ಆಂದೋಲನ ಪುರವಣಿ

ಸಿನಿಮಾಲ್‌: ನವರಸಗಳನ್ನು ಆಧರಿಸಿ ‘9ಸುಳ್ಳು ಕಥೆಗಳು’

ರಂಗಭೂಮಿ ಹಿನ್ನೆಲೆಯ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘೯ ಸುಳ್ಳು ಕಥೆಗಳು’. ಇದರ ಟ್ರ್ತ್ಯೈಲರ್ ಮತ್ತು ಆಡಿೋಂ ಬಿಡುಗಡೆಯನ್ನು ಪತ್ರಕರ್ತ, ನಿರ್ದೇಶಕರಾದ ಸದಾಶಿವ ಶೆಣೈ ಮತ್ತು ಇಂದ್ರಜಿತ್ ಲಂಕೇಶ್ ಅವರು ಮಾಡಿದರು. ಶಿವರಾಜಕುಮಾರ್ ಈ ಚಿತ್ರದ ಟ್ರ್ತ್ಯೈಲರ್‌ಗೆ ಧ್ವನಿ ನೀಡಿರುವುದು ವಿಶೇಷ. ‘ಇದೊಂದು ನೈಜ ಘಟನೆ ಆಧಾರಿತ ಚಿತ್ರ. ನವರಸಗಳನ್ನು ಆಧರಿಸಿ ಈ ಚಿತ್ರದ ಕಥೆ ಮಾಡಿದೆ. ನಂತರ ನಿರ್ಮಾಪಕರಿಗೆ ಹುಡುಕಾಡಿದೆ. ಯಾರೂ ಸಿಗಲಿಲ್ಲ. ನನ್ನ ಸ್ನೇಹಿತ ಸೂರ್ಯನಾರಾಯಣ್ ಮೊದಲು ದೊಡ್ಡ ಮೊತ್ತದ ಹಣ ನೀಡಿ ಈ ಚಿತ್ರಕ್ಕೆ ಚಾಲನೆ ನೀಡಿದರು. ನಂತರ ಸಾಕಷ್ಟು ಗೆಳೆಯರು ನನ್ನ ಜೊತೆಯಾದರು’ ಎಂದರು ಮಂಜುನಾಥ ಮುನಿಯಪ್ಪ.

‘ಚಿತ್ರದಲ್ಲಿ ಆರು ಹಾಡುಗಳಿವೆ. ಸಂತ ಶಿಶುನಾಳ ಶರೀಫರ ಗೀತೆೊಂಂದನ್ನು ಬಳಸಿಕೊಂಡಿದ್ದೇವೆ. ವಿಕ್ರಮ್ ವಸಿಷ್ಠ, ಸತೀಶ್ ಬೆಲ್ಲೂರು ಹಾಗೂ ಕಿರಣ್ ವಿಪ್ರ ಹಾಡುಗಳನ್ನು ಬರೆದಿದ್ದಾರೆ. ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ವಾರಿಜಾಶ್ರೀ, ಶಶಿಧರ್ ಕೋಟೆ, ಚಿಂತನ್ ವಿಕಾಸ್ ಸೇರಿದಂತೆ ಪ್ರಸಿದ್ಧ ಗಾಯಕರು ಈ ಹಾಡುಗಳನ್ನು ಹಾಡಿದ್ದಾರೆ. ನಟ, ನಿರ್ದೇಶಕ ರಿಷಭ್ ಶೆಟ್ಟಿ ನಮ್ಮ ಚಿತ್ರದ ಹಾಡೊಂದನ್ನು ಹಾಡಿದ್ದಾರೆ’ ಎಂಬುದು ಸಂಗೀತ ಸಂಯೋಜಕರಾದ ಪ್ರವೀಣ್ ಮತ್ತು ಪ್ರದೀಪ್ ಮಾತು. ಪರಮೇಶ್ ಛಾಯಾಗ್ರಹಣ, ಶ್ರೀಕಾಂತ್ ಸಂಕಲನದ ಚಿತ್ರ ‘೯ ಸುಳ್ಳು ಕಥೆಗಳು’ ಚಿತ್ರದ ತಾರಾಬಳಗದಲ್ಲಿ ಪ್ರಮೋದ್ ಶೆಟ್ಟಿ, ವಿನಾಯಕ ಜೋಶಿ, ಕೃಷ್ಣ ಹೆಬ್ಬಾಳೆ, ಸುಕೃತ ವಾಗ್ಲೆ, ಕರಿಸುಬ್ಬು, ನಂದಗೋಪಾಲ್, ಲಕ್ಷಿ ್ಮೀ ಚಂದ್ರಶೇಖರ್, ಶ್ರೀನಿವಾಸಪ್ರಭು, ಸುನೇತ್ರ ಪಂಡಿತ್, ಸುಪ್ರೀತಾ ಶೆಟ್ಟಿ, ಸುಂದರ್ ವೀಣಾ, ವೀಳ್ಯಾ ರಾಘವೇಂದ್ರ ಸೇರಿದಂತೆ ನೂರಕ್ಕೂ ಅಧಿಕ ಕಲಾವಿದರು ಇದ್ದಾರಂತೆ.

 

andolana

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

1 hour ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

1 hour ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

1 hour ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

4 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

4 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

4 hours ago