ಆಂದೋಲನ ಪುರವಣಿ

ಯೋಗ ಕ್ಷೇಮ : ಪೈಮೋಸಿಸ್ ಬಗ್ಗೆ ಅರಿಯಿರಿ

ಪೆನ್ನಿಸ್ ಅಥವಾ ಶಿಶ್ನದ ಮೂತ್ರ ದ್ವಾರದ ಸುತ್ತಲಿನ ಗುಂಡನೆಯ ನುಣುಪಾದ ಭಾಗವನ್ನು ಗ್ಲ್ಯಾನ್ಸ್ ಪೆನ್ನಿಸ್ ಎನ್ನುತ್ತೇವೆ. ಗ್ಲ್ಯಾನ್ಸ್ ಪೆನ್ನಿಸ್ ಅನ್ನು ಸುತ್ತುವರಿದಿರುವ ಶಿಶ್ನದ ಮುಂಭಾಗದ ಚರ್ಮವನ್ನು ಪ್ರೆಪ್ಯೂಸ್ ಅಥವಾ ಪೋರ್ ಸ್ಕಿನ್ ಅರ್ಥಾತ್ ಮುಂತೊಗಲು ಎನ್ನುತ್ತೇವೆ. ಪ್ರೆಪ್ಯೂಸ್ ಮೃದುವಾಗಿ ಚಲನಶೀಲವಾಗಿದ್ದು, ಗ್ಲ್ಯಾನ್ಸ್ ಪೆನ್ನಿಸ್‌ಗೆ ಭದ್ರತೆಯನ್ನೊದಗಿಸಿ ಯಾವಾಗಲೂ ಮುಚ್ಚಿರುತ್ತದೆ. ಸ್ನಾನ ಮಾಡುವಾಗ ಶಿಶ್ನದ ಮುಂಭಾಗದ ಚರ್ಮವನ್ನು ಮೇಲೆಳೆದು ಶುಭ್ರವಾದ ನೀರಿನಲ್ಲಿ ತೊಳೆದು ಒಳಭಾಗದ ನೈರ್ಮಲ್ಯವನ್ನು ಕಾಪಾಡಬೇಕು.

ಪ್ರೆಪ್ಯೂಸ್ ಅಥವಾ ಶಿಶ್ನದ ಮುಂತೊಗಲು ಕಿರಿದಾಗಿ ಮತ್ತು ಬಿಗಿಯಾಗಿ ಗ್ಲ್ಯಾನ್ಸ್ ಪೆನ್ನಿಸ್‌ಗೆ ಅಂಟಿಕೊಂಡಂತೆ ಇದ್ದು, ಮೂತ್ರ ದ್ವಾರದಿಂದ ಹಿಂದೆ ಸರಿಸಲು ಅಥವಾ ಎಳೆಯಲು ಸಾಧ್ಯವಾಗುವುದಿಲ್ಲ. ಶಿಶ್ನದ ಬಿಗಿಯಾದ ಮತ್ತು ಕಿರಿದಾದ ಮುಂತೊಗಲು ಅಥವಾ ಟೈಟ್ ಸ್ಕಿನ್ ಅನ್ನು ಪೈಮೋಸಿಸ್ ಎನ್ನುತ್ತೇವೆ.

ಮಕ್ಕಳಲ್ಲಿ ಅಲ್ಪ ಪ್ರಮಾಣದಲ್ಲಿ ಇದು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಮಕ್ಕಳು ಬೆಳೆಯುತ್ತಿದ್ದಂತೆ ಪ್ರೆಪ್ಯೂಸ್ ಹಿಂದೆ ಸರಿದು ಗ್ಲ್ಯಾನ್ಸ್ ಪೂರ್ಣ ಕಾಣುತ್ತದೆ. ಆದರೆ ಹಲವರಲ್ಲಿ ಮಧ್ಯಮ ಅಥವಾ ತೀವ್ರತರದಲ್ಲಿ ಪೈಮೋಸಿಸ್ ಇದ್ದಾಗ ತೊಂದರೆ ಕಾಣಿಸಿಕೊಂಡು ಚಿಕಿತ್ಸೆ ಬೇಕಾಗುತ್ತದೆ.

ಪೈಮೋಸಿಸ್ ಅಲ್ಪ ಪ್ರಮಾಣದಲ್ಲಿ ಇದ್ದರೆ ಮೂತ್ರ ದ್ವಾರ ಮತ್ತು ಸೊಲ್ವ ಗ್ಲ್ಯಾನ್ಸ್ ಕಾಣಿಸುತ್ತದೆ. ಪೂರ್ಣ ಪ್ರಮಾಣದ ಪೈಮೋಸಿಸ್ ಇರುವವರಲ್ಲಿ ಶಿಶ್ನದ ಮುಂಭಾಗ ಚರ್ಮದಿಂದ ಮುಚ್ಚಿಕೊಂಡಿರುತ್ತದೆ. ಮೂತ್ರ ದ್ವಾರದ ರಂಧ್ರ ಮಾತ್ರ ಕಾಣಿಸುತ್ತದೆ. ಚರ್ಮವನ್ನು ಹಿಂದೆ ಎಳೆಯಲು ಸಾಧ್ಯವಾಗುವುದಿಲ್ಲ. ಪೈಮೋಸಿಸ್ ಇರುವ ವ್ಯಕ್ತಿಗಳ ಮೂತ್ರ ದ್ವಾರದ ಸುತ್ತ ಇರುವ ಚರ್ಮವು ಉಂಗುರ ಅಥವಾ ರಬ್ಬರ್ ಬ್ಯಾಂಡ್‌ನಂತೆ ಕಾಣುತ್ತದೆ. ಮೂತ್ರ ವಿಸರ್ಜಿಸುವಾಗ ಮುಂಭಾಗ ಬೆಲೂನ್‌ನಂತೆ ಸಲ್ಪ ಊದಿಕೊಳ್ಳಬಹುದು. ಪ್ರಾಯದವರಲ್ಲಿ ಶಿಶ್ನ ನಿಮಿರಿದಾಗ ನೋವು ಕಾಣಿಸಿಕೊಳ್ಳಬಹುದು. ತೀವ್ರ ತರದ ಪೈಮೋಸಿಸ್ ಇದ್ದ ಹಲವರಲ್ಲಿ ಮೂತ್ರ ನಾಳದ ಪ್ಯಾರಪೈಮೋಸಿಸ್, ಬೆಲನೈಟಿಸ್ ಮುಂತದ ಸೋಂಕು ಬರಬಹುದು. ಶಿಶ್ನದ ಚರ್ಮದ ಒಳಭಾಗವನ್ನು ಎಳೆದು ತೊಳೆಯಲು ಸಾಧ್ಯವಾಗದೇ ಇರುವುದರಿಂದ ದುರ್ವಾಸನೆ ಬರಬಹುದು.

ದೊಡ್ಡವರಲ್ಲಿ ಸಕ್ಕರೆ ಕಾಯಿಲೆ, ಲೈಕೆಸ್‌ಸ್ಲೀರೋಸಿಸ್, ಇನ್ಫೆಕ್ಷನ್, ಗ್ಸಿರೋಸಿಸ್ ಬೆಲನೋಟಿಕ್ ಮುಂತಾದ ಕಾಯಿಲೆಗಳು ಇರುವವರಲ್ಲಿ ಪೈಮೋಸಿಸ್ ಕಾಣಿಸಿಕೊಳ್ಳಬಹುದು.

ಪೈಮೋಸಿಸ್‌ಗೆ ಕಾರಣವಾಗುವ ಅಂಶಗಳನ್ನು ನಿವಾರಿಸುವುದು, ಪೈಮೋಸಿಸ್ ಮುಂದುವರಿದು ತೊಂದರೆಯಾಗುತ್ತಿದ್ದರೆ ಪೈಮೋಸಿಸ್ ಚರ್ಮದ ಒಳಭಾಗದ ಸ್ಕೃಪಿಂಗ್ ಅಥವಾ ಸರ್‌ಕಮ್‌ಸಿಷನ್ (ಮುಂಜಿ) ಮಾಡಿಸುವುದರಿಂದ ಸಮಸ್ಯೆ ನಿವಾರಿಸಿಕೊಳ್ಳಬಹುದು.

andolanait

Recent Posts

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

2 hours ago

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

2 hours ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

2 hours ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

2 hours ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

2 hours ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

2 hours ago