ಆಂದೋಲನ ಪುರವಣಿ

ಅರವಿಂದನಗರದಲ್ಲೊಂದು ಹಿರಿಯರ ಮನೆ

• ಪ್ರಶಾಂತ್ ಎಸ್.

ಇತ್ತೀಚೆಗೆ ಕುಟುಂಬದೊಳಗಿನ ಮಾನವ ಸಂಬಂಧಗಳ ಮೌಲ್ಯಗಳು ಕಡಿಮೆಯಾಗಿ ಹಿರಿಯ ಜೀವಗಳು ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುವಂತಾಗಿದೆ. ಮುಪ್ಪಾಗುತ್ತಿದ್ದಂತೆ ಬಂಧು-ಬಾಂಧವರಿಂದ ದೂರ, ಸ್ವಂತ ಮಕ್ಕಳಿಂದ ತಾತ್ಸಾರ ಇವುಗಳ ನಡುವೆ ಹಿರಿಯರ ಬದುಕು ಅತಂತ್ರವಾಗುವುದಂತೂ ನಿಜ.

ಆಧುನಿಕತೆ, ಕುಟುಂಬ ವಿಘಟನೆ ಮತ್ತು ಪಾಶ್ಚಿಮಾತ್ಯ ಜೀವನಶೈಲಿಗಳು ಅಳವಡಿಕೆ ಇಂದು ಕುಟುಂಬಗಳನ್ನು ಹೊಡೆಯುತ್ತಿದೆ ಎಂದರೆ ತಪ್ಪಾಗಲಾರದು. ಈ ಪದ್ಧತಿಗಳು ಅನೇಕ ವಯೋವೃದ್ಧರನ್ನು ಒಂಟಿ ಜೀವಿಗಳನ್ನಾಗಿಸಿದೆ.

ಹೀಗೆ ಕುಟುಂಬದಿಂದ ದೂರಾದ, ಮಕ್ಕಳ ಹಾರೈಕೆಯಿಂದ ವಂಚಿತರಾದ ಹಿರಿಯ ನೊಂದ ಜೀವಗಳಿಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ಜೆಎಸ್ ಎಸ್ ಸಂಸ್ಥೆಯು ‘ಹಿರಿಯರ ಮನೆ’ಯನ್ನು ಆಗಸ್ಟ್ 11, 2000ರಂದು ಮೈಸೂರಿನಲ್ಲಿ ಆರಂಭಿಸಿತು.

ಇದರಲ್ಲಿ ಕುಟುಂಬದಿಂದ ಬೇರ್ಪಟ್ಟ ಹಿರಿಯರಿಗೆ ಉಚಿತ ವಸತಿ, ಬೋರ್ಡಿಂಗ್ ಮತ್ತು ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತದೆ. ಅಲ್ಲದೆ ಜೆಎಸ್ ಎಸ್ ಹಿರಿಯರ ಮನೆ ಸುತ್ತೂರು ಶ್ರೀಕ್ಷೇತ್ರದ ಪ್ರಶಾಂತ ಪರಿಸರದಲ್ಲಿ ಎರಡು ಹಿರಿಯ ನಾಗರಿಕರ ಮನೆಗಳನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಒಂದು ಉಚಿತವಾಗಿದೆ. ಇಲ್ಲಿ ಐವತ್ತು ಮಂದಿ ಆಶ್ರಯ ಪಡೆದುಕೊಂಡಿದ್ದು, ತಮ್ಮ ವೃದ್ಧಾಪ್ಯವನ್ನು ನೆಮ್ಮದಿಯಿಂದ ಕಳೆಯುತ್ತಿದ್ದಾರೆ.

1090 ಹಿರಿಯರ ಸಹಾಯವಾಣಿ

ಜೆಎಸ್‌ ಎಸ್ ವೃದ್ಧಾಶ್ರಮ ಸಾಕಷ್ಟು ಸೌಲಭ್ಯಗಳನ್ನು ಈ ಮನೆಗಳಲ್ಲಿ ಹಿರಿಯರಿಗೆ ಕಲ್ಪಿಸಿದೆ. ಈ ವೃದ್ಧಾಶ್ರಮದಲ್ಲಿ ಹಿರಿಯರಿಗಾಗಿ ಉಚಿತ ವಸತಿ, ಗ್ರಂಥಾಲಯ, 24 ಗಂಟೆಗಳ ಕಾಲ ಬ್ರಾಡ್‌ ಬ್ಯಾಂಡ್‌ ಇಂಟರ್ನೆಟ್ ಸಂಪರ್ಕ ಮತ್ತು ಕೇಬಲ್ ಟಿವಿ ಸೌಲಭ್ಯ, ಸುಂದರವಾದ ಉದ್ಯಾನವನ, ವಾರಕ್ಕೊಮ್ಮೆ ವೈದ್ಯಕೀಯ ತಪಾಸಣೆ, ಸಮತೋಲನ ಆಹಾರ, ಆಗಾಗ್ಗೆ ದಾದಿಯರಿಂದ ಭೇಟಿ, ಕ್ರೀಡಾ ಚಟುವಟಿಕೆಗಳು, ನಿಯಮಿತ ಭಜನೆ ಮತ್ತು ಧ್ಯಾನ, ಯೋಗ, ಪ್ರಾಣಾಯಾಮ ಮಾಡಿಸುವ ಜತೆಗೆ ಪ್ರಕೃತಿ ಚಿಕಿತ್ಸೆ ಸೌಲಭ್ಯಗಳು, ಆಗಾಗ್ಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಎಲ್ಲ ರಾಷ್ಟ್ರೀಯ ಮತ್ತು ಇತರ ಹಬ್ಬಗಳ ಆಚರಣೆ ಮಾಡುವ ಮೂಲಕ ಹಿರಿಯರು ಒಂದಿಷ್ಟು ಸುಂದರ ಕ್ಷಣೆಗಳನ್ನು ಅನುಭವಿಸಲು ಇಲ್ಲಿ ಅವಕಾಶ ನೀಡಲಾಗುತ್ತದೆ.

ಜೆಎಸ್‌ ಎಸ್ ಹಿರಿಯರ ಮನೆಯ ವಿಳಾಸ ಮತ್ತು ಸಂಪರ್ಕ ಸಂಖ್ಯೆ: ಜೆಎಸ್ಎಸ್ ವೃದ್ಧಾಶ್ರಮ, ಅರವಿಂದನಗರ, ಮೈಸೂರು. ದೂರವಾಣಿ ಸಂಖ್ಯೆ: 0821-2548252 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ನಿರ್ದೇಶಕರು, ಸಾಮಾನ್ಯ ಅಭಿವೃದ್ಧಿ ವಿಭಾಗ, ಜೆಎಸ್‌ಎಸ್ ಮಹಾವಿದ್ಯಾಪೀಠ, ಮೈಸೂರು- 0821-2548206.

andolana

Recent Posts

ಪೈರಸಿ ವಿರುದ್ಧ ನಟ ಜಗ್ಗೇಶ್‌ ಸಮರ: ಓರ್ವನ ಬಂಧನ

ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್‌ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್‌ ಪೊಲೀಸ್‌…

60 mins ago

ಹೊಸ ವರ್ಷ ಆಚರಣೆಗೆ ಮಂಡ್ಯ ಜಿಲ್ಲೆ ಸಜ್ಜು: ಕಾವೇರಿ ತೀರದಲ್ಲಿ ನಿಷೇಧಾಜ್ಞೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ…

1 hour ago

ವೈವಿಧ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು: ಸಿಎಂ ಸಿದ್ದರಾಮಯ್ಯ

ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ…

1 hour ago

ಬಾಂಗ್ಲಾದೇಶಿಗರ ಉದ್ಧಟತನ: ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಿಷ್ಟು.!

ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ…

2 hours ago

ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯದ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…

2 hours ago

ಹೊಸ ವರ್ಷಾಚರಣೆ: ಮೈಸೂರಿನಲ್ಲಿ ಅಬಕಾರಿ ಪೊಲೀಸರ ಅಲರ್ಟ್

ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…

3 hours ago