ಆಂದೋಲನ ಪುರವಣಿ

ಯೋಗ ಕ್ಷೇಮ : ಪೈಮೋಸಿಸ್ ಬಗ್ಗೆ ಅರಿಯಿರಿ

ಪೆನ್ನಿಸ್ ಅಥವಾ ಶಿಶ್ನದ ಮೂತ್ರ ದ್ವಾರದ ಸುತ್ತಲಿನ ಗುಂಡನೆಯ ನುಣುಪಾದ ಭಾಗವನ್ನು ಗ್ಲ್ಯಾನ್ಸ್ ಪೆನ್ನಿಸ್ ಎನ್ನುತ್ತೇವೆ. ಗ್ಲ್ಯಾನ್ಸ್ ಪೆನ್ನಿಸ್ ಅನ್ನು ಸುತ್ತುವರಿದಿರುವ ಶಿಶ್ನದ ಮುಂಭಾಗದ ಚರ್ಮವನ್ನು ಪ್ರೆಪ್ಯೂಸ್ ಅಥವಾ ಪೋರ್ ಸ್ಕಿನ್ ಅರ್ಥಾತ್ ಮುಂತೊಗಲು ಎನ್ನುತ್ತೇವೆ. ಪ್ರೆಪ್ಯೂಸ್ ಮೃದುವಾಗಿ ಚಲನಶೀಲವಾಗಿದ್ದು, ಗ್ಲ್ಯಾನ್ಸ್ ಪೆನ್ನಿಸ್‌ಗೆ ಭದ್ರತೆಯನ್ನೊದಗಿಸಿ ಯಾವಾಗಲೂ ಮುಚ್ಚಿರುತ್ತದೆ. ಸ್ನಾನ ಮಾಡುವಾಗ ಶಿಶ್ನದ ಮುಂಭಾಗದ ಚರ್ಮವನ್ನು ಮೇಲೆಳೆದು ಶುಭ್ರವಾದ ನೀರಿನಲ್ಲಿ ತೊಳೆದು ಒಳಭಾಗದ ನೈರ್ಮಲ್ಯವನ್ನು ಕಾಪಾಡಬೇಕು.

ಪ್ರೆಪ್ಯೂಸ್ ಅಥವಾ ಶಿಶ್ನದ ಮುಂತೊಗಲು ಕಿರಿದಾಗಿ ಮತ್ತು ಬಿಗಿಯಾಗಿ ಗ್ಲ್ಯಾನ್ಸ್ ಪೆನ್ನಿಸ್‌ಗೆ ಅಂಟಿಕೊಂಡಂತೆ ಇದ್ದು, ಮೂತ್ರ ದ್ವಾರದಿಂದ ಹಿಂದೆ ಸರಿಸಲು ಅಥವಾ ಎಳೆಯಲು ಸಾಧ್ಯವಾಗುವುದಿಲ್ಲ. ಶಿಶ್ನದ ಬಿಗಿಯಾದ ಮತ್ತು ಕಿರಿದಾದ ಮುಂತೊಗಲು ಅಥವಾ ಟೈಟ್ ಸ್ಕಿನ್ ಅನ್ನು ಪೈಮೋಸಿಸ್ ಎನ್ನುತ್ತೇವೆ.

ಮಕ್ಕಳಲ್ಲಿ ಅಲ್ಪ ಪ್ರಮಾಣದಲ್ಲಿ ಇದು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಮಕ್ಕಳು ಬೆಳೆಯುತ್ತಿದ್ದಂತೆ ಪ್ರೆಪ್ಯೂಸ್ ಹಿಂದೆ ಸರಿದು ಗ್ಲ್ಯಾನ್ಸ್ ಪೂರ್ಣ ಕಾಣುತ್ತದೆ. ಆದರೆ ಹಲವರಲ್ಲಿ ಮಧ್ಯಮ ಅಥವಾ ತೀವ್ರತರದಲ್ಲಿ ಪೈಮೋಸಿಸ್ ಇದ್ದಾಗ ತೊಂದರೆ ಕಾಣಿಸಿಕೊಂಡು ಚಿಕಿತ್ಸೆ ಬೇಕಾಗುತ್ತದೆ.

ಪೈಮೋಸಿಸ್ ಅಲ್ಪ ಪ್ರಮಾಣದಲ್ಲಿ ಇದ್ದರೆ ಮೂತ್ರ ದ್ವಾರ ಮತ್ತು ಸೊಲ್ವ ಗ್ಲ್ಯಾನ್ಸ್ ಕಾಣಿಸುತ್ತದೆ. ಪೂರ್ಣ ಪ್ರಮಾಣದ ಪೈಮೋಸಿಸ್ ಇರುವವರಲ್ಲಿ ಶಿಶ್ನದ ಮುಂಭಾಗ ಚರ್ಮದಿಂದ ಮುಚ್ಚಿಕೊಂಡಿರುತ್ತದೆ. ಮೂತ್ರ ದ್ವಾರದ ರಂಧ್ರ ಮಾತ್ರ ಕಾಣಿಸುತ್ತದೆ. ಚರ್ಮವನ್ನು ಹಿಂದೆ ಎಳೆಯಲು ಸಾಧ್ಯವಾಗುವುದಿಲ್ಲ. ಪೈಮೋಸಿಸ್ ಇರುವ ವ್ಯಕ್ತಿಗಳ ಮೂತ್ರ ದ್ವಾರದ ಸುತ್ತ ಇರುವ ಚರ್ಮವು ಉಂಗುರ ಅಥವಾ ರಬ್ಬರ್ ಬ್ಯಾಂಡ್‌ನಂತೆ ಕಾಣುತ್ತದೆ. ಮೂತ್ರ ವಿಸರ್ಜಿಸುವಾಗ ಮುಂಭಾಗ ಬೆಲೂನ್‌ನಂತೆ ಸಲ್ಪ ಊದಿಕೊಳ್ಳಬಹುದು. ಪ್ರಾಯದವರಲ್ಲಿ ಶಿಶ್ನ ನಿಮಿರಿದಾಗ ನೋವು ಕಾಣಿಸಿಕೊಳ್ಳಬಹುದು. ತೀವ್ರ ತರದ ಪೈಮೋಸಿಸ್ ಇದ್ದ ಹಲವರಲ್ಲಿ ಮೂತ್ರ ನಾಳದ ಪ್ಯಾರಪೈಮೋಸಿಸ್, ಬೆಲನೈಟಿಸ್ ಮುಂತದ ಸೋಂಕು ಬರಬಹುದು. ಶಿಶ್ನದ ಚರ್ಮದ ಒಳಭಾಗವನ್ನು ಎಳೆದು ತೊಳೆಯಲು ಸಾಧ್ಯವಾಗದೇ ಇರುವುದರಿಂದ ದುರ್ವಾಸನೆ ಬರಬಹುದು.

ದೊಡ್ಡವರಲ್ಲಿ ಸಕ್ಕರೆ ಕಾಯಿಲೆ, ಲೈಕೆಸ್‌ಸ್ಲೀರೋಸಿಸ್, ಇನ್ಫೆಕ್ಷನ್, ಗ್ಸಿರೋಸಿಸ್ ಬೆಲನೋಟಿಕ್ ಮುಂತಾದ ಕಾಯಿಲೆಗಳು ಇರುವವರಲ್ಲಿ ಪೈಮೋಸಿಸ್ ಕಾಣಿಸಿಕೊಳ್ಳಬಹುದು.

ಪೈಮೋಸಿಸ್‌ಗೆ ಕಾರಣವಾಗುವ ಅಂಶಗಳನ್ನು ನಿವಾರಿಸುವುದು, ಪೈಮೋಸಿಸ್ ಮುಂದುವರಿದು ತೊಂದರೆಯಾಗುತ್ತಿದ್ದರೆ ಪೈಮೋಸಿಸ್ ಚರ್ಮದ ಒಳಭಾಗದ ಸ್ಕೃಪಿಂಗ್ ಅಥವಾ ಸರ್‌ಕಮ್‌ಸಿಷನ್ (ಮುಂಜಿ) ಮಾಡಿಸುವುದರಿಂದ ಸಮಸ್ಯೆ ನಿವಾರಿಸಿಕೊಳ್ಳಬಹುದು.

andolanait

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

8 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

12 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

12 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

12 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

12 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

12 hours ago