ಆಂದೋಲನ ಪುರವಣಿ

ಯೋಗ ಕ್ಷೇಮ : ವಯೋವೃದ್ಧರ ಸಂತಸಕ್ಕೆ ಸರಳ ಮಾರ್ಗ

ದೇಹಕ್ಕೆ ವಯಸ್ಸಾದಂತೆಲ್ಲಾ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಾ ಹೋಗುತ್ತದೆ. ಇದೇ ಕಾರಣಕ್ಕೆ ವಯಸ್ಸಾದವರಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಹೆಚ್ಚು. ಉತ್ತಮ ಜೀವನ ಕ್ರಮ, ಪೌಷ್ಠಿಕ ಆಹಾರ ಸೇವನೆ, ನಿಗದಿತ ವ್ಯಾಯಾಮಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು. ವಯೋಸಹಜ ಸಮಸ್ಯೆಗಳ ತೀವ್ರತೆಯಿಂದ ತಪ್ಪಿಸಿಕೊಳ್ಳಬಹುದು.

ಬಿಪಿ, ಸಕ್ಕರೆ ಕಾಯಿಲೆ, ಕಣ್ಣಿನ ತೊಂದರೆ, ಕೀಲುಗಳಲ್ಲಿ ನೋವು, ನೆನಪಿನ ಶಕ್ತಿ ಕುಂದುವುದು, ಹೃದಯ, ಕಿಡ್ನಿ ಸಂಬಂಧಿ ಸಮಸ್ಯೆಗಳು ಕಾಡುವ ಸಮಯದಲ್ಲಿ ನಿಗದಿತವಾದ ಜೀವನ ಶೈಲಿ ಕೈ ಹಿಡಿಯುತ್ತದೆ. ಸಮತೋಲಿತ ಆಹಾರ, ವ್ಯಾಯಾಮದ ಜೊತೆ ನಮ್ಮ ಮಾನಸಿಕ ಆರೋಗ್ಯವೂ ಮುಖ್ಯ.

* ದೇಹಕ್ಕೆ ವ್ಯಾಯಾಮ ಅತಿ ಮುಖ್ಯ. ಇದರಿಂದ ನಿದ್ರಾಹೀನತೆ ಸಮಸ್ಯೆ ಕಡಿಮೆಯಾಗುತ್ತದೆ. ಒಳ್ಳೆಯ ನಿದ್ದೆ ಬಂದರೆ ಆರೋಗ್ಯವೂ ಚೆನ್ನಾಗಿರುತ್ತದೆ. ಬೆಳಗ್ಗಿನ ವೇಳೆಯಲ್ಲಿ ನಿದ್ದೆ ಮಾಡುವುದನ್ನು ಬಿಡಿ.

* ರಾತ್ರಿ ಸುಮಾರು ೭-೮ ಗಂಟೆಗೆ ಊಟ ಮಾಡಿ ಎರಡು ತಾಸಿನ ನಂತರ ನಿದ್ರಿಸುವುದು ಒಳಿತು. ಇದರಿಂದ ಜೀರ್ಣಕ್ರಿಯೆಗೆ ಸಹಾಯವಾಗುತ್ತದೆ.

* ರಾತ್ರಿ ವೇಳೆ ಅತಿಯಾದ ಎಣ್ಣೆ ಪದಾರ್ಥ, ಖಾರವಾದ ಆಹಾರವನ್ನು ಸೇವಿಸದಿರಿ. ಇದರಿಂದ ಅಸಿಡಿಟಿ, ಹುಳಿತೇಗಿನಿಂದ ಪಾರಾಗಬಹುದು.

* ನಿಗದಿತ ಸಮಯದಲ್ಲೇ ಮಾತ್ರೆ ಸೇವನೆ, ಊಟ-ತಿಂಡಿ ಮಾಡುವುದು ಉತ್ತಮ.

* ನಿಯಮಿತವಾಗಿ ವೈದ್ಯರನ್ನು ಭೇಟಿಯಾಗುವುದು, ಚೆಕಪ್‌ಗಳನ್ನು ಮಾಡಿಸುವುದು ಸೂಕ್ತ.

* ನಕಾರಾತ್ಮಕ ಚಿಂತನೆಗಳನ್ನು ದೂರವಿಟ್ಟು, ಮಾನಸಿಕ ಆರೋಗ್ಯದ ಕಡೆಗೆ ಗಮನ ನೀಡಬೇಕು.

* ಕುಟುಂಬ ಸದಸ್ಯರು, ಮಕ್ಕಳು, ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯಬೇಕು. ಹಳೆಯ ಸಂತಸದ ಕ್ಷಣಗಳನ್ನು ಮೆಲುಕು ಹಾಕುವುದು ಇನ್ನೂ ಉತ್ತಮ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago