Cheerful senior male friends stacking hands together at park
ದೇಹಕ್ಕೆ ವಯಸ್ಸಾದಂತೆಲ್ಲಾ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಾ ಹೋಗುತ್ತದೆ. ಇದೇ ಕಾರಣಕ್ಕೆ ವಯಸ್ಸಾದವರಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಹೆಚ್ಚು. ಉತ್ತಮ ಜೀವನ ಕ್ರಮ, ಪೌಷ್ಠಿಕ ಆಹಾರ ಸೇವನೆ, ನಿಗದಿತ ವ್ಯಾಯಾಮಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು. ವಯೋಸಹಜ ಸಮಸ್ಯೆಗಳ ತೀವ್ರತೆಯಿಂದ ತಪ್ಪಿಸಿಕೊಳ್ಳಬಹುದು.
ಬಿಪಿ, ಸಕ್ಕರೆ ಕಾಯಿಲೆ, ಕಣ್ಣಿನ ತೊಂದರೆ, ಕೀಲುಗಳಲ್ಲಿ ನೋವು, ನೆನಪಿನ ಶಕ್ತಿ ಕುಂದುವುದು, ಹೃದಯ, ಕಿಡ್ನಿ ಸಂಬಂಧಿ ಸಮಸ್ಯೆಗಳು ಕಾಡುವ ಸಮಯದಲ್ಲಿ ನಿಗದಿತವಾದ ಜೀವನ ಶೈಲಿ ಕೈ ಹಿಡಿಯುತ್ತದೆ. ಸಮತೋಲಿತ ಆಹಾರ, ವ್ಯಾಯಾಮದ ಜೊತೆ ನಮ್ಮ ಮಾನಸಿಕ ಆರೋಗ್ಯವೂ ಮುಖ್ಯ.
* ದೇಹಕ್ಕೆ ವ್ಯಾಯಾಮ ಅತಿ ಮುಖ್ಯ. ಇದರಿಂದ ನಿದ್ರಾಹೀನತೆ ಸಮಸ್ಯೆ ಕಡಿಮೆಯಾಗುತ್ತದೆ. ಒಳ್ಳೆಯ ನಿದ್ದೆ ಬಂದರೆ ಆರೋಗ್ಯವೂ ಚೆನ್ನಾಗಿರುತ್ತದೆ. ಬೆಳಗ್ಗಿನ ವೇಳೆಯಲ್ಲಿ ನಿದ್ದೆ ಮಾಡುವುದನ್ನು ಬಿಡಿ.
* ರಾತ್ರಿ ಸುಮಾರು ೭-೮ ಗಂಟೆಗೆ ಊಟ ಮಾಡಿ ಎರಡು ತಾಸಿನ ನಂತರ ನಿದ್ರಿಸುವುದು ಒಳಿತು. ಇದರಿಂದ ಜೀರ್ಣಕ್ರಿಯೆಗೆ ಸಹಾಯವಾಗುತ್ತದೆ.
* ರಾತ್ರಿ ವೇಳೆ ಅತಿಯಾದ ಎಣ್ಣೆ ಪದಾರ್ಥ, ಖಾರವಾದ ಆಹಾರವನ್ನು ಸೇವಿಸದಿರಿ. ಇದರಿಂದ ಅಸಿಡಿಟಿ, ಹುಳಿತೇಗಿನಿಂದ ಪಾರಾಗಬಹುದು.
* ನಿಗದಿತ ಸಮಯದಲ್ಲೇ ಮಾತ್ರೆ ಸೇವನೆ, ಊಟ-ತಿಂಡಿ ಮಾಡುವುದು ಉತ್ತಮ.
* ನಿಯಮಿತವಾಗಿ ವೈದ್ಯರನ್ನು ಭೇಟಿಯಾಗುವುದು, ಚೆಕಪ್ಗಳನ್ನು ಮಾಡಿಸುವುದು ಸೂಕ್ತ.
* ನಕಾರಾತ್ಮಕ ಚಿಂತನೆಗಳನ್ನು ದೂರವಿಟ್ಟು, ಮಾನಸಿಕ ಆರೋಗ್ಯದ ಕಡೆಗೆ ಗಮನ ನೀಡಬೇಕು.
* ಕುಟುಂಬ ಸದಸ್ಯರು, ಮಕ್ಕಳು, ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯಬೇಕು. ಹಳೆಯ ಸಂತಸದ ಕ್ಷಣಗಳನ್ನು ಮೆಲುಕು ಹಾಕುವುದು ಇನ್ನೂ ಉತ್ತಮ.
ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್ಒ ಹುದ್ದೆಗೆ ಡಿಎಚ್ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…