ಆಂದೋಲನ ಪುರವಣಿ

ಯೋಗ ಕ್ಷೇಮ : ಪೈಮೋಸಿಸ್ ಬಗ್ಗೆ ಅರಿಯಿರಿ

ಪೆನ್ನಿಸ್ ಅಥವಾ ಶಿಶ್ನದ ಮೂತ್ರ ದ್ವಾರದ ಸುತ್ತಲಿನ ಗುಂಡನೆಯ ನುಣುಪಾದ ಭಾಗವನ್ನು ಗ್ಲ್ಯಾನ್ಸ್ ಪೆನ್ನಿಸ್ ಎನ್ನುತ್ತೇವೆ. ಗ್ಲ್ಯಾನ್ಸ್ ಪೆನ್ನಿಸ್ ಅನ್ನು ಸುತ್ತುವರಿದಿರುವ ಶಿಶ್ನದ ಮುಂಭಾಗದ ಚರ್ಮವನ್ನು ಪ್ರೆಪ್ಯೂಸ್ ಅಥವಾ ಪೋರ್ ಸ್ಕಿನ್ ಅರ್ಥಾತ್ ಮುಂತೊಗಲು ಎನ್ನುತ್ತೇವೆ. ಪ್ರೆಪ್ಯೂಸ್ ಮೃದುವಾಗಿ ಚಲನಶೀಲವಾಗಿದ್ದು, ಗ್ಲ್ಯಾನ್ಸ್ ಪೆನ್ನಿಸ್‌ಗೆ ಭದ್ರತೆಯನ್ನೊದಗಿಸಿ ಯಾವಾಗಲೂ ಮುಚ್ಚಿರುತ್ತದೆ. ಸ್ನಾನ ಮಾಡುವಾಗ ಶಿಶ್ನದ ಮುಂಭಾಗದ ಚರ್ಮವನ್ನು ಮೇಲೆಳೆದು ಶುಭ್ರವಾದ ನೀರಿನಲ್ಲಿ ತೊಳೆದು ಒಳಭಾಗದ ನೈರ್ಮಲ್ಯವನ್ನು ಕಾಪಾಡಬೇಕು.

ಪ್ರೆಪ್ಯೂಸ್ ಅಥವಾ ಶಿಶ್ನದ ಮುಂತೊಗಲು ಕಿರಿದಾಗಿ ಮತ್ತು ಬಿಗಿಯಾಗಿ ಗ್ಲ್ಯಾನ್ಸ್ ಪೆನ್ನಿಸ್‌ಗೆ ಅಂಟಿಕೊಂಡಂತೆ ಇದ್ದು, ಮೂತ್ರ ದ್ವಾರದಿಂದ ಹಿಂದೆ ಸರಿಸಲು ಅಥವಾ ಎಳೆಯಲು ಸಾಧ್ಯವಾಗುವುದಿಲ್ಲ. ಶಿಶ್ನದ ಬಿಗಿಯಾದ ಮತ್ತು ಕಿರಿದಾದ ಮುಂತೊಗಲು ಅಥವಾ ಟೈಟ್ ಸ್ಕಿನ್ ಅನ್ನು ಪೈಮೋಸಿಸ್ ಎನ್ನುತ್ತೇವೆ.

ಮಕ್ಕಳಲ್ಲಿ ಅಲ್ಪ ಪ್ರಮಾಣದಲ್ಲಿ ಇದು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಮಕ್ಕಳು ಬೆಳೆಯುತ್ತಿದ್ದಂತೆ ಪ್ರೆಪ್ಯೂಸ್ ಹಿಂದೆ ಸರಿದು ಗ್ಲ್ಯಾನ್ಸ್ ಪೂರ್ಣ ಕಾಣುತ್ತದೆ. ಆದರೆ ಹಲವರಲ್ಲಿ ಮಧ್ಯಮ ಅಥವಾ ತೀವ್ರತರದಲ್ಲಿ ಪೈಮೋಸಿಸ್ ಇದ್ದಾಗ ತೊಂದರೆ ಕಾಣಿಸಿಕೊಂಡು ಚಿಕಿತ್ಸೆ ಬೇಕಾಗುತ್ತದೆ.

ಪೈಮೋಸಿಸ್ ಅಲ್ಪ ಪ್ರಮಾಣದಲ್ಲಿ ಇದ್ದರೆ ಮೂತ್ರ ದ್ವಾರ ಮತ್ತು ಸೊಲ್ವ ಗ್ಲ್ಯಾನ್ಸ್ ಕಾಣಿಸುತ್ತದೆ. ಪೂರ್ಣ ಪ್ರಮಾಣದ ಪೈಮೋಸಿಸ್ ಇರುವವರಲ್ಲಿ ಶಿಶ್ನದ ಮುಂಭಾಗ ಚರ್ಮದಿಂದ ಮುಚ್ಚಿಕೊಂಡಿರುತ್ತದೆ. ಮೂತ್ರ ದ್ವಾರದ ರಂಧ್ರ ಮಾತ್ರ ಕಾಣಿಸುತ್ತದೆ. ಚರ್ಮವನ್ನು ಹಿಂದೆ ಎಳೆಯಲು ಸಾಧ್ಯವಾಗುವುದಿಲ್ಲ. ಪೈಮೋಸಿಸ್ ಇರುವ ವ್ಯಕ್ತಿಗಳ ಮೂತ್ರ ದ್ವಾರದ ಸುತ್ತ ಇರುವ ಚರ್ಮವು ಉಂಗುರ ಅಥವಾ ರಬ್ಬರ್ ಬ್ಯಾಂಡ್‌ನಂತೆ ಕಾಣುತ್ತದೆ. ಮೂತ್ರ ವಿಸರ್ಜಿಸುವಾಗ ಮುಂಭಾಗ ಬೆಲೂನ್‌ನಂತೆ ಸಲ್ಪ ಊದಿಕೊಳ್ಳಬಹುದು. ಪ್ರಾಯದವರಲ್ಲಿ ಶಿಶ್ನ ನಿಮಿರಿದಾಗ ನೋವು ಕಾಣಿಸಿಕೊಳ್ಳಬಹುದು. ತೀವ್ರ ತರದ ಪೈಮೋಸಿಸ್ ಇದ್ದ ಹಲವರಲ್ಲಿ ಮೂತ್ರ ನಾಳದ ಪ್ಯಾರಪೈಮೋಸಿಸ್, ಬೆಲನೈಟಿಸ್ ಮುಂತದ ಸೋಂಕು ಬರಬಹುದು. ಶಿಶ್ನದ ಚರ್ಮದ ಒಳಭಾಗವನ್ನು ಎಳೆದು ತೊಳೆಯಲು ಸಾಧ್ಯವಾಗದೇ ಇರುವುದರಿಂದ ದುರ್ವಾಸನೆ ಬರಬಹುದು.

ದೊಡ್ಡವರಲ್ಲಿ ಸಕ್ಕರೆ ಕಾಯಿಲೆ, ಲೈಕೆಸ್‌ಸ್ಲೀರೋಸಿಸ್, ಇನ್ಫೆಕ್ಷನ್, ಗ್ಸಿರೋಸಿಸ್ ಬೆಲನೋಟಿಕ್ ಮುಂತಾದ ಕಾಯಿಲೆಗಳು ಇರುವವರಲ್ಲಿ ಪೈಮೋಸಿಸ್ ಕಾಣಿಸಿಕೊಳ್ಳಬಹುದು.

ಪೈಮೋಸಿಸ್‌ಗೆ ಕಾರಣವಾಗುವ ಅಂಶಗಳನ್ನು ನಿವಾರಿಸುವುದು, ಪೈಮೋಸಿಸ್ ಮುಂದುವರಿದು ತೊಂದರೆಯಾಗುತ್ತಿದ್ದರೆ ಪೈಮೋಸಿಸ್ ಚರ್ಮದ ಒಳಭಾಗದ ಸ್ಕೃಪಿಂಗ್ ಅಥವಾ ಸರ್‌ಕಮ್‌ಸಿಷನ್ (ಮುಂಜಿ) ಮಾಡಿಸುವುದರಿಂದ ಸಮಸ್ಯೆ ನಿವಾರಿಸಿಕೊಳ್ಳಬಹುದು.

andolanait

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

4 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

4 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

4 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

4 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

4 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

4 hours ago