ಆಂದೋಲನ ಪುರವಣಿ

ನಟ ಸಾಹಸ ಸಿಂಹ ವಿಷ್ಣುವರ್ಧನ್‌ ಸ್ಮಾರಕ ಉದ್ಘಾಟನೆಗೆ ದಿನಾಂಕ ನಿಗದಿ

ಇದೇ ತಿಂಗಳ 29ರಂದು ಸಿಎಂ ಬೊಮ್ಮಾಯಿ ಅವರಿಂದ ಸ್ಮಾರಕ ಲೋಕಾರ್ಪಣೆ

ಬೆಂಗಳೂರು-ಕನ್ನಡದ ಮೇರು ನಟ ಸಾಹಸ ಸಿಂಹ ವಿಷ್ಣುವರ್ಧನ್‌ ಅವರ ಸ್ಮಾರಕ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದ್ದು,ಇದೇ ತಿಂಗಳ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಲೋಕಾರ್ಪಣೆ ಮಾಡಲಿದ್ದಾರೆ.
ಮೈಸೂರಿನ ಎಚ್ಡಿ‌ ಕೋಟೆಯ ಅಲ್ಲಾಳು ಗ್ರಾಮದಲ್ಲಿ‌ ಐದು ಎಕರೆ ಜಾಗದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ.
ಮೈಸೂರಿನ ಎಚ್‌.ಡಿ.ಕೋಟೆ ರಸ್ತೆಯಲ್ಲಿರುವ ಅಲ್ಲಾಳು ಗ್ರಾಮದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆಪ್ಟೆಂಬರ್‌ನಲ್ಲಿ ವಿಷ್ಣುವರ್ಧನ್‌ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ಚಾಮುಂಡಿಪುರಂನ ವಾಸಿಯಾಗಿದ್ದ ವಿಷ್ಣುವರ್ಧನ್‌ ಅವರು ತಮ್ಮ ಶಾಲಾ ಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ್ದರು. ಮೈಸೂರಿನ ಜತೆ ಉತ್ತಮ ಒಡನಾಟ ಹೊಂದಿದ್ದ ಅವರು ತಮ್ಮ ಹೆಚ್ಚಿನ ಚಲನಚಿತ್ರಗಳ ಚಿತ್ರೀಕರಣವನ್ನು ಮೈಸೂರಿನಲ್ಲೇ ನಡೆಸಲು ಒತ್ತು ನೀಡಿದ್ದರು.
ವಿಷ್ಣುವರ್ಧನ್ ಅವರಿಗೆ ಸಂಬಂಧಿಸಿದ ಗ್ಯಾಲರಿ, ಆಡಿಟೋರಿಯಂ, ವಿಷ್ಣು ಪುತ್ಥಳಿ, ಕ್ಲಾಸ್ ರೂಮ್, ಕ್ಯಾಂಟೀನ್ ಏರಿಯಾ, ಹೀಗೆ ಈ ಸ್ಮಾರಕದಲ್ಲಿ ಹತ್ತು ಹಲವು ವಿಶೇಷತೆಗಳಿವೆ.
ವಿಷ್ಣು ಅಗಲಿದ 13 ವರ್ಷಗಳ ಬಳಿಕ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆ‌.15 ರಂದು ಸ್ಮಾರಕಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಮಾರಕಕ್ಕೆ ಭೂಮಿ‌ ಪೂಜೆ ನೆರವೇರಿಸಿದ್ದರು. ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಆಗಲೇ 11 ಕೋಟಿ ರೂಪಾಯಿ ಮಂಜೂರು ಮಾಡಲಾಗಿತ್ತು. ಸುಮಾರು 13 ವರ್ಷಗಳ ಬಳಿಕ ಸ್ಮಾರಕ ಉದ್ಘಾಟನೆ ಆಗುತ್ತಿರುವುದು ಅಭಿಮಾನಿಗಳಲ್ಲಿ ಹರ್ಷ ತಂದಿದೆ. 2009ರ ಡಿ.30ರಂದು ಮೈಸೂರಿನಲ್ಲಿ ದಿಢೀರ್ ಆಗಿ ಮೃತಪಟ್ಟಿದ್ದರು. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಅವರ ಅಂತ್ಯಸಂಸ್ಕಾರ ನಡೆದರೂ ನಾನಾ ಕಾರಣಗಳಿಂದಾಗಿ ಅಲ್ಲಿ ಸ್ಮಾರಕ ನಿರ್ಮಿಸುವ ಕೆಲಸ ಕೈಗೂಡಲಿಲ್ಲ.
ದೆಹಲಿಯ ರಾಜಪಥದಲ್ಲಿ ಇತ್ತೀಚೆಗೆ ಅನಾವರಣಗೊಂಡ ನೇತಾಜಿ ಪ್ರತಿಮೆಯ ರೂವಾರಿ, ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯಲ್ಲಿ ಆರು ಅಡಿ ಎತ್ತರದ ವಿಷ್ಣು ದಾದಾ ಪ್ರತಿಮೆ ಪ್ರತಿಷ್ಠಾಪನೆಗೆ ಸಿದ್ಧವಾಗಿದೆ. ಬೆಂಗಳೂರಿನ ಎಂ.9 ಕಂಪೆನಿಯ ನಿಶ್ಚಲ್ ಸ್ಮಾರಕದ ರೂಪುರೇಷೆ ಸಿದ್ಧಪಡಿಸಿದ್ದಾರೆ. ಕೃಷ್ಣ ಶಿಲೆಯಲ್ಲಿ ಕೆತ್ತಲಾದ ವಿಷ್ಣುವಿನ ಪ್ರತಿಮೆ ಸುತ್ತಲೂ ವೃತ್ತಾಕಾರದ ಫೋಟೋ ಗ್ಯಾಲರಿ, ಗ್ಯಾಲರಿಯ ಇಬ್ಬದಿಯಲ್ಲಿಯೂ ವಿಷ್ಣುವರ್ಧನ್ ಅಭಿನಯದ ಸಿನಿಮಾಗಳ ಡಿಜಿಟಲ್ ಪೋಸ್ಟರ್ ಪ್ರದರ್ಶನ ಇರಲಿದೆ.
ಸ್ಮಾರಕ ಸ್ಥಳದಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರ ಮಾದರಿಯಲ್ಲಿ ಹವಾನಿಯಂತ್ರಿತ ಥಿಯೇಟರ್, ಪುರುಷ- ಮತ್ತು ಮಹಿಳಾ ಕಲಾವಿದರ ಡ್ರೆಸ್ಸಿಂಗ್ ಕೊಠಡಿ, ಸುಸಜ್ಜಿತ ಶೌಚಾಲಯ, ವಿಶಾಲವಾದ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ. ಸ್ಮಾರಕದ ಮುಂಭಾಗ ಸುಂದರವಾದ ಕಾರಂಜಿ ನಿರ್ಮಾಣವಾಗಿದೆ. ಸ್ಮಾರಕದ ಹೊರ ಆವರಣದಲ್ಲಿ ಸಸ್ಯೋದ್ಯಾನ ನಿರ್ಮಿಸಿ ವಿವಿಧ ಪ್ರಭೇದದ ಹೂವಿನ ಗಿಡಗಳನ್ನು ವೃತ್ತಾಕಾರದಲ್ಲಿ ನೆಟ್ಟು ಬೆಳೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರಿನ ಮತ್ತೊಂದು ಪ್ರವಾಸಿತಾಣವಾಗಿ ಗುರುತಿಸಿಕೊಳ್ಳುವ ನಿರೀಕ್ಷೆ ಇದೆ.
ವಿಷ್ಣುವರ್ಧನ್ ಅವರ ಸ್ಮಾರಕವನ್ನು ಬೆಂಗಳೂರಿನಲ್ಲಿ ನಿರ್ಮಿಸಬೇಕು ಎಂದು ಅಭಿಮಾನಿಗಳ ಬೇಡಿಕೆಗಳಿದ್ದವು, ಅವುಗಳ ನಡುವೆಯೇ ಮೈಸೂರಿನಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago