ಆಂದೋಲನ ಪುರವಣಿ

ಯೋಗ ಕ್ಷೇಮ : ವಯೋವೃದ್ಧರ ಸಂತಸಕ್ಕೆ ಸರಳ ಮಾರ್ಗ

ದೇಹಕ್ಕೆ ವಯಸ್ಸಾದಂತೆಲ್ಲಾ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಾ ಹೋಗುತ್ತದೆ. ಇದೇ ಕಾರಣಕ್ಕೆ ವಯಸ್ಸಾದವರಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಹೆಚ್ಚು. ಉತ್ತಮ ಜೀವನ ಕ್ರಮ, ಪೌಷ್ಠಿಕ ಆಹಾರ ಸೇವನೆ, ನಿಗದಿತ ವ್ಯಾಯಾಮಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು. ವಯೋಸಹಜ ಸಮಸ್ಯೆಗಳ ತೀವ್ರತೆಯಿಂದ ತಪ್ಪಿಸಿಕೊಳ್ಳಬಹುದು.

ಬಿಪಿ, ಸಕ್ಕರೆ ಕಾಯಿಲೆ, ಕಣ್ಣಿನ ತೊಂದರೆ, ಕೀಲುಗಳಲ್ಲಿ ನೋವು, ನೆನಪಿನ ಶಕ್ತಿ ಕುಂದುವುದು, ಹೃದಯ, ಕಿಡ್ನಿ ಸಂಬಂಧಿ ಸಮಸ್ಯೆಗಳು ಕಾಡುವ ಸಮಯದಲ್ಲಿ ನಿಗದಿತವಾದ ಜೀವನ ಶೈಲಿ ಕೈ ಹಿಡಿಯುತ್ತದೆ. ಸಮತೋಲಿತ ಆಹಾರ, ವ್ಯಾಯಾಮದ ಜೊತೆ ನಮ್ಮ ಮಾನಸಿಕ ಆರೋಗ್ಯವೂ ಮುಖ್ಯ.

* ದೇಹಕ್ಕೆ ವ್ಯಾಯಾಮ ಅತಿ ಮುಖ್ಯ. ಇದರಿಂದ ನಿದ್ರಾಹೀನತೆ ಸಮಸ್ಯೆ ಕಡಿಮೆಯಾಗುತ್ತದೆ. ಒಳ್ಳೆಯ ನಿದ್ದೆ ಬಂದರೆ ಆರೋಗ್ಯವೂ ಚೆನ್ನಾಗಿರುತ್ತದೆ. ಬೆಳಗ್ಗಿನ ವೇಳೆಯಲ್ಲಿ ನಿದ್ದೆ ಮಾಡುವುದನ್ನು ಬಿಡಿ.

* ರಾತ್ರಿ ಸುಮಾರು ೭-೮ ಗಂಟೆಗೆ ಊಟ ಮಾಡಿ ಎರಡು ತಾಸಿನ ನಂತರ ನಿದ್ರಿಸುವುದು ಒಳಿತು. ಇದರಿಂದ ಜೀರ್ಣಕ್ರಿಯೆಗೆ ಸಹಾಯವಾಗುತ್ತದೆ.

* ರಾತ್ರಿ ವೇಳೆ ಅತಿಯಾದ ಎಣ್ಣೆ ಪದಾರ್ಥ, ಖಾರವಾದ ಆಹಾರವನ್ನು ಸೇವಿಸದಿರಿ. ಇದರಿಂದ ಅಸಿಡಿಟಿ, ಹುಳಿತೇಗಿನಿಂದ ಪಾರಾಗಬಹುದು.

* ನಿಗದಿತ ಸಮಯದಲ್ಲೇ ಮಾತ್ರೆ ಸೇವನೆ, ಊಟ-ತಿಂಡಿ ಮಾಡುವುದು ಉತ್ತಮ.

* ನಿಯಮಿತವಾಗಿ ವೈದ್ಯರನ್ನು ಭೇಟಿಯಾಗುವುದು, ಚೆಕಪ್‌ಗಳನ್ನು ಮಾಡಿಸುವುದು ಸೂಕ್ತ.

* ನಕಾರಾತ್ಮಕ ಚಿಂತನೆಗಳನ್ನು ದೂರವಿಟ್ಟು, ಮಾನಸಿಕ ಆರೋಗ್ಯದ ಕಡೆಗೆ ಗಮನ ನೀಡಬೇಕು.

* ಕುಟುಂಬ ಸದಸ್ಯರು, ಮಕ್ಕಳು, ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯಬೇಕು. ಹಳೆಯ ಸಂತಸದ ಕ್ಷಣಗಳನ್ನು ಮೆಲುಕು ಹಾಕುವುದು ಇನ್ನೂ ಉತ್ತಮ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago