• ಪ್ರಶಾಂತ್ ಎಸ್.
ಇತ್ತೀಚೆಗೆ ಕುಟುಂಬದೊಳಗಿನ ಮಾನವ ಸಂಬಂಧಗಳ ಮೌಲ್ಯಗಳು ಕಡಿಮೆಯಾಗಿ ಹಿರಿಯ ಜೀವಗಳು ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುವಂತಾಗಿದೆ. ಮುಪ್ಪಾಗುತ್ತಿದ್ದಂತೆ ಬಂಧು-ಬಾಂಧವರಿಂದ ದೂರ, ಸ್ವಂತ ಮಕ್ಕಳಿಂದ ತಾತ್ಸಾರ ಇವುಗಳ ನಡುವೆ ಹಿರಿಯರ ಬದುಕು ಅತಂತ್ರವಾಗುವುದಂತೂ ನಿಜ.
ಆಧುನಿಕತೆ, ಕುಟುಂಬ ವಿಘಟನೆ ಮತ್ತು ಪಾಶ್ಚಿಮಾತ್ಯ ಜೀವನಶೈಲಿಗಳು ಅಳವಡಿಕೆ ಇಂದು ಕುಟುಂಬಗಳನ್ನು ಹೊಡೆಯುತ್ತಿದೆ ಎಂದರೆ ತಪ್ಪಾಗಲಾರದು. ಈ ಪದ್ಧತಿಗಳು ಅನೇಕ ವಯೋವೃದ್ಧರನ್ನು ಒಂಟಿ ಜೀವಿಗಳನ್ನಾಗಿಸಿದೆ.
ಹೀಗೆ ಕುಟುಂಬದಿಂದ ದೂರಾದ, ಮಕ್ಕಳ ಹಾರೈಕೆಯಿಂದ ವಂಚಿತರಾದ ಹಿರಿಯ ನೊಂದ ಜೀವಗಳಿಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ಜೆಎಸ್ ಎಸ್ ಸಂಸ್ಥೆಯು ‘ಹಿರಿಯರ ಮನೆ’ಯನ್ನು ಆಗಸ್ಟ್ 11, 2000ರಂದು ಮೈಸೂರಿನಲ್ಲಿ ಆರಂಭಿಸಿತು.
ಇದರಲ್ಲಿ ಕುಟುಂಬದಿಂದ ಬೇರ್ಪಟ್ಟ ಹಿರಿಯರಿಗೆ ಉಚಿತ ವಸತಿ, ಬೋರ್ಡಿಂಗ್ ಮತ್ತು ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತದೆ. ಅಲ್ಲದೆ ಜೆಎಸ್ ಎಸ್ ಹಿರಿಯರ ಮನೆ ಸುತ್ತೂರು ಶ್ರೀಕ್ಷೇತ್ರದ ಪ್ರಶಾಂತ ಪರಿಸರದಲ್ಲಿ ಎರಡು ಹಿರಿಯ ನಾಗರಿಕರ ಮನೆಗಳನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಒಂದು ಉಚಿತವಾಗಿದೆ. ಇಲ್ಲಿ ಐವತ್ತು ಮಂದಿ ಆಶ್ರಯ ಪಡೆದುಕೊಂಡಿದ್ದು, ತಮ್ಮ ವೃದ್ಧಾಪ್ಯವನ್ನು ನೆಮ್ಮದಿಯಿಂದ ಕಳೆಯುತ್ತಿದ್ದಾರೆ.
1090 ಹಿರಿಯರ ಸಹಾಯವಾಣಿ
ಜೆಎಸ್ ಎಸ್ ವೃದ್ಧಾಶ್ರಮ ಸಾಕಷ್ಟು ಸೌಲಭ್ಯಗಳನ್ನು ಈ ಮನೆಗಳಲ್ಲಿ ಹಿರಿಯರಿಗೆ ಕಲ್ಪಿಸಿದೆ. ಈ ವೃದ್ಧಾಶ್ರಮದಲ್ಲಿ ಹಿರಿಯರಿಗಾಗಿ ಉಚಿತ ವಸತಿ, ಗ್ರಂಥಾಲಯ, 24 ಗಂಟೆಗಳ ಕಾಲ ಬ್ರಾಡ್ ಬ್ಯಾಂಡ್ ಇಂಟರ್ನೆಟ್ ಸಂಪರ್ಕ ಮತ್ತು ಕೇಬಲ್ ಟಿವಿ ಸೌಲಭ್ಯ, ಸುಂದರವಾದ ಉದ್ಯಾನವನ, ವಾರಕ್ಕೊಮ್ಮೆ ವೈದ್ಯಕೀಯ ತಪಾಸಣೆ, ಸಮತೋಲನ ಆಹಾರ, ಆಗಾಗ್ಗೆ ದಾದಿಯರಿಂದ ಭೇಟಿ, ಕ್ರೀಡಾ ಚಟುವಟಿಕೆಗಳು, ನಿಯಮಿತ ಭಜನೆ ಮತ್ತು ಧ್ಯಾನ, ಯೋಗ, ಪ್ರಾಣಾಯಾಮ ಮಾಡಿಸುವ ಜತೆಗೆ ಪ್ರಕೃತಿ ಚಿಕಿತ್ಸೆ ಸೌಲಭ್ಯಗಳು, ಆಗಾಗ್ಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಎಲ್ಲ ರಾಷ್ಟ್ರೀಯ ಮತ್ತು ಇತರ ಹಬ್ಬಗಳ ಆಚರಣೆ ಮಾಡುವ ಮೂಲಕ ಹಿರಿಯರು ಒಂದಿಷ್ಟು ಸುಂದರ ಕ್ಷಣೆಗಳನ್ನು ಅನುಭವಿಸಲು ಇಲ್ಲಿ ಅವಕಾಶ ನೀಡಲಾಗುತ್ತದೆ.
ಜೆಎಸ್ ಎಸ್ ಹಿರಿಯರ ಮನೆಯ ವಿಳಾಸ ಮತ್ತು ಸಂಪರ್ಕ ಸಂಖ್ಯೆ: ಜೆಎಸ್ಎಸ್ ವೃದ್ಧಾಶ್ರಮ, ಅರವಿಂದನಗರ, ಮೈಸೂರು. ದೂರವಾಣಿ ಸಂಖ್ಯೆ: 0821-2548252 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ನಿರ್ದೇಶಕರು, ಸಾಮಾನ್ಯ ಅಭಿವೃದ್ಧಿ ವಿಭಾಗ, ಜೆಎಸ್ಎಸ್ ಮಹಾವಿದ್ಯಾಪೀಠ, ಮೈಸೂರು- 0821-2548206.
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…
ಚಾಮರಾಜನಗರ: ಇಟ್ಟಿಗೆ ಬೇಯಿಸಲು ಮರಗಳ ಮಾರಣಹೋಮ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಹಲವು ಗ್ರಾಮಗಳಲ್ಲಿ…
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ…
ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.…
ಮಂಡ್ಯ: ಆಧುನಿಕ ಜೀವನದ ಒತ್ತಡದ ಬದುಕಿನಲ್ಲಿ ಎಲ್ಲರಿಗೂ ಅವರದ್ದೇ ಆದ ಅವಸರಗಳು. ತನ್ನ ಸುತ್ತಮುತ್ತಲಿನ ನೊಂದವರು, ಸಂಕಷ್ಟದಲ್ಲಿರುವವರ ಕಡೆ ಕಣ್ಣೆತ್ತಿಯೂ…