ಆಂದೋಲನ ಪುರವಣಿ

ಯೋಗ ಕ್ಷೇಮ : ಮುಟ್ಟು ಮುಂದೂಡುವ ಮುನ್ನ ವಹಿಸಿ ಎಚ್ಚರ

ಸೌಮ್ಯ ಹೆಗ್ಗಡಹಳ್ಳಿ

ಆಧುನಿಕ ಸಂದರ್ಭದಲ್ಲಿ ಹೆಂಗಳೆಯರು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಮುಟ್ಟಿನ ಸಮಸ್ಯೆಯೂ ಒಂದು. ಇದೇ ವೇಳೆಯಲ್ಲಿ ದೂರದೂರಿನ ಪ್ರಯಾಣಕ್ಕೆಂದೋ, ಶುಭ ಸವಾರಂಭಗಳಲ್ಲಿ ಭಾಗವಹಿಸಲೆಂದೋ ತಿಂಗಳ ಋತು ಚಕ್ರನ್ನು ಮುಂದೂಡಲು (ಎರಡ್ಮೂರು ದಿನಗಳಿಗೆ) ಮಾತ್ರೆಗಳನ್ನು ತೆಗೆದುಕೊಳ್ಳುವುದು ಸಾಮಾನ್ಯವಾಗುತ್ತಿದೆ. ಇದು ಸರಿಯೇ? ಇದರಿಂದ ಆರೋಗ್ಯಕ್ಕೆ ಸಮಸ್ಯೆ ಆಗುತ್ತದೆಯೇ ಎಂಬುದರ ಬಗ್ಗೆ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ.ಲಲಿತಾ ಅವರು ಮಾತನಾಡಿದ್ದಾರೆ.

* ಮುಟ್ಟು ಮುಂದೂಡಲು ಮಾತ್ರೆಗಳ ಸೇವನೆ ಸೂಕ್ತವೇ?

ತೀರಾ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರವೇ ಮಾತ್ರೆಗಳ ಬಳಕೆ ಮಾಡಬೇಕು. ಮುಟ್ಟಾಗುವ ೫ ದಿನಗಳ ಮುಂಚಿತವಾಗಿ ದಿನಕ್ಕೊಂದರಂತೆ ಮಾತ್ರೆಗಳನ್ನು ಬಳಸಬಹುದು. ಆದರೆ ಇದನ್ನೇ ಪುನರಾವರ್ತನೆ ಮಾಡುವುದು ಸರಿಯಲ್ಲ. ನಕಲಿ ಮಾತ್ರೆಗಳಿಂದ ದೂರವಿರಬೇಕು. ಕಡ್ಡಾಯವಾಗಿ ೧೦ ದಿನಗಳು ಮೀರಬಾರದು.


* ಈ ಬಗೆಯ ಮಾತ್ರೆ ಯಾರು ತೆಗೆದುಕೊಳ್ಳಬಹುದು?
ಇದಕ್ಕೆ ವಯಸ್ಸಿನ ಮೀತಿ ಇಲ್ಲ. ೧೮ ವರ್ಷ ಮೇಲ್ಪಟ್ಟವರು ತೆಗೆದುಕೊಳ್ಳಬಹುದು. ತೆಗೆದುಕೊಳ್ಳುವ ಮುನ್ನ ಕಡ್ಡಾಯವಾಗಿ ವೈದ್ಯರ ಸಲಹೆ ತೆಗೆದುಕೊಳ್ಳುವುದು ಸೂಕ್ತ.


* ಈ ಮಾತ್ರೆಗಳನ್ನು ಯಾರು ತೆಗೆದುಕೊಳ್ಳಬಾರದು?
ಮಧುಮೇಹಿಗಳು, ಹೃದುಂ ಸಂಬಂಧಿ ಸಮಸ್ಯೆ ಉಳ್ಳವರು, ಹಲವು ಬಗೆಯ ಕಾಯಿಲೆಯಿಂದ ಬಳಲುತ್ತಿರುವವರು ಈ ಮಾತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬಾರದು. ಇದರಿಂದಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ಈ ಬಗ್ಗೆ ಬಹಳಷ್ಟು ಎಚ್ಚರ ವಹಿಸುವುದು ಸೂಕ್ತ.


* ಮಾತ್ರೆಗಳ ಸೇವನೆಯಿಂದ ದೇಹದಲ್ಲಿ ಏನೆಲ್ಲಾ ಬದಲಾವಣೆ ಆಗಬಹುದು?

ಮುಟ್ಟು ತಡೆ ಮಾತ್ರೆಗಳನ್ನು ತೆಗೆದುಕೊಂಡು ಬಳಿಕ ಮುಟ್ಟಾದ ಸಂದರ್ಭಗಳಲ್ಲಿ ವಾಕರಿಕೆ, ಸುಸ್ತಾಗುವುದು, ಸಿಡುಕುವುದು ಸಹಜ. ಇದಕ್ಕೆ ಹಾರ್ಮೋನಿನಲ್ಲಿ ಆಗುವ ಬದಲಾವಣೆಗಳು ಕಾರಣ.


* ಸಾಮಾನ್ಯ ಮುಟ್ಟಿಗೂ ಮುಂದೂಡಲ್ಪಟ್ಟ ಮುಟ್ಟಿಗೂ ಏನು ವ್ಯತ್ಯಾಸ?

ಸಾಮಾನ್ಯ ಋತು ಚಕ್ರದ ದಿನಗಳಿಗೂ ಮುಂದೂಡಿ ಮುಟ್ಟಾದ ದಿನಗಳಿಗೂ ಬಹಷ್ಟು ವ್ಯತ್ಯಾಸವಿರುತ್ತದೆ. ಕೆಲವರಲ್ಲಿ ಅತಿಯಾದ ರಕ್ತಸ್ರಾವ ಕಾಡುವುದುಂಟು, ಮತ್ತಷ್ಟು ಮಂದಿಯಲ್ಲಿ ಕಡಿಮೆ ರಕ್ತಸ್ರಾವವೂ ಆಗುವುದುಂಟು. ಈ ಕಾರಣಕ್ಕಾಗಿ ವೈದ್ಯರ ಸಲಹೆ ಪಡೆದುಕೊಳ್ಳುವುದು ಉತ್ತಮ.


ಮಾತ್ರೆ ತೆಗೆದುಕೊಳ್ಳುವ ಮುನ್ನ ತಿಳಿದಿರಬೇಕಾದ ಅಂಶಗಳೇನು?

ಒಂದಷ್ಟು ಮಹಿಳೆಯರು ಸರಿಯಾದ ತಿಳುವಳಿಕೆ ಇಲ್ಲದೆ ಮುಟ್ಟು ಮುಂದೂಡುವ ಮಾತ್ರೆಗಳನ್ನು ಸೇವಿಸಿ ಅನಾರೋಗ್ಯಕ್ಕೀಡಾದ ಉದಾಹರಣೆಗಳು ಉಂಟು. ಈ ವಾತ್ರೆಗಳನ್ನು ಯಾವಾಗ ಹೇಗೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಪ್ರತಿಯೊಬ್ಬರ ದೇಹ ಪ್ರಕೃತಿಯೂ ಬೇರೆ ಬೇರೆ ಇರುವುದರಿಂದ ಎಲ್ಲರಿಗೂ ಒಂದೇ ಸೂತ್ರ ಅನ್ವಯವಾಗುವುದಿಲ್ಲ.

andolanait

Recent Posts

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

4 hours ago