ಆಂದೋಲನ ಪುರವಣಿ

ಯುವ ಡಾಟ್‌ ಕಾಮ್‌: ಮಳೆ ಮತ್ತು ಇಳೆಯ ಪ್ರೇಮ ಕಹಾನಿ

-ಅಕ್ಷತಾ ಎಸ್.,ಮಲ್ಲಮ್ಮ, ಮರಿಮಲ್ಲಪ್ಪ ಪದವಿ ಕಾಲೇಜು, ಮೈಸೂರು

ಹೇ….. ಭೂಮಿ ಏನಿಷ್ಟು ಸಂಭ್ರಮ, ನಿನ್ನನ್ನೇ ನೀನು ಮರೆತಂತೆ. ಮಳೆಯ ಸ್ಪರ್ಶವಾಗುತ್ತಿದ್ದಂತೆ ಗೆಳೆಯನ ಕಂಡ ಪ್ರೇಯಸಿಯಂತಾಗಿ ನಳನಳಿಸುವೆ. ಬೇಸಿಗೆಯಲ್ಲಿ ವಿರಹದಿಂದ ನೊಂದಿದ್ದರೂ ಮೊದಲ ಮಳೆಗೆ ಘಮಿಸುವೆ. ಹಸಿರಿನ ಸೀರೆಯನ್ನು ನಿಧಾನವಾಗಿ ಹೊದ್ದುಕೊಳ್ಳುತ್ತಾ ನಳನಳಿಸುವೆ.

ಎಲ್ಲಡೆ ಝುಳು ಝುಳು ನೀನಾದ ಮಾಡುತ್ತಾ, ಸಂತೋಷಕ್ಕೆ ಎಲ್ಲೆ ಇಲ್ಲ ಎಂದು ನಲಿಯುವೆ. ಇದೇ ನಲಿವಿನಲ್ಲಿ ಮರ, ಗಿಡ, ಬಳ್ಳಿ, ಹೂಗಳು ಬೆಳೆದು ನಿಲ್ಲುತ್ತವೆ. ಆನಂದ ಸೂಸುತ್ತವೆ.

ಅಲಂಕಾರ ಮಾಡಿಕೊಂಡು ತಾನೇ ಸುಂದರಿ ಎಂದು ಬೀಗಬೇಡಿ, ಎಷ್ಟು ಕಾಲ ಈ ಸೌಂದರ್ಯ? ಆದರೆ ಪ್ರತಿ ವರ್ಷ ನವ ಯುವತಿಯಂತೆ ಕಂಗೊಳಿಸುವವಳು ನಾನು, ಚಿರಯುವತಿ ನಾನು… ಎಂದು ಈಗಿನ ಕಾಲದ ಯುವತಿಯರನ್ನು ಚೇಡಿಸುವ ನಿನ್ನ ತಣ್ಣನೆಯ ನೋಟ ಎಲ್ಲರಿಗೂ ಅಚ್ಚರಿಯೇ.

ಮಳೆ ಬಿದ್ದಾಗ ಇಳೆಯಲ್ಲಾಗುವ ಸದ್ದು, ಹೊರ ಬರುವ ಸಂಭಾಷಣೆಯಲ್ಲಿ ಸುಮಧುರ ಸಂಗೀತವಿರುತ್ತದೆ. ಗಾಳಿ, ಗಂಧ ಜೊತೆ ಸೇರಿ ಸಂಗೀತ ಗೋಷ್ಠಿಯೇ ನೆರೆದಂತಾಗುತ್ತದೆ. ಎಲ್ಲರನ್ನೂ ತಾಯಿಯಂತೆ ಪೋಷಿಸುವ ಇಳೆ, ವರುಣನ ಮುಂದೆ ಮಾತ್ರ ಮಗುವಿನಂತೆ ಕಾಣುತ್ತಾಳೆ.

ಇಷ್ಟು ಪ್ರೀತಿಯನ್ನು ವರುಣನ ಮೇಲೆ ಇಟ್ಟಿದ್ದರೂ ಸದಾಕಾಲ ತನ್ನೊಂದಿಗೆ ನಿಲ್ಲು ಎಂದು ಹೇಳುವ ಸ್ವಾರ್ಥಿಯಲ್ಲ ಇಳೆ. ಏಕೆಂದರೆ ವರುಣನ ಅಬ್ಬರ ಹೆಚ್ಚಾದರೆ ಆಗುವ ಅನಾಹುತದ ಅರಿವು ಅವಳಿಗಿದೆ. ಒಮ್ಮೊಮ್ಮೆ ವರುಣ ತಾಳ್ಮೆ ಮೀರಿ ಅಬ್ಬರಿಸಿದಾಗಲೂ ಅವನನ್ನು ಸಮಾಧಾನಿಸಿ ತನ್ನೊಡಲನ್ನು ಸೇರಿಸಿಕೊಳ್ಳುತ್ತಾಳೆ.

ಮಳೆಗಾಲ ಕಳೆದು ಬೇಸಿಗೆ ಶುರುವಾಗುತ್ತಿದ್ದಂತೆ ಮತ್ತದೇ ವಿರಹ. ಆದರೂ ಮತ್ತದೇ ದೀರ್ಘ ತಾಳ್ಮೆಯಿಂದ ಮುಂದಿನ ಮುಂಗಾರಿಗೆ ಕಾಯುತ್ತಾಳೆ. ಇದೆಲ್ಲವೂ ಪ್ರಕೃತಿಯಲ್ಲಿ ಇರುವ ಪ್ರೀತಿಯ ಜಾಲದಂತೆ ಕಾಣುವುದು ನನ್ನೊಬ್ಬಳಿಗಾ? ಎನ್ನುವ ಪ್ರಶ್ನೆಯೂ ಆಗಾಗ ಹುಟ್ಟುತ್ತದೆ.

 

andolana

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

1 hour ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

1 hour ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

2 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

15 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

17 hours ago