ವಾರದ ಮುಖ
ಕನ್ನಡದ ಕಥೆಗಾರ ಬನ್ನೂರಿನ ಅದೀಬ್ ಅಖ್ತರ್ ಬಳಿ ನೀವು ಈಗ ಯಾಕೆ ಬರೆಯುತ್ತಿಲ್ಲ ಸಾಹೇಬರೇ ಎಂದು ಕೇಳಿದರೆ ‘ಒಂದು ಕಥೆ ಬರೆದಿಟ್ಟಿರುವೆ. ಆದರೆ ಅದಕ್ಕೆ ಇನ್ನೂ ಹೆಸರು ಇಟ್ಟಿಲ್ಲ. ಹಾಗಾಗಿ ಅದು ನನ್ನಲ್ಲೇ ಉಳಿದು ಬಿಟ್ಟಿದೆ’ ಎಂದು ಮಗುವಿನ ಹಾಗೆ ನಗುತ್ತಾರೆ. ಆದರೆ ನಿಜವಾದ ವಿಷಯ ಏನೆಂದರೆ ಮೂರು ವರ್ಷಗಳ ಹಿಂದೆ ಮಿದುಳಿಗೆ ಲಘು ಆಘಾತಗೊಂಡು ಪ್ರಜ್ಞಾಹೀನರಾಗಿದ್ದ ಅದೀಬ್ ಈಗ ನಿಧಾನಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಮಡದಿ ರಶೀದಾ ಭಾನು ಪತಿಗೆ ಕಿವಿ ಮತ್ತು ಮಾತಿನ ಹಾಗೆ ಸಾಥ್ ನೀಡುತ್ತಿದ್ದಾರೆ. ಬನ್ನೂರಿನ ಮುಖ್ಯ ರಸ್ತೆಯಲ್ಲಿ ಪುಟ್ಟದೊಂದು ಚಪ್ಪಲಿ ಅಂಗಡಿ ಇಟ್ಟುಕೊಂಡು ಬದುಕುತ್ತಿರುವ ಅದೀಬ್ ಅವರ ನಿಜವಾದ ಹೆಸರು ಇಕ್ಬಾಲ್ ಅಹಮದ್. ಅದೀಬ್ ಅಖ್ತರ್ ಅನ್ನುವುದು ಅವರ ಕಾವ್ಯನಾಮ. ಮೊದಲು ಉರ್ದುವಿನಲ್ಲಿ ಬರೆಯುತ್ತಿದ್ದ ಅದೀಬ್ ತಮ್ಮ ೪೪ ನೆಯ ವಯಸ್ಸಿನಲ್ಲಿ ಕನ್ನಡದ ಅ ಆ ಇ ಈ ಕಲಿತು ಆಮೇಲೆ ಕನ್ನಡದಲ್ಲೇ ಐದು ಪುಸ್ತಕಗಳನ್ನು ಬರೆದರು.
ಇದೀಗ ೬೭ ವರ್ಷ ತಲುಪಿರುವ ಅದೀಬ್ ಅವರಿಗೆ ಕನ್ನಡದಲ್ಲಿ ಇನ್ನೂ ಬರೆಯುವ ಆಸೆ. ಅವರ ಮಡದಿ ರಶೀದಾರಿಗೂ ತನ್ನ ಗಂಡ ಕನ್ನಡದಲ್ಲಿ ಇನ್ನಷ್ಟು ಬರೆದು, ಇನ್ನಷ್ಟು ಖ್ಯಾತರಾಗಬೇಕು ಎನ್ನುವ ಆಸೆ. ಅದೀಬ್ ಇನ್ನೂ ಚೇತರಿಸಿಕೊಂಡು ಕನ್ನಡದಲ್ಲಿ ಮತ್ತಷ್ಟು ಬರೆಯಬೇಕು ಎನ್ನುವುದು ಕನ್ನಡದ ಅವರ ಅಭಿಮಾನಿ ಓದುಗರ ಹಂಬಲ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…