಷ್ಟು ಗೆಳೆಯರು ನನ್ನ ಜೊತೆಯಾದರು’ ಎಂದರು ಮಂಜುನಾಥ ಮುನಿಯಪ್ಪ.
‘ಚಿತ್ರದಲ್ಲಿ ಆರು ಹಾಡುಗಳಿವೆ. ಸಂತ ಶಿಶುನಾಳ ಶರೀಫರ ಗೀತೆೊಂಂದನ್ನು ಬಳಸಿಕೊಂಡಿದ್ದೇವೆ. ವಿಕ್ರಮ್ ವಸಿಷ್ಠ, ಸತೀಶ್ ಬೆಲ್ಲೂರು ಹಾಗೂ ಕಿರಣ್ ವಿಪ್ರ ಹಾಡುಗಳನ್ನು ಬರೆದಿದ್ದಾರೆ. ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ವಾರಿಜಾಶ್ರೀ, ಶಶಿಧರ್ ಕೋಟೆ, ಚಿಂತನ್ ವಿಕಾಸ್ ಸೇರಿದಂತೆ ಪ್ರಸಿದ್ಧ ಗಾಯಕರು ಈ ಹಾಡುಗಳನ್ನು ಹಾಡಿದ್ದಾರೆ. ನಟ, ನಿರ್ದೇಶಕ ರಿಷಭ್ ಶೆಟ್ಟಿ ನಮ್ಮ ಚಿತ್ರದ ಹಾಡೊಂದನ್ನು ಹಾಡಿದ್ದಾರೆ’ ಎಂಬುದು ಸಂಗೀತ ಸಂಯೋಜಕರಾದ ಪ್ರವೀಣ್ ಮತ್ತು ಪ್ರದೀಪ್ ಮಾತು. ಪರಮೇಶ್ ಛಾಯಾಗ್ರಹಣ, ಶ್ರೀಕಾಂತ್ ಸಂಕಲನದ ಚಿತ್ರ ‘೯ ಸುಳ್ಳು ಕಥೆಗಳು’ ಚಿತ್ರದ ತಾರಾಬಳಗದಲ್ಲಿ ಪ್ರಮೋದ್ ಶೆಟ್ಟಿ, ವಿನಾಯಕ ಜೋಶಿ, ಕೃಷ್ಣ ಹೆಬ್ಬಾಳೆ, ಸುಕೃತ ವಾಗ್ಲೆ, ಕರಿಸುಬ್ಬು, ನಂದಗೋಪಾಲ್, ಲಕ್ಷಿ ್ಮೀ ಚಂದ್ರಶೇಖರ್, ಶ್ರೀನಿವಾಸಪ್ರಭು, ಸುನೇತ್ರ ಪಂಡಿತ್, ಸುಪ್ರೀತಾ ಶೆಟ್ಟಿ, ಸುಂದರ್ ವೀಣಾ, ವೀಳ್ಯಾ ರಾಘವೇಂದ್ರ ಸೇರಿದಂತೆ ನೂರಕ್ಕೂ ಅಧಿಕ ಕಲಾವಿದರು ಇದ್ದಾರಂತೆ.
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…