ಆಂದೋಲನ ಪುರವಣಿ

ಅರವಿಂದನಗರದಲ್ಲೊಂದು ಹಿರಿಯರ ಮನೆ

• ಪ್ರಶಾಂತ್ ಎಸ್.

ಇತ್ತೀಚೆಗೆ ಕುಟುಂಬದೊಳಗಿನ ಮಾನವ ಸಂಬಂಧಗಳ ಮೌಲ್ಯಗಳು ಕಡಿಮೆಯಾಗಿ ಹಿರಿಯ ಜೀವಗಳು ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುವಂತಾಗಿದೆ. ಮುಪ್ಪಾಗುತ್ತಿದ್ದಂತೆ ಬಂಧು-ಬಾಂಧವರಿಂದ ದೂರ, ಸ್ವಂತ ಮಕ್ಕಳಿಂದ ತಾತ್ಸಾರ ಇವುಗಳ ನಡುವೆ ಹಿರಿಯರ ಬದುಕು ಅತಂತ್ರವಾಗುವುದಂತೂ ನಿಜ.

ಆಧುನಿಕತೆ, ಕುಟುಂಬ ವಿಘಟನೆ ಮತ್ತು ಪಾಶ್ಚಿಮಾತ್ಯ ಜೀವನಶೈಲಿಗಳು ಅಳವಡಿಕೆ ಇಂದು ಕುಟುಂಬಗಳನ್ನು ಹೊಡೆಯುತ್ತಿದೆ ಎಂದರೆ ತಪ್ಪಾಗಲಾರದು. ಈ ಪದ್ಧತಿಗಳು ಅನೇಕ ವಯೋವೃದ್ಧರನ್ನು ಒಂಟಿ ಜೀವಿಗಳನ್ನಾಗಿಸಿದೆ.

ಹೀಗೆ ಕುಟುಂಬದಿಂದ ದೂರಾದ, ಮಕ್ಕಳ ಹಾರೈಕೆಯಿಂದ ವಂಚಿತರಾದ ಹಿರಿಯ ನೊಂದ ಜೀವಗಳಿಗೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಮಾರ್ಗದರ್ಶನದೊಂದಿಗೆ ಜೆಎಸ್ ಎಸ್ ಸಂಸ್ಥೆಯು ‘ಹಿರಿಯರ ಮನೆ’ಯನ್ನು ಆಗಸ್ಟ್ 11, 2000ರಂದು ಮೈಸೂರಿನಲ್ಲಿ ಆರಂಭಿಸಿತು.

ಇದರಲ್ಲಿ ಕುಟುಂಬದಿಂದ ಬೇರ್ಪಟ್ಟ ಹಿರಿಯರಿಗೆ ಉಚಿತ ವಸತಿ, ಬೋರ್ಡಿಂಗ್ ಮತ್ತು ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತದೆ. ಅಲ್ಲದೆ ಜೆಎಸ್ ಎಸ್ ಹಿರಿಯರ ಮನೆ ಸುತ್ತೂರು ಶ್ರೀಕ್ಷೇತ್ರದ ಪ್ರಶಾಂತ ಪರಿಸರದಲ್ಲಿ ಎರಡು ಹಿರಿಯ ನಾಗರಿಕರ ಮನೆಗಳನ್ನು ನಿರ್ಮಿಸಲಾಗಿದ್ದು, ಅದರಲ್ಲಿ ಒಂದು ಉಚಿತವಾಗಿದೆ. ಇಲ್ಲಿ ಐವತ್ತು ಮಂದಿ ಆಶ್ರಯ ಪಡೆದುಕೊಂಡಿದ್ದು, ತಮ್ಮ ವೃದ್ಧಾಪ್ಯವನ್ನು ನೆಮ್ಮದಿಯಿಂದ ಕಳೆಯುತ್ತಿದ್ದಾರೆ.

1090 ಹಿರಿಯರ ಸಹಾಯವಾಣಿ

ಜೆಎಸ್‌ ಎಸ್ ವೃದ್ಧಾಶ್ರಮ ಸಾಕಷ್ಟು ಸೌಲಭ್ಯಗಳನ್ನು ಈ ಮನೆಗಳಲ್ಲಿ ಹಿರಿಯರಿಗೆ ಕಲ್ಪಿಸಿದೆ. ಈ ವೃದ್ಧಾಶ್ರಮದಲ್ಲಿ ಹಿರಿಯರಿಗಾಗಿ ಉಚಿತ ವಸತಿ, ಗ್ರಂಥಾಲಯ, 24 ಗಂಟೆಗಳ ಕಾಲ ಬ್ರಾಡ್‌ ಬ್ಯಾಂಡ್‌ ಇಂಟರ್ನೆಟ್ ಸಂಪರ್ಕ ಮತ್ತು ಕೇಬಲ್ ಟಿವಿ ಸೌಲಭ್ಯ, ಸುಂದರವಾದ ಉದ್ಯಾನವನ, ವಾರಕ್ಕೊಮ್ಮೆ ವೈದ್ಯಕೀಯ ತಪಾಸಣೆ, ಸಮತೋಲನ ಆಹಾರ, ಆಗಾಗ್ಗೆ ದಾದಿಯರಿಂದ ಭೇಟಿ, ಕ್ರೀಡಾ ಚಟುವಟಿಕೆಗಳು, ನಿಯಮಿತ ಭಜನೆ ಮತ್ತು ಧ್ಯಾನ, ಯೋಗ, ಪ್ರಾಣಾಯಾಮ ಮಾಡಿಸುವ ಜತೆಗೆ ಪ್ರಕೃತಿ ಚಿಕಿತ್ಸೆ ಸೌಲಭ್ಯಗಳು, ಆಗಾಗ್ಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಎಲ್ಲ ರಾಷ್ಟ್ರೀಯ ಮತ್ತು ಇತರ ಹಬ್ಬಗಳ ಆಚರಣೆ ಮಾಡುವ ಮೂಲಕ ಹಿರಿಯರು ಒಂದಿಷ್ಟು ಸುಂದರ ಕ್ಷಣೆಗಳನ್ನು ಅನುಭವಿಸಲು ಇಲ್ಲಿ ಅವಕಾಶ ನೀಡಲಾಗುತ್ತದೆ.

ಜೆಎಸ್‌ ಎಸ್ ಹಿರಿಯರ ಮನೆಯ ವಿಳಾಸ ಮತ್ತು ಸಂಪರ್ಕ ಸಂಖ್ಯೆ: ಜೆಎಸ್ಎಸ್ ವೃದ್ಧಾಶ್ರಮ, ಅರವಿಂದನಗರ, ಮೈಸೂರು. ದೂರವಾಣಿ ಸಂಖ್ಯೆ: 0821-2548252 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ನಿರ್ದೇಶಕರು, ಸಾಮಾನ್ಯ ಅಭಿವೃದ್ಧಿ ವಿಭಾಗ, ಜೆಎಸ್‌ಎಸ್ ಮಹಾವಿದ್ಯಾಪೀಠ, ಮೈಸೂರು- 0821-2548206.

andolana

Recent Posts

ಪಶ್ಚಿಮ ಬಂಗಾಳ | ಮತದಾನದ ಹೊತ್ತಲ್ಲೇ ಕಚ್ಚಾ ಬಾಂಬ್‌ ದಾಳಿ ; ಹಲವರು ಗಂಭೀರ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…

6 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 23 ಗುರುವಾರ

2 hours ago

ತಮಿಳುನಾಡು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ; ಬಿಗಿ ಭದ್ರತೆಯಲ್ಲಿ ಮತದಾನ ಆರಂಭ

ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…

3 hours ago

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

12 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

12 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

14 hours ago