ಆಂದೋಲನ ಪುರವಣಿ

ಅರವಿಂದನಗರದಲ್ಲೊಂದು ಹಿರಿಯರ ಮನೆ

• ಪ್ರಶಾಂತ್ ಎಸ್.

ಇತ್ತೀಚೆಗೆ ಕುಟುಂಬದೊಳಗಿನ ಮಾನವ ಸಂಬಂಧಗಳ ಮೌಲ್ಯಗಳು ಕಡಿಮೆಯಾಗಿ ಹಿರಿಯ ಜೀವಗಳು ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುವಂತಾಗಿದೆ. ಮುಪ್ಪಾಗುತ್ತಿದ್ದಂತೆ ಬಂಧು-ಬಾಂಧವರಿಂದ ದೂರ, ಸ್ವಂತ ಮಕ್ಕಳಿಂದ ತಾತ್ಸಾರ ಇವುಗಳ ನಡುವೆ ಹಿರಿಯರ ಬದುಕು ಅತಂತ್ರವಾಗುವುದಂತೂ ನಿಜ.

ಆಧುನಿಕತೆ, ಕುಟುಂಬ ವಿಘಟನೆ ಮತ್ತು ಪಾಶ್ಚಿಮಾತ್ಯ ಜೀವನಶೈಲಿಗಳು ಅಳವಡಿಕೆ ಇಂದು ಕುಟುಂಬಗಳನ್ನು ಹೊಡೆಯುತ್ತಿದೆ ಎಂದರೆ ತಪ್ಪಾಗಲಾರದು. ಈ ಪದ್ಧತಿಗಳು ಅನೇಕ ವಯೋವೃದ್ಧರನ್ನು ಒಂಟಿ ಜೀವಿಗಳನ್ನಾಗಿಸಿದೆ.

ಹೀಗೆ ಕುಟುಂಬದಿಂದ ದೂರಾದ, ಮಕ್ಕಳ ಹಾರೈಕೆಯಿಂದ ವಂಚಿತರಾದ ಹಿರಿಯ ನೊಂದ ಜೀವಗಳಿಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ಜೆಎಸ್ ಎಸ್ ಸಂಸ್ಥೆಯು ‘ಹಿರಿಯರ ಮನೆ’ಯನ್ನು ಆಗಸ್ಟ್ 11, 2000ರಂದು ಮೈಸೂರಿನಲ್ಲಿ ಆರಂಭಿಸಿತು.

ಇದರಲ್ಲಿ ಕುಟುಂಬದಿಂದ ಬೇರ್ಪಟ್ಟ ಹಿರಿಯರಿಗೆ ಉಚಿತ ವಸತಿ, ಬೋರ್ಡಿಂಗ್ ಮತ್ತು ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತದೆ. ಅಲ್ಲದೆ ಜೆಎಸ್ ಎಸ್ ಹಿರಿಯರ ಮನೆ ಸುತ್ತೂರು ಶ್ರೀಕ್ಷೇತ್ರದ ಪ್ರಶಾಂತ ಪರಿಸರದಲ್ಲಿ ಎರಡು ಹಿರಿಯ ನಾಗರಿಕರ ಮನೆಗಳನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಒಂದು ಉಚಿತವಾಗಿದೆ. ಇಲ್ಲಿ ಐವತ್ತು ಮಂದಿ ಆಶ್ರಯ ಪಡೆದುಕೊಂಡಿದ್ದು, ತಮ್ಮ ವೃದ್ಧಾಪ್ಯವನ್ನು ನೆಮ್ಮದಿಯಿಂದ ಕಳೆಯುತ್ತಿದ್ದಾರೆ.

1090 ಹಿರಿಯರ ಸಹಾಯವಾಣಿ

ಜೆಎಸ್‌ ಎಸ್ ವೃದ್ಧಾಶ್ರಮ ಸಾಕಷ್ಟು ಸೌಲಭ್ಯಗಳನ್ನು ಈ ಮನೆಗಳಲ್ಲಿ ಹಿರಿಯರಿಗೆ ಕಲ್ಪಿಸಿದೆ. ಈ ವೃದ್ಧಾಶ್ರಮದಲ್ಲಿ ಹಿರಿಯರಿಗಾಗಿ ಉಚಿತ ವಸತಿ, ಗ್ರಂಥಾಲಯ, 24 ಗಂಟೆಗಳ ಕಾಲ ಬ್ರಾಡ್‌ ಬ್ಯಾಂಡ್‌ ಇಂಟರ್ನೆಟ್ ಸಂಪರ್ಕ ಮತ್ತು ಕೇಬಲ್ ಟಿವಿ ಸೌಲಭ್ಯ, ಸುಂದರವಾದ ಉದ್ಯಾನವನ, ವಾರಕ್ಕೊಮ್ಮೆ ವೈದ್ಯಕೀಯ ತಪಾಸಣೆ, ಸಮತೋಲನ ಆಹಾರ, ಆಗಾಗ್ಗೆ ದಾದಿಯರಿಂದ ಭೇಟಿ, ಕ್ರೀಡಾ ಚಟುವಟಿಕೆಗಳು, ನಿಯಮಿತ ಭಜನೆ ಮತ್ತು ಧ್ಯಾನ, ಯೋಗ, ಪ್ರಾಣಾಯಾಮ ಮಾಡಿಸುವ ಜತೆಗೆ ಪ್ರಕೃತಿ ಚಿಕಿತ್ಸೆ ಸೌಲಭ್ಯಗಳು, ಆಗಾಗ್ಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಎಲ್ಲ ರಾಷ್ಟ್ರೀಯ ಮತ್ತು ಇತರ ಹಬ್ಬಗಳ ಆಚರಣೆ ಮಾಡುವ ಮೂಲಕ ಹಿರಿಯರು ಒಂದಿಷ್ಟು ಸುಂದರ ಕ್ಷಣೆಗಳನ್ನು ಅನುಭವಿಸಲು ಇಲ್ಲಿ ಅವಕಾಶ ನೀಡಲಾಗುತ್ತದೆ.

ಜೆಎಸ್‌ ಎಸ್ ಹಿರಿಯರ ಮನೆಯ ವಿಳಾಸ ಮತ್ತು ಸಂಪರ್ಕ ಸಂಖ್ಯೆ: ಜೆಎಸ್ಎಸ್ ವೃದ್ಧಾಶ್ರಮ, ಅರವಿಂದನಗರ, ಮೈಸೂರು. ದೂರವಾಣಿ ಸಂಖ್ಯೆ: 0821-2548252 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ನಿರ್ದೇಶಕರು, ಸಾಮಾನ್ಯ ಅಭಿವೃದ್ಧಿ ವಿಭಾಗ, ಜೆಎಸ್‌ಎಸ್ ಮಹಾವಿದ್ಯಾಪೀಠ, ಮೈಸೂರು- 0821-2548206.

andolana

Recent Posts

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದ್ದಾರೆ: ಸಚಿವ ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ-ಕೇಂದ್ರ ಸಚಿವ ಕುಮಾರಸ್ವಾಮಿ ನಡುವಿನ ಜಟಾಪಟಿಯಲ್ಲಿ ಸಾಮಾಜಿಕ ನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವುಗಳನ್ನು ಸಚಿವ ಪರಮೇಶ್ವರ್‌…

12 mins ago

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ

ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್‌ ಸ್ಪೆಷಾಲಿಟಿ…

41 mins ago

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌

ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಪವಿತ್ರಾ ಎಂಬ…

1 hour ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸದ್ಯಕ್ಕೆ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

2 hours ago

ಹಾಸನ| ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ: ಸ್ಕೂಟರ್‌ನಿಂದ ಬಿದ್ದು ಯುವತಿ ಸಾವು

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…

2 hours ago

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

5 hours ago