ಕರ್ನಾಟಕ 320 ಕಿಮೀ ಉದ್ದದ ಕರಾವಳಿ ತೀರ ಹೊಂದಿದೆ. ಆ ಮೂಲಕ ಸಮುದ್ರದ ಮೀನುಗಾರಿಕೆಗೆ ವಿಫುಲ ಅವಕಾಶಗಳಿವೆ. ಅದರಂತೆ 5.65 ಲಕ್ಷ ಹೆಕ್ಟೇರಿನಷ್ಟು ವಿವಿಧ ಒಳನಾಡು ಜಲಸಂಪನ್ಮೂಲಗಳೂ ಇದ್ದು ಒಳನಾಡು ಮೀನುಗಾರಿಕೆ ಹೆಚ್ಚಿನ ಅವಕಾಶವೂ ಇದೆ.
ಮೊನ್ನೆ ಮೊನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಒಳನಾಡು ಮೀನುಗಾರರ ಸಮಾವೇಶ ನಡೆದಿದೆ. ಅದಕ್ಕೆ ಪೂರಕವಾಗಿ ಉತ್ತಮ ಮಳೆಯಿಂದ ನಾಡಿನಾದ್ಯಂತ ಇರುವ ಬಹುತೇಕ ಕರೆ-ಕಟ್ಟೆಗಳು ತುಂಬಿವೆ. ಇದರಿಂದಾಗಿ ಒಳನಾಡು ಮೀನುಗಾರಿಕೆಗೆ ಮಹತ್ವ ಬಂದಿದೆ. ಜೊತೆಗೆ ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿಯೂ ಮೀನುಗಾರರಿಗೆ ಹಲವಾರು ಸೌಲಭ್ಯಗಳು ದೊರೆಯುತ್ತಿವೆ.
ರಾಜ್ಯದಲ್ಲಿ ಇರುವ ತರಬೇತಿ ಕೇಂದ್ರಗಳು
ಕೆಆರ್ಎಸ್, ಮಂಡ್ಯ (9535373793)
ಬೇತಮಂಗಲ (ಕೋಲಾರ)
ಬಿ.ಆರ್. ಪ್ರಾಜೆಕ್ಟ್ ಭದ್ರಾವತಿ
ಕಬಿನಿ, ಎಚ್.ಡಿ. ಕೋಟೆ (9986755434)
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 8277200300
ಇಲಾಖೆಯಿಂದ ಸಿಗುವ ಸೌಲಭ್ಯಗಳು
* ಮೀನು ಸಾಕಾಣೆ ಮಾಡುವವರೊಂದಿಗೆ ಸಮನ್ವುಂತೆ, ಮೇಲ್ವಿಚಾರಣೆ
* ಒಳನಾಡು ಮೀನುಗಾರಿಕೆ ವಲುಂದ ಅಭಿವೃದ್ಧಿಗಾಗಿ ಸಂಪನ್ಮೂಲಗಳ ಗರಿಷ್ಟ ಬಳಕೆಗೆ ಪೂರಕವಾಗಿ ಕಾರ್ಯ
* ಮೀನುಗಾರರ ಸಾವಾಜಿಕ ಹಾಗೂ ಆರ್ಥಿಕ ಸ್ಥಿತಿುಂನ್ನು ಸುಧಾರಿಸುವುದು
* ಮೀನು ವಾರುಕಟ್ಟೆಗೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಸೃಜಿಸುವುದು
* ಜಲಕೃಷಿಗೆ ಬೇಕಾದ ಉತ್ತಮ ಗುಣಮಟ್ಟದ ಮೀನುಮರಿಗಳ ಉತ್ಪಾದನೆ ಮತ್ತು ಸರಬರಾಜು
* ಮೀನು ಕೃಷಿಕರಿಗೆ ತಾಂತ್ರಿಕ ಸಹಾುಂ, ಸಿಬ್ಬಂದಿಗೆ ತರಬೇತಿ ನೀಡುವುದು
* ನಿಗದಿತ ಶುಲ್ಕ ಪಾವತಿಸಿ ಜಲಸಂಪನ್ಮೂಲಗಳಾದ ಜಲಾಶುಂಗಳು, ನದಿ ಭಾಗಗಳ ಮೀನು ಹಿಡಿುಂಲು ಪರವಾನಿಗೆ ನೀಡುವುದು.
* ಜೌಗು ಭೂಮಿ ಮತ್ತು ಸ್ವಂತ ಜಮೀನಿನಲ್ಲಿ ಮೀನು ಕೃಷಿ ಕೈಗೊಳ್ಳಲು ಮೀನು ಕೊಳ ನಿರ್ವಾಣಕ್ಕಾಗಿ ಸಹಾುಂ
* ಮೀನು ಮರಿ ಖರೀದಿಗೆ ಸಹಾುಂಧನ, ಅಲಂಕಾರಿಕ ಮೀನುಗಾರಿಕೆುಂನ್ನು ಪ್ರೋತ್ಸಾಹಿಸಲು ಅಕ್ವಾಪಾರ್ಕ್ ಸ್ಥಾಪನೆಗೆ ಸಹಾಯ.
* ಮೀನು ಮರಿ ಕೇಂದ್ರಗಳ ನವೀಕರಣ, ಜಲಾಶುಂದಲ್ಲಿ ಮೀನು ಮರಿ ಬಿತ್ತನೆ.
* ಮೀನುಗಾರರಿಗೆ ಫೈಬರ್ ಗ್ಲಾಸ್ ಹರಿಗೋಲು ವಿತರಣೆ
* ಮೀನುಗಾರಿಕೆಗೆ ಪೂರಕವಾಗಿ ಮಣ್ಣು ಮತ್ತು ನೀರಿನ ಗುಣಮಟ್ಟ ಉಚಿತ ಪರೀಕ್ಷೆ ಸೌಲಭ್ಯ (ಜಿಲ್ಲಾ ಮಟ್ಟದ ಕಚೇರಿಗಳಲ್ಲಿ)
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿ ಜಿಲ್ಲಾವಾರು ಮೀನುಗಾರರ ಸಂಘಗಳನ್ನು ರಚನೆ ಮಾಡಲಾಗುತ್ತಿದೆ. ಆ ಮೂಲಕ ಮೀನುಗಾರರಿಗೆ ಸೂಕ್ತ ಸಹಾಯಧನ, ಮೀನು ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ. ನಮ್ಮ ಮೀನುಗಾರಿಕೆ ಮಹಾಮಂಡಲದಿಂದ ಮೀನು ಮರಿ ನೀಡುವುದು, ತರಬೇತಿ ನೀಡುವ ಕಾರ್ಯ ಮಾಡುತ್ತಿದ್ದೇವೆ. ಅನುದಾನ ಹಂಚಿಕೆ ಆಧಾರದ ಮೇಲೆ ನಾವು ತರಬೇತಿ ಸೇರಿ ಇತರ ಸೌಲಭ್ಯಗಳನ್ನು ಒದಗಿಸುತ್ತೇವೆ. – ಎಂ.ಎನ್. ಸಿದ್ದಲಿಂಗರಾಜು, ಅಧ್ಯಕ್ಷರು, ಕರ್ನಾಟಕ ರಾಜ್ಯ ಮೀನುಗಾರಿಕೆ ಮಹಾಮಂಡಲ
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…