ಆಂದೋಲನ ಪುರವಣಿ

ಅರವಿಂದನಗರದಲ್ಲೊಂದು ಹಿರಿಯರ ಮನೆ

• ಪ್ರಶಾಂತ್ ಎಸ್.

ಇತ್ತೀಚೆಗೆ ಕುಟುಂಬದೊಳಗಿನ ಮಾನವ ಸಂಬಂಧಗಳ ಮೌಲ್ಯಗಳು ಕಡಿಮೆಯಾಗಿ ಹಿರಿಯ ಜೀವಗಳು ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುವಂತಾಗಿದೆ. ಮುಪ್ಪಾಗುತ್ತಿದ್ದಂತೆ ಬಂಧು-ಬಾಂಧವರಿಂದ ದೂರ, ಸ್ವಂತ ಮಕ್ಕಳಿಂದ ತಾತ್ಸಾರ ಇವುಗಳ ನಡುವೆ ಹಿರಿಯರ ಬದುಕು ಅತಂತ್ರವಾಗುವುದಂತೂ ನಿಜ.

ಆಧುನಿಕತೆ, ಕುಟುಂಬ ವಿಘಟನೆ ಮತ್ತು ಪಾಶ್ಚಿಮಾತ್ಯ ಜೀವನಶೈಲಿಗಳು ಅಳವಡಿಕೆ ಇಂದು ಕುಟುಂಬಗಳನ್ನು ಹೊಡೆಯುತ್ತಿದೆ ಎಂದರೆ ತಪ್ಪಾಗಲಾರದು. ಈ ಪದ್ಧತಿಗಳು ಅನೇಕ ವಯೋವೃದ್ಧರನ್ನು ಒಂಟಿ ಜೀವಿಗಳನ್ನಾಗಿಸಿದೆ.

ಹೀಗೆ ಕುಟುಂಬದಿಂದ ದೂರಾದ, ಮಕ್ಕಳ ಹಾರೈಕೆಯಿಂದ ವಂಚಿತರಾದ ಹಿರಿಯ ನೊಂದ ಜೀವಗಳಿಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ಜೆಎಸ್ ಎಸ್ ಸಂಸ್ಥೆಯು ‘ಹಿರಿಯರ ಮನೆ’ಯನ್ನು ಆಗಸ್ಟ್ 11, 2000ರಂದು ಮೈಸೂರಿನಲ್ಲಿ ಆರಂಭಿಸಿತು.

ಇದರಲ್ಲಿ ಕುಟುಂಬದಿಂದ ಬೇರ್ಪಟ್ಟ ಹಿರಿಯರಿಗೆ ಉಚಿತ ವಸತಿ, ಬೋರ್ಡಿಂಗ್ ಮತ್ತು ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತದೆ. ಅಲ್ಲದೆ ಜೆಎಸ್ ಎಸ್ ಹಿರಿಯರ ಮನೆ ಸುತ್ತೂರು ಶ್ರೀಕ್ಷೇತ್ರದ ಪ್ರಶಾಂತ ಪರಿಸರದಲ್ಲಿ ಎರಡು ಹಿರಿಯ ನಾಗರಿಕರ ಮನೆಗಳನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಒಂದು ಉಚಿತವಾಗಿದೆ. ಇಲ್ಲಿ ಐವತ್ತು ಮಂದಿ ಆಶ್ರಯ ಪಡೆದುಕೊಂಡಿದ್ದು, ತಮ್ಮ ವೃದ್ಧಾಪ್ಯವನ್ನು ನೆಮ್ಮದಿಯಿಂದ ಕಳೆಯುತ್ತಿದ್ದಾರೆ.

1090 ಹಿರಿಯರ ಸಹಾಯವಾಣಿ

ಜೆಎಸ್‌ ಎಸ್ ವೃದ್ಧಾಶ್ರಮ ಸಾಕಷ್ಟು ಸೌಲಭ್ಯಗಳನ್ನು ಈ ಮನೆಗಳಲ್ಲಿ ಹಿರಿಯರಿಗೆ ಕಲ್ಪಿಸಿದೆ. ಈ ವೃದ್ಧಾಶ್ರಮದಲ್ಲಿ ಹಿರಿಯರಿಗಾಗಿ ಉಚಿತ ವಸತಿ, ಗ್ರಂಥಾಲಯ, 24 ಗಂಟೆಗಳ ಕಾಲ ಬ್ರಾಡ್‌ ಬ್ಯಾಂಡ್‌ ಇಂಟರ್ನೆಟ್ ಸಂಪರ್ಕ ಮತ್ತು ಕೇಬಲ್ ಟಿವಿ ಸೌಲಭ್ಯ, ಸುಂದರವಾದ ಉದ್ಯಾನವನ, ವಾರಕ್ಕೊಮ್ಮೆ ವೈದ್ಯಕೀಯ ತಪಾಸಣೆ, ಸಮತೋಲನ ಆಹಾರ, ಆಗಾಗ್ಗೆ ದಾದಿಯರಿಂದ ಭೇಟಿ, ಕ್ರೀಡಾ ಚಟುವಟಿಕೆಗಳು, ನಿಯಮಿತ ಭಜನೆ ಮತ್ತು ಧ್ಯಾನ, ಯೋಗ, ಪ್ರಾಣಾಯಾಮ ಮಾಡಿಸುವ ಜತೆಗೆ ಪ್ರಕೃತಿ ಚಿಕಿತ್ಸೆ ಸೌಲಭ್ಯಗಳು, ಆಗಾಗ್ಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಎಲ್ಲ ರಾಷ್ಟ್ರೀಯ ಮತ್ತು ಇತರ ಹಬ್ಬಗಳ ಆಚರಣೆ ಮಾಡುವ ಮೂಲಕ ಹಿರಿಯರು ಒಂದಿಷ್ಟು ಸುಂದರ ಕ್ಷಣೆಗಳನ್ನು ಅನುಭವಿಸಲು ಇಲ್ಲಿ ಅವಕಾಶ ನೀಡಲಾಗುತ್ತದೆ.

ಜೆಎಸ್‌ ಎಸ್ ಹಿರಿಯರ ಮನೆಯ ವಿಳಾಸ ಮತ್ತು ಸಂಪರ್ಕ ಸಂಖ್ಯೆ: ಜೆಎಸ್ಎಸ್ ವೃದ್ಧಾಶ್ರಮ, ಅರವಿಂದನಗರ, ಮೈಸೂರು. ದೂರವಾಣಿ ಸಂಖ್ಯೆ: 0821-2548252 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ನಿರ್ದೇಶಕರು, ಸಾಮಾನ್ಯ ಅಭಿವೃದ್ಧಿ ವಿಭಾಗ, ಜೆಎಸ್‌ಎಸ್ ಮಹಾವಿದ್ಯಾಪೀಠ, ಮೈಸೂರು- 0821-2548206.

andolana

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

12 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

36 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

56 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

2 hours ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago