ಮೈಸೂರು: ಮದುವೆ ಸದ್ಯಕ್ಕಿಲ್ಲ ಎನ್ನುತ್ತಿದ್ದ ನಟ ಅಭಿಷೇಕ್ ಅಂಬರೀಷ್ ತಮ್ಮ ಬಾಲ್ಯದ ಗೆಳತಿ, ಮಾಡೆಲ್ ಅವಿವಾ ಬಿದ್ದಪ್ಪ ಅವರ ಜತೆ ಇಂದು (ಡಿ.11) ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಎರಡೂ ಕುಟುಂಬದ ಸದಸ್ಯರು ಹಾಗೂ ಕೆಲವೇ ಮಂದಿ ಆಪ್ತರು ಮಾತ್ರ ಈ ಸಮಾರಂಭಕ್ಕೆ ಸಾಕ್ಷಿ ಆಗಿದ್ದಾರೆ. ಅಂಬರೀಷ್ ಹಾಗೂ ಸುಮಲತಾ ಪುತ್ರನ ನಿಶ್ಚಿತಾರ್ಥದ ಕುರಿತು ಹಲವು ದಿನಗಳಿಂದ ಸುದ್ದಿ ಕೇಳಿಬರುತ್ತಿತ್ತು. ಆದರೆ ಕುಟುಂಬ ವರ್ಗದವರು ಈ ಮಾಹಿತಿಯನ್ನು ನಿರಾಕರಿಸಿದ್ದರು.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಅವರು ಉಂಗುರ ಬದಲಾಯಿಸಿಕೊಂಡಿದ್ದಾರೆ. ಸಿನಿಮಾ, ರಾಜಕೀಯ ಕ್ಷೇತ್ರದ ಕೆಲವೇ ಕೆಲವು ಗಣ್ಯರು ಈ ಸಮಾರಂಭಕ್ಕೆ ಹಾಜರಿ ಹಾಕಿದ್ದಾರೆ.
ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಈ ಜೋಡಿಗೆ ಅಭಿನಂದನೆ ಸಲ್ಲಿಸಿದ್ದಾರೆ. 2019ರಲ್ಲಿ ತೆರೆಕಂಡ ‘ಅಮರ್’ ಸಿನಿಮಾ ಮೂಲಕ ಅಭಿಷೇಕ್ ಅಂಬರೀಷ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಈಗ ಸೂರಿ ನಿರ್ದೇಶನ ಮಾಡುತ್ತಿರುವ ‘ಬ್ಯಾಡ್ ಮ್ಯಾನರ್ಸ್’ ಹಾಗೂ ಕೃಷ್ಣ ನಿರ್ದೇಶನದ ‘ಕಾಳಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…