ಇದೇ ತಿಂಗಳ 29ರಂದು ಸಿಎಂ ಬೊಮ್ಮಾಯಿ ಅವರಿಂದ ಸ್ಮಾರಕ ಲೋಕಾರ್ಪಣೆ
ಬೆಂಗಳೂರು-ಕನ್ನಡದ ಮೇರು ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದ್ದು,ಇದೇ ತಿಂಗಳ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.
ಮೈಸೂರಿನ ಎಚ್ಡಿ ಕೋಟೆಯ ಅಲ್ಲಾಳು ಗ್ರಾಮದಲ್ಲಿ ಐದು ಎಕರೆ ಜಾಗದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ.
ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಅಲ್ಲಾಳು ಗ್ರಾಮದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆಪ್ಟೆಂಬರ್ನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ಚಾಮುಂಡಿಪುರಂನ ವಾಸಿಯಾಗಿದ್ದ ವಿಷ್ಣುವರ್ಧನ್ ಅವರು ತಮ್ಮ ಶಾಲಾ ಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ್ದರು. ಮೈಸೂರಿನ ಜತೆ ಉತ್ತಮ ಒಡನಾಟ ಹೊಂದಿದ್ದ ಅವರು ತಮ್ಮ ಹೆಚ್ಚಿನ ಚಲನಚಿತ್ರಗಳ ಚಿತ್ರೀಕರಣವನ್ನು ಮೈಸೂರಿನಲ್ಲೇ ನಡೆಸಲು ಒತ್ತು ನೀಡಿದ್ದರು.
ವಿಷ್ಣುವರ್ಧನ್ ಅವರಿಗೆ ಸಂಬಂಧಿಸಿದ ಗ್ಯಾಲರಿ, ಆಡಿಟೋರಿಯಂ, ವಿಷ್ಣು ಪುತ್ಥಳಿ, ಕ್ಲಾಸ್ ರೂಮ್, ಕ್ಯಾಂಟೀನ್ ಏರಿಯಾ, ಹೀಗೆ ಈ ಸ್ಮಾರಕದಲ್ಲಿ ಹತ್ತು ಹಲವು ವಿಶೇಷತೆಗಳಿವೆ.
ವಿಷ್ಣು ಅಗಲಿದ 13 ವರ್ಷಗಳ ಬಳಿಕ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆ.15 ರಂದು ಸ್ಮಾರಕಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು. ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಆಗಲೇ 11 ಕೋಟಿ ರೂಪಾಯಿ ಮಂಜೂರು ಮಾಡಲಾಗಿತ್ತು. ಸುಮಾರು 13 ವರ್ಷಗಳ ಬಳಿಕ ಸ್ಮಾರಕ ಉದ್ಘಾಟನೆ ಆಗುತ್ತಿರುವುದು ಅಭಿಮಾನಿಗಳಲ್ಲಿ ಹರ್ಷ ತಂದಿದೆ. 2009ರ ಡಿ.30ರಂದು ಮೈಸೂರಿನಲ್ಲಿ ದಿಢೀರ್ ಆಗಿ ಮೃತಪಟ್ಟಿದ್ದರು. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಅವರ ಅಂತ್ಯಸಂಸ್ಕಾರ ನಡೆದರೂ ನಾನಾ ಕಾರಣಗಳಿಂದಾಗಿ ಅಲ್ಲಿ ಸ್ಮಾರಕ ನಿರ್ಮಿಸುವ ಕೆಲಸ ಕೈಗೂಡಲಿಲ್ಲ.
ದೆಹಲಿಯ ರಾಜಪಥದಲ್ಲಿ ಇತ್ತೀಚೆಗೆ ಅನಾವರಣಗೊಂಡ ನೇತಾಜಿ ಪ್ರತಿಮೆಯ ರೂವಾರಿ, ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯಲ್ಲಿ ಆರು ಅಡಿ ಎತ್ತರದ ವಿಷ್ಣು ದಾದಾ ಪ್ರತಿಮೆ ಪ್ರತಿಷ್ಠಾಪನೆಗೆ ಸಿದ್ಧವಾಗಿದೆ. ಬೆಂಗಳೂರಿನ ಎಂ.9 ಕಂಪೆನಿಯ ನಿಶ್ಚಲ್ ಸ್ಮಾರಕದ ರೂಪುರೇಷೆ ಸಿದ್ಧಪಡಿಸಿದ್ದಾರೆ. ಕೃಷ್ಣ ಶಿಲೆಯಲ್ಲಿ ಕೆತ್ತಲಾದ ವಿಷ್ಣುವಿನ ಪ್ರತಿಮೆ ಸುತ್ತಲೂ ವೃತ್ತಾಕಾರದ ಫೋಟೋ ಗ್ಯಾಲರಿ, ಗ್ಯಾಲರಿಯ ಇಬ್ಬದಿಯಲ್ಲಿಯೂ ವಿಷ್ಣುವರ್ಧನ್ ಅಭಿನಯದ ಸಿನಿಮಾಗಳ ಡಿಜಿಟಲ್ ಪೋಸ್ಟರ್ ಪ್ರದರ್ಶನ ಇರಲಿದೆ.
ಸ್ಮಾರಕ ಸ್ಥಳದಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರ ಮಾದರಿಯಲ್ಲಿ ಹವಾನಿಯಂತ್ರಿತ ಥಿಯೇಟರ್, ಪುರುಷ- ಮತ್ತು ಮಹಿಳಾ ಕಲಾವಿದರ ಡ್ರೆಸ್ಸಿಂಗ್ ಕೊಠಡಿ, ಸುಸಜ್ಜಿತ ಶೌಚಾಲಯ, ವಿಶಾಲವಾದ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ. ಸ್ಮಾರಕದ ಮುಂಭಾಗ ಸುಂದರವಾದ ಕಾರಂಜಿ ನಿರ್ಮಾಣವಾಗಿದೆ. ಸ್ಮಾರಕದ ಹೊರ ಆವರಣದಲ್ಲಿ ಸಸ್ಯೋದ್ಯಾನ ನಿರ್ಮಿಸಿ ವಿವಿಧ ಪ್ರಭೇದದ ಹೂವಿನ ಗಿಡಗಳನ್ನು ವೃತ್ತಾಕಾರದಲ್ಲಿ ನೆಟ್ಟು ಬೆಳೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರಿನ ಮತ್ತೊಂದು ಪ್ರವಾಸಿತಾಣವಾಗಿ ಗುರುತಿಸಿಕೊಳ್ಳುವ ನಿರೀಕ್ಷೆ ಇದೆ.
ವಿಷ್ಣುವರ್ಧನ್ ಅವರ ಸ್ಮಾರಕವನ್ನು ಬೆಂಗಳೂರಿನಲ್ಲಿ ನಿರ್ಮಿಸಬೇಕು ಎಂದು ಅಭಿಮಾನಿಗಳ ಬೇಡಿಕೆಗಳಿದ್ದವು, ಅವುಗಳ ನಡುವೆಯೇ ಮೈಸೂರಿನಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…