ಆಂದೋಲನ ಪುರವಣಿ

ಯೋಗ ಕ್ಷೇಮ : ಪೈಮೋಸಿಸ್ ಬಗ್ಗೆ ಅರಿಯಿರಿ

ಪೆನ್ನಿಸ್ ಅಥವಾ ಶಿಶ್ನದ ಮೂತ್ರ ದ್ವಾರದ ಸುತ್ತಲಿನ ಗುಂಡನೆಯ ನುಣುಪಾದ ಭಾಗವನ್ನು ಗ್ಲ್ಯಾನ್ಸ್ ಪೆನ್ನಿಸ್ ಎನ್ನುತ್ತೇವೆ. ಗ್ಲ್ಯಾನ್ಸ್ ಪೆನ್ನಿಸ್ ಅನ್ನು ಸುತ್ತುವರಿದಿರುವ ಶಿಶ್ನದ ಮುಂಭಾಗದ ಚರ್ಮವನ್ನು ಪ್ರೆಪ್ಯೂಸ್ ಅಥವಾ ಪೋರ್ ಸ್ಕಿನ್ ಅರ್ಥಾತ್ ಮುಂತೊಗಲು ಎನ್ನುತ್ತೇವೆ. ಪ್ರೆಪ್ಯೂಸ್ ಮೃದುವಾಗಿ ಚಲನಶೀಲವಾಗಿದ್ದು, ಗ್ಲ್ಯಾನ್ಸ್ ಪೆನ್ನಿಸ್‌ಗೆ ಭದ್ರತೆಯನ್ನೊದಗಿಸಿ ಯಾವಾಗಲೂ ಮುಚ್ಚಿರುತ್ತದೆ. ಸ್ನಾನ ಮಾಡುವಾಗ ಶಿಶ್ನದ ಮುಂಭಾಗದ ಚರ್ಮವನ್ನು ಮೇಲೆಳೆದು ಶುಭ್ರವಾದ ನೀರಿನಲ್ಲಿ ತೊಳೆದು ಒಳಭಾಗದ ನೈರ್ಮಲ್ಯವನ್ನು ಕಾಪಾಡಬೇಕು.

ಪ್ರೆಪ್ಯೂಸ್ ಅಥವಾ ಶಿಶ್ನದ ಮುಂತೊಗಲು ಕಿರಿದಾಗಿ ಮತ್ತು ಬಿಗಿಯಾಗಿ ಗ್ಲ್ಯಾನ್ಸ್ ಪೆನ್ನಿಸ್‌ಗೆ ಅಂಟಿಕೊಂಡಂತೆ ಇದ್ದು, ಮೂತ್ರ ದ್ವಾರದಿಂದ ಹಿಂದೆ ಸರಿಸಲು ಅಥವಾ ಎಳೆಯಲು ಸಾಧ್ಯವಾಗುವುದಿಲ್ಲ. ಶಿಶ್ನದ ಬಿಗಿಯಾದ ಮತ್ತು ಕಿರಿದಾದ ಮುಂತೊಗಲು ಅಥವಾ ಟೈಟ್ ಸ್ಕಿನ್ ಅನ್ನು ಪೈಮೋಸಿಸ್ ಎನ್ನುತ್ತೇವೆ.

ಮಕ್ಕಳಲ್ಲಿ ಅಲ್ಪ ಪ್ರಮಾಣದಲ್ಲಿ ಇದು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಮಕ್ಕಳು ಬೆಳೆಯುತ್ತಿದ್ದಂತೆ ಪ್ರೆಪ್ಯೂಸ್ ಹಿಂದೆ ಸರಿದು ಗ್ಲ್ಯಾನ್ಸ್ ಪೂರ್ಣ ಕಾಣುತ್ತದೆ. ಆದರೆ ಹಲವರಲ್ಲಿ ಮಧ್ಯಮ ಅಥವಾ ತೀವ್ರತರದಲ್ಲಿ ಪೈಮೋಸಿಸ್ ಇದ್ದಾಗ ತೊಂದರೆ ಕಾಣಿಸಿಕೊಂಡು ಚಿಕಿತ್ಸೆ ಬೇಕಾಗುತ್ತದೆ.

ಪೈಮೋಸಿಸ್ ಅಲ್ಪ ಪ್ರಮಾಣದಲ್ಲಿ ಇದ್ದರೆ ಮೂತ್ರ ದ್ವಾರ ಮತ್ತು ಸೊಲ್ವ ಗ್ಲ್ಯಾನ್ಸ್ ಕಾಣಿಸುತ್ತದೆ. ಪೂರ್ಣ ಪ್ರಮಾಣದ ಪೈಮೋಸಿಸ್ ಇರುವವರಲ್ಲಿ ಶಿಶ್ನದ ಮುಂಭಾಗ ಚರ್ಮದಿಂದ ಮುಚ್ಚಿಕೊಂಡಿರುತ್ತದೆ. ಮೂತ್ರ ದ್ವಾರದ ರಂಧ್ರ ಮಾತ್ರ ಕಾಣಿಸುತ್ತದೆ. ಚರ್ಮವನ್ನು ಹಿಂದೆ ಎಳೆಯಲು ಸಾಧ್ಯವಾಗುವುದಿಲ್ಲ. ಪೈಮೋಸಿಸ್ ಇರುವ ವ್ಯಕ್ತಿಗಳ ಮೂತ್ರ ದ್ವಾರದ ಸುತ್ತ ಇರುವ ಚರ್ಮವು ಉಂಗುರ ಅಥವಾ ರಬ್ಬರ್ ಬ್ಯಾಂಡ್‌ನಂತೆ ಕಾಣುತ್ತದೆ. ಮೂತ್ರ ವಿಸರ್ಜಿಸುವಾಗ ಮುಂಭಾಗ ಬೆಲೂನ್‌ನಂತೆ ಸಲ್ಪ ಊದಿಕೊಳ್ಳಬಹುದು. ಪ್ರಾಯದವರಲ್ಲಿ ಶಿಶ್ನ ನಿಮಿರಿದಾಗ ನೋವು ಕಾಣಿಸಿಕೊಳ್ಳಬಹುದು. ತೀವ್ರ ತರದ ಪೈಮೋಸಿಸ್ ಇದ್ದ ಹಲವರಲ್ಲಿ ಮೂತ್ರ ನಾಳದ ಪ್ಯಾರಪೈಮೋಸಿಸ್, ಬೆಲನೈಟಿಸ್ ಮುಂತದ ಸೋಂಕು ಬರಬಹುದು. ಶಿಶ್ನದ ಚರ್ಮದ ಒಳಭಾಗವನ್ನು ಎಳೆದು ತೊಳೆಯಲು ಸಾಧ್ಯವಾಗದೇ ಇರುವುದರಿಂದ ದುರ್ವಾಸನೆ ಬರಬಹುದು.

ದೊಡ್ಡವರಲ್ಲಿ ಸಕ್ಕರೆ ಕಾಯಿಲೆ, ಲೈಕೆಸ್‌ಸ್ಲೀರೋಸಿಸ್, ಇನ್ಫೆಕ್ಷನ್, ಗ್ಸಿರೋಸಿಸ್ ಬೆಲನೋಟಿಕ್ ಮುಂತಾದ ಕಾಯಿಲೆಗಳು ಇರುವವರಲ್ಲಿ ಪೈಮೋಸಿಸ್ ಕಾಣಿಸಿಕೊಳ್ಳಬಹುದು.

ಪೈಮೋಸಿಸ್‌ಗೆ ಕಾರಣವಾಗುವ ಅಂಶಗಳನ್ನು ನಿವಾರಿಸುವುದು, ಪೈಮೋಸಿಸ್ ಮುಂದುವರಿದು ತೊಂದರೆಯಾಗುತ್ತಿದ್ದರೆ ಪೈಮೋಸಿಸ್ ಚರ್ಮದ ಒಳಭಾಗದ ಸ್ಕೃಪಿಂಗ್ ಅಥವಾ ಸರ್‌ಕಮ್‌ಸಿಷನ್ (ಮುಂಜಿ) ಮಾಡಿಸುವುದರಿಂದ ಸಮಸ್ಯೆ ನಿವಾರಿಸಿಕೊಳ್ಳಬಹುದು.

andolanait

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

5 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

6 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

6 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

7 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

8 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

9 hours ago