ಆಂದೋಲನ ಪುರವಣಿ

ಆಪ್ತರ ಸಮ್ಮುಖದಲ್ಲಿ ಅಭಿಷೇಕ್ ಅಂಬರೀಷ್-ಅವಿವಾ ನಿಶ್ಚಿತಾರ್ಥ

ಮೈಸೂರು: ಮದುವೆ ಸದ್ಯಕ್ಕಿಲ್ಲ ಎನ್ನುತ್ತಿದ್ದ ನಟ ಅಭಿಷೇಕ್ ಅಂಬರೀಷ್ ತಮ್ಮ ಬಾಲ್ಯದ ಗೆಳತಿ, ಮಾಡೆಲ್ ಅವಿವಾ ಬಿದ್ದಪ್ಪ ಅವರ ಜತೆ ಇಂದು (ಡಿ.11) ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.


ಎರಡೂ ಕುಟುಂಬದ ಸದಸ್ಯರು ಹಾಗೂ ಕೆಲವೇ ಮಂದಿ ಆಪ್ತರು ಮಾತ್ರ ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ. ಅಂಬರೀಷ್ ಹಾಗೂ ಸುಮಲತಾ ಪುತ್ರನ ನಿಶ್ಚಿತಾರ್ಥದ ಕುರಿತು ಹಲವು ದಿನಗಳಿಂದ ಸುದ್ದಿ ಕೇಳಿಬರುತ್ತಿತ್ತು. ಆದರೆ ಕುಟುಂಬ ವರ್ಗದವರು ಈ ಮಾಹಿತಿಯನ್ನು ನಿರಾಕರಿಸಿದ್ದರು.

ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಆಗಿರುವ ಅವಿವಾ ಬಿದ್ದಪ್ಪ ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಕೆಲ ವರ್ಷಗಳಿಂದ ಪರಿಚಯ ಬೆಳೆದಿತ್ತು.


ಬೆಂಗಳೂರಿನ ಖಾಸಗಿ ಹೋಟೆಲ್‌ ನಲ್ಲಿ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಅವರು ಉಂಗುರ ಬದಲಾಯಿಸಿಕೊಂಡಿದ್ದಾರೆ. ಸಿನಿಮಾ, ರಾಜಕೀಯ ಕ್ಷೇತ್ರದ ಕೆಲವೇ ಕೆಲವು ಗಣ್ಯರು ಈ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ.
ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಈ ಜೋಡಿಗೆ ಅಭಿನಂದನೆ ಸಲ್ಲಿಸಿದ್ದಾರೆ. 2019ರಲ್ಲಿ ತೆರೆಕಂಡ ‘ಅಮರ್’ ಸಿನಿಮಾ ಮೂಲಕ ಅಭಿಷೇಕ್ ಅಂಬರೀಷ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಸೂರಿ ನಿರ್ದೇಶನ ಮಾಡುತ್ತಿರುವ ‘ಬ್ಯಾಡ್ ಮ್ಯಾನರ್ಸ್’ ಹಾಗೂ ಕೃಷ್ಣ ನಿರ್ದೇಶನದ ‘ಕಾಳಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

andolanait

Recent Posts

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

21 mins ago

ರಾಜ್ಯದಲ್ಲಿ ಬೆಳಗಿನ ವೇಳೆ ದಟ್ಟ ಮಂಜು: ಹವಾಮಾನ ತಜ್ಞರು ಹೇಳಿದ್ದಿಷ್ಟು.!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ ದಟ್ಟವಾದ…

29 mins ago

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಸಿಎಂ ಪಿಣರಾಯಿ ವಿಜಯನ್‌ ಹೇಳಿದ್ದಿಷ್ಟು.!

ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಆರೋಪಿಗಳ ಜೊತೆಗೆ ಸೋನಿಯಾ ಗಾಂಧಿ ನಂಟಿದೆ ಎಂದು ಸಿಎಂ ಪಿಣರಾಯಿ ವಿಜಯನ್‌…

1 hour ago

ಬಹುನಿರೀಕ್ಷಿತ ಮಾರ್ಕ್‌ ಹಾಗೂ 45 ಸಿನಿಮಾ ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌,…

2 hours ago

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

2 hours ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

3 hours ago