ಆಂದೋಲನ ಪುರವಣಿ

ತಾತ -ಮೊಮ್ಮಗ ಆಗಿ ಅನಂತನಾಗ್, ದಿಗಂತ್

ಅನಂತನಾಗ್ ಮತ್ತು ದಿಗಂತ್ ‘ಪಂಚರಂಗಿ’ ಚಿತ್ರದಲ್ಲಿ ಜೊತೆyAಗಿ ಕಾಣಿಸಿಕೊಂಡಿದ್ದರು. ಇದೀಗ ಅವರಿಬ್ಬರೂ ಒಂದು ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ. ಚಿತ್ರದ ಹೆಸರು ‘ತಿಮ್ಮಯ್ಯ – ತಿಮ್ಮಯ್ಯ’. ಗರುಡ ಮೋಷನ್ ಪಿಕ್ಚರ್ಸ್ ಪ್ರ್ತ್ಯೈ. ಲಿ. ಲಾಂಛನದಲ್ಲಿ ರಾಜೇಶ್ ಶರ್ಮ ನಿರ್ಮಿಸಿರುವ ಈ ಚಿತ್ರವನ್ನು ಸಂಜಯ್‌ ಶರ್ಮ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ.

ಹಿಂದಿ ಚಿತ್ರರಂಗದ ಹೆಸರಾಂತ ನಿರ್ದೇಶಕರ ಬಳಿ ಕೆಲಸ ಮಾಡಿ ಅನುಭವ ಪಡೆದಿರುವ ಸಂಜಯ್‌ ಶರ್ಮ ನಿರ್ದೇಶಿಸುತ್ತಿರುವ ಮೊದಲ ಚಿತ್ರವಿದು. ೮೫ರ ವಯಸ್ಸಿನ ತಾತನ ಪಾತ್ರ ಹಿರಿಯ ತಿಮ್ಮಯ್ಯನಾಗಿ ಅನಂತನಾಗ್ ನಟಿಸಿದರೆ, ಅವರ ಮೊಮ್ಮಗ ಕಿರಿಯ ತಿಮ್ಮಯ್ಯನ ಪಾತ್ರದಲ್ಲಿ ದಿಗಂತ್ ಅವರಿದ್ದಾರೆ. ಅವರೊಂದಿಗೆ ಶುಭ್ರ ಅಯ್ಯಪ್ಪ, ರುಕ್ಮಿಣಿ ವಿಜಯಕುವಾರ್, ವಿನೀತ್ ಬೀಪ್ ಕುಮಾರ್, ಪ್ರಕಾಶ್ ತುಮ್ಮಿನಾಡ್, ಕೆ.ಎಸ್.ಶ್ರೀಧರ್, ಮಿಮಿಕ್ರಿ ಗೋಪಿ, ಅಂಬುಜಾಕ್ಷಿ ಮುಂತಾದವರು ಇದ್ದಾರೆ.

ಅನೂಪ್ ಸೀಳಿನ್ ಸಂಗೀತ ಸಂಯೋಜನೆ, ಜಯಂತ್‌ ಕಾಯ್ಕಿಣಿ ಗೀತರಚನೆ, ಬಾಲಕೃಷ್ಣ ತೋಟ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ ಈ ಚಿತ್ರಕ್ಕಿದೆ. ಬೆಂಗಳೂರು, ಕೊಡಗು ಹಾಗೂ ಕುಣಿಗಲ್‌ನಲ್ಲಿ ಚಿತ್ರೀಕರಣ ನಡೆದಿದೆ. ಈ ಚಿತ್ರದ ಟೀಸರ್ ಈಗ ಬಿಡುಗಡೆಯಾಗಿದೆ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago