ರಂಗಭೂಮಿ ಹಿನ್ನೆಲೆಯ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘೯ ಸುಳ್ಳು ಕಥೆಗಳು’. ಇದರ ಟ್ರ್ತ್ಯೈಲರ್ ಮತ್ತು ಆಡಿೋಂ ಬಿಡುಗಡೆಯನ್ನು ಪತ್ರಕರ್ತ, ನಿರ್ದೇಶಕರಾದ ಸದಾಶಿವ ಶೆಣೈ ಮತ್ತು ಇಂದ್ರಜಿತ್ ಲಂಕೇಶ್ ಅವರು ಮಾಡಿದರು. ಶಿವರಾಜಕುಮಾರ್ ಈ ಚಿತ್ರದ ಟ್ರ್ತ್ಯೈಲರ್ಗೆ ಧ್ವನಿ ನೀಡಿರುವುದು ವಿಶೇಷ. ‘ಇದೊಂದು ನೈಜ ಘಟನೆ ಆಧಾರಿತ ಚಿತ್ರ. ನವರಸಗಳನ್ನು ಆಧರಿಸಿ ಈ ಚಿತ್ರದ ಕಥೆ ಮಾಡಿದೆ. ನಂತರ ನಿರ್ಮಾಪಕರಿಗೆ ಹುಡುಕಾಡಿದೆ. ಯಾರೂ ಸಿಗಲಿಲ್ಲ. ನನ್ನ ಸ್ನೇಹಿತ ಸೂರ್ಯನಾರಾಯಣ್ ಮೊದಲು ದೊಡ್ಡ ಮೊತ್ತದ ಹಣ ನೀಡಿ ಈ ಚಿತ್ರಕ್ಕೆ ಚಾಲನೆ ನೀಡಿದರು. ನಂತರ ಸಾಕಷ್ಟು ಗೆಳೆಯರು ನನ್ನ ಜೊತೆಯಾದರು’ ಎಂದರು ಮಂಜುನಾಥ ಮುನಿಯಪ್ಪ.
‘ಚಿತ್ರದಲ್ಲಿ ಆರು ಹಾಡುಗಳಿವೆ. ಸಂತ ಶಿಶುನಾಳ ಶರೀಫರ ಗೀತೆೊಂಂದನ್ನು ಬಳಸಿಕೊಂಡಿದ್ದೇವೆ. ವಿಕ್ರಮ್ ವಸಿಷ್ಠ, ಸತೀಶ್ ಬೆಲ್ಲೂರು ಹಾಗೂ ಕಿರಣ್ ವಿಪ್ರ ಹಾಡುಗಳನ್ನು ಬರೆದಿದ್ದಾರೆ. ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ವಾರಿಜಾಶ್ರೀ, ಶಶಿಧರ್ ಕೋಟೆ, ಚಿಂತನ್ ವಿಕಾಸ್ ಸೇರಿದಂತೆ ಪ್ರಸಿದ್ಧ ಗಾಯಕರು ಈ ಹಾಡುಗಳನ್ನು ಹಾಡಿದ್ದಾರೆ. ನಟ, ನಿರ್ದೇಶಕ ರಿಷಭ್ ಶೆಟ್ಟಿ ನಮ್ಮ ಚಿತ್ರದ ಹಾಡೊಂದನ್ನು ಹಾಡಿದ್ದಾರೆ’ ಎಂಬುದು ಸಂಗೀತ ಸಂಯೋಜಕರಾದ ಪ್ರವೀಣ್ ಮತ್ತು ಪ್ರದೀಪ್ ಮಾತು. ಪರಮೇಶ್ ಛಾಯಾಗ್ರಹಣ, ಶ್ರೀಕಾಂತ್ ಸಂಕಲನದ ಚಿತ್ರ ‘೯ ಸುಳ್ಳು ಕಥೆಗಳು’ ಚಿತ್ರದ ತಾರಾಬಳಗದಲ್ಲಿ ಪ್ರಮೋದ್ ಶೆಟ್ಟಿ, ವಿನಾಯಕ ಜೋಶಿ, ಕೃಷ್ಣ ಹೆಬ್ಬಾಳೆ, ಸುಕೃತ ವಾಗ್ಲೆ, ಕರಿಸುಬ್ಬು, ನಂದಗೋಪಾಲ್, ಲಕ್ಷಿ ್ಮೀ ಚಂದ್ರಶೇಖರ್, ಶ್ರೀನಿವಾಸಪ್ರಭು, ಸುನೇತ್ರ ಪಂಡಿತ್, ಸುಪ್ರೀತಾ ಶೆಟ್ಟಿ, ಸುಂದರ್ ವೀಣಾ, ವೀಳ್ಯಾ ರಾಘವೇಂದ್ರ ಸೇರಿದಂತೆ ನೂರಕ್ಕೂ ಅಧಿಕ ಕಲಾವಿದರು ಇದ್ದಾರಂತೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…