ವಾರದ ಮುಖ
ಕನ್ನಡದ ಕಥೆಗಾರ ಬನ್ನೂರಿನ ಅದೀಬ್ ಅಖ್ತರ್ ಬಳಿ ನೀವು ಈಗ ಯಾಕೆ ಬರೆಯುತ್ತಿಲ್ಲ ಸಾಹೇಬರೇ ಎಂದು ಕೇಳಿದರೆ ‘ಒಂದು ಕಥೆ ಬರೆದಿಟ್ಟಿರುವೆ. ಆದರೆ ಅದಕ್ಕೆ ಇನ್ನೂ ಹೆಸರು ಇಟ್ಟಿಲ್ಲ. ಹಾಗಾಗಿ ಅದು ನನ್ನಲ್ಲೇ ಉಳಿದು ಬಿಟ್ಟಿದೆ’ ಎಂದು ಮಗುವಿನ ಹಾಗೆ ನಗುತ್ತಾರೆ. ಆದರೆ ನಿಜವಾದ ವಿಷಯ ಏನೆಂದರೆ ಮೂರು ವರ್ಷಗಳ ಹಿಂದೆ ಮಿದುಳಿಗೆ ಲಘು ಆಘಾತಗೊಂಡು ಪ್ರಜ್ಞಾಹೀನರಾಗಿದ್ದ ಅದೀಬ್ ಈಗ ನಿಧಾನಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಮಡದಿ ರಶೀದಾ ಭಾನು ಪತಿಗೆ ಕಿವಿ ಮತ್ತು ಮಾತಿನ ಹಾಗೆ ಸಾಥ್ ನೀಡುತ್ತಿದ್ದಾರೆ. ಬನ್ನೂರಿನ ಮುಖ್ಯ ರಸ್ತೆಯಲ್ಲಿ ಪುಟ್ಟದೊಂದು ಚಪ್ಪಲಿ ಅಂಗಡಿ ಇಟ್ಟುಕೊಂಡು ಬದುಕುತ್ತಿರುವ ಅದೀಬ್ ಅವರ ನಿಜವಾದ ಹೆಸರು ಇಕ್ಬಾಲ್ ಅಹಮದ್. ಅದೀಬ್ ಅಖ್ತರ್ ಅನ್ನುವುದು ಅವರ ಕಾವ್ಯನಾಮ. ಮೊದಲು ಉರ್ದುವಿನಲ್ಲಿ ಬರೆಯುತ್ತಿದ್ದ ಅದೀಬ್ ತಮ್ಮ ೪೪ ನೆಯ ವಯಸ್ಸಿನಲ್ಲಿ ಕನ್ನಡದ ಅ ಆ ಇ ಈ ಕಲಿತು ಆಮೇಲೆ ಕನ್ನಡದಲ್ಲೇ ಐದು ಪುಸ್ತಕಗಳನ್ನು ಬರೆದರು.
ಇದೀಗ ೬೭ ವರ್ಷ ತಲುಪಿರುವ ಅದೀಬ್ ಅವರಿಗೆ ಕನ್ನಡದಲ್ಲಿ ಇನ್ನೂ ಬರೆಯುವ ಆಸೆ. ಅವರ ಮಡದಿ ರಶೀದಾರಿಗೂ ತನ್ನ ಗಂಡ ಕನ್ನಡದಲ್ಲಿ ಇನ್ನಷ್ಟು ಬರೆದು, ಇನ್ನಷ್ಟು ಖ್ಯಾತರಾಗಬೇಕು ಎನ್ನುವ ಆಸೆ. ಅದೀಬ್ ಇನ್ನೂ ಚೇತರಿಸಿಕೊಂಡು ಕನ್ನಡದಲ್ಲಿ ಮತ್ತಷ್ಟು ಬರೆಯಬೇಕು ಎನ್ನುವುದು ಕನ್ನಡದ ಅವರ ಅಭಿಮಾನಿ ಓದುಗರ ಹಂಬಲ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…