ಆಂದೋಲನ ಪುರವಣಿ

ಯೋಗ ಕ್ಷೇಮ : ಮುಟ್ಟು ಮುಂದೂಡುವ ಮುನ್ನ ವಹಿಸಿ ಎಚ್ಚರ

ಸೌಮ್ಯ ಹೆಗ್ಗಡಹಳ್ಳಿ

ಆಧುನಿಕ ಸಂದರ್ಭದಲ್ಲಿ ಹೆಂಗಳೆಯರು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಮುಟ್ಟಿನ ಸಮಸ್ಯೆಯೂ ಒಂದು. ಇದೇ ವೇಳೆಯಲ್ಲಿ ದೂರದೂರಿನ ಪ್ರಯಾಣಕ್ಕೆಂದೋ, ಶುಭ ಸವಾರಂಭಗಳಲ್ಲಿ ಭಾಗವಹಿಸಲೆಂದೋ ತಿಂಗಳ ಋತು ಚಕ್ರನ್ನು ಮುಂದೂಡಲು (ಎರಡ್ಮೂರು ದಿನಗಳಿಗೆ) ಮಾತ್ರೆಗಳನ್ನು ತೆಗೆದುಕೊಳ್ಳುವುದು ಸಾಮಾನ್ಯವಾಗುತ್ತಿದೆ. ಇದು ಸರಿಯೇ? ಇದರಿಂದ ಆರೋಗ್ಯಕ್ಕೆ ಸಮಸ್ಯೆ ಆಗುತ್ತದೆಯೇ ಎಂಬುದರ ಬಗ್ಗೆ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ.ಲಲಿತಾ ಅವರು ಮಾತನಾಡಿದ್ದಾರೆ.

* ಮುಟ್ಟು ಮುಂದೂಡಲು ಮಾತ್ರೆಗಳ ಸೇವನೆ ಸೂಕ್ತವೇ?

ತೀರಾ ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರವೇ ಮಾತ್ರೆಗಳ ಬಳಕೆ ಮಾಡಬೇಕು. ಮುಟ್ಟಾಗುವ ೫ ದಿನಗಳ ಮುಂಚಿತವಾಗಿ ದಿನಕ್ಕೊಂದರಂತೆ ಮಾತ್ರೆಗಳನ್ನು ಬಳಸಬಹುದು. ಆದರೆ ಇದನ್ನೇ ಪುನರಾವರ್ತನೆ ಮಾಡುವುದು ಸರಿಯಲ್ಲ. ನಕಲಿ ಮಾತ್ರೆಗಳಿಂದ ದೂರವಿರಬೇಕು. ಕಡ್ಡಾಯವಾಗಿ ೧೦ ದಿನಗಳು ಮೀರಬಾರದು.


* ಈ ಬಗೆಯ ಮಾತ್ರೆ ಯಾರು ತೆಗೆದುಕೊಳ್ಳಬಹುದು?
ಇದಕ್ಕೆ ವಯಸ್ಸಿನ ಮೀತಿ ಇಲ್ಲ. ೧೮ ವರ್ಷ ಮೇಲ್ಪಟ್ಟವರು ತೆಗೆದುಕೊಳ್ಳಬಹುದು. ತೆಗೆದುಕೊಳ್ಳುವ ಮುನ್ನ ಕಡ್ಡಾಯವಾಗಿ ವೈದ್ಯರ ಸಲಹೆ ತೆಗೆದುಕೊಳ್ಳುವುದು ಸೂಕ್ತ.


* ಈ ಮಾತ್ರೆಗಳನ್ನು ಯಾರು ತೆಗೆದುಕೊಳ್ಳಬಾರದು?
ಮಧುಮೇಹಿಗಳು, ಹೃದುಂ ಸಂಬಂಧಿ ಸಮಸ್ಯೆ ಉಳ್ಳವರು, ಹಲವು ಬಗೆಯ ಕಾಯಿಲೆಯಿಂದ ಬಳಲುತ್ತಿರುವವರು ಈ ಮಾತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬಾರದು. ಇದರಿಂದಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಗಳಿರುತ್ತವೆ. ಈ ಬಗ್ಗೆ ಬಹಳಷ್ಟು ಎಚ್ಚರ ವಹಿಸುವುದು ಸೂಕ್ತ.


* ಮಾತ್ರೆಗಳ ಸೇವನೆಯಿಂದ ದೇಹದಲ್ಲಿ ಏನೆಲ್ಲಾ ಬದಲಾವಣೆ ಆಗಬಹುದು?

ಮುಟ್ಟು ತಡೆ ಮಾತ್ರೆಗಳನ್ನು ತೆಗೆದುಕೊಂಡು ಬಳಿಕ ಮುಟ್ಟಾದ ಸಂದರ್ಭಗಳಲ್ಲಿ ವಾಕರಿಕೆ, ಸುಸ್ತಾಗುವುದು, ಸಿಡುಕುವುದು ಸಹಜ. ಇದಕ್ಕೆ ಹಾರ್ಮೋನಿನಲ್ಲಿ ಆಗುವ ಬದಲಾವಣೆಗಳು ಕಾರಣ.


* ಸಾಮಾನ್ಯ ಮುಟ್ಟಿಗೂ ಮುಂದೂಡಲ್ಪಟ್ಟ ಮುಟ್ಟಿಗೂ ಏನು ವ್ಯತ್ಯಾಸ?

ಸಾಮಾನ್ಯ ಋತು ಚಕ್ರದ ದಿನಗಳಿಗೂ ಮುಂದೂಡಿ ಮುಟ್ಟಾದ ದಿನಗಳಿಗೂ ಬಹಷ್ಟು ವ್ಯತ್ಯಾಸವಿರುತ್ತದೆ. ಕೆಲವರಲ್ಲಿ ಅತಿಯಾದ ರಕ್ತಸ್ರಾವ ಕಾಡುವುದುಂಟು, ಮತ್ತಷ್ಟು ಮಂದಿಯಲ್ಲಿ ಕಡಿಮೆ ರಕ್ತಸ್ರಾವವೂ ಆಗುವುದುಂಟು. ಈ ಕಾರಣಕ್ಕಾಗಿ ವೈದ್ಯರ ಸಲಹೆ ಪಡೆದುಕೊಳ್ಳುವುದು ಉತ್ತಮ.


ಮಾತ್ರೆ ತೆಗೆದುಕೊಳ್ಳುವ ಮುನ್ನ ತಿಳಿದಿರಬೇಕಾದ ಅಂಶಗಳೇನು?

ಒಂದಷ್ಟು ಮಹಿಳೆಯರು ಸರಿಯಾದ ತಿಳುವಳಿಕೆ ಇಲ್ಲದೆ ಮುಟ್ಟು ಮುಂದೂಡುವ ಮಾತ್ರೆಗಳನ್ನು ಸೇವಿಸಿ ಅನಾರೋಗ್ಯಕ್ಕೀಡಾದ ಉದಾಹರಣೆಗಳು ಉಂಟು. ಈ ವಾತ್ರೆಗಳನ್ನು ಯಾವಾಗ ಹೇಗೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಪ್ರತಿಯೊಬ್ಬರ ದೇಹ ಪ್ರಕೃತಿಯೂ ಬೇರೆ ಬೇರೆ ಇರುವುದರಿಂದ ಎಲ್ಲರಿಗೂ ಒಂದೇ ಸೂತ್ರ ಅನ್ವಯವಾಗುವುದಿಲ್ಲ.

andolanait

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

3 mins ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

9 mins ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

13 mins ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

13 mins ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

14 mins ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

15 mins ago