ಆಂದೋಲನ ಪುರವಣಿ

ಯೋಗ ಕ್ಷೇಮ : ಆರೋಗ್ಯಕ್ಕೆ ಒಳ್ಳೆಯದ್ದು ಹರಿವೆ ಸೊಪ್ಪು

ವೈಜ್ಞಾನಿಕವಾಗಿ ಅಮರಾಂತುಸ್ ಎಂದು ಕರೆಯಲ್ಪಡುವ ಹರಿವೆ ಸೊಪ್ಪು ಆರೋಗ್ಯದ ಮೂಲ. ದಂಟಿನ ಸೊಪ್ಪು ಎನ್ನುವ ಹೆಸರಿನಿಂದಲೂ ಕರೆಯಲ್ಪಡುವ ಇದರಲ್ಲಿ ಸುಮಾರು ೫೦ ಕ್ಕೂ ಹೆಚ್ಚು ಬಗೆಗಳಿವೆ. ಹಲವಾರು ಬಣ್ಣ, ರುಚಿ, ಎತ್ತರಗಳನ್ನು ಒಳಗೊಂಡಿರುವ ಈ ಸೊಪ್ಪು ಪ್ರೋಟೀನ್, ಕ್ಯಾಲ್ಸಿುಂಂ, ಕಬ್ಬಿಣ, ತಾಮ್ರ ಹಾಗೂ ಅಗತ್ಯ ಜೀವಸತ್ವಗಳ ಆಗರ.

ರಿಬೊಫ್ಲಾವಿನ್, ನಿಾಂಸಿನ್, ಥೈಮೇನ್, ವಿಟಮಿನ್ ಬಿ ೬ ಅಂಶಗಳು ಹರಿವೆುಂಲ್ಲಿ ಇದ್ದು, ಇವು ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚಲು ಸಹಾಯ ಮಾಡುತ್ತವೆ. ಅಲ್ಲದೇ ದೇಹದಲ್ಲಿ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ.

ಈ ಸೊಪ್ಪಿನಲ್ಲಿ ಕೊಬ್ಬಿನ ಅಂಶ ಇಲ್ಲದೇ ಇರುವುದರಿಂದ ತೂಕ ಇಳಿಸಬೇಕು ಎಂದುಕೊಂಡವರಿಗೆ ಇದು ಒಳ್ಳೆಯ ಆಯ್ಕೆ. ಜೊತೆಗೆ ಅತಿ ಹೆಚ್ಚಿನ ನಾರಿನ ಅಂಶ ಇದರಲ್ಲಿ ಇರುವುದರಿಂದ ಜೀರ್ಣಕ್ರಿಯೆಗೆ ಸಹಕಾರಿ.

ಹರಿವೆಯ ಅನುಕೂಲ

* ಹರಿವೆ ಸೊಪ್ಪು ರಕ್ತದಲ್ಲಿನ ಕೊಲೆಸ್ಟಾಲ್ ಅಂಶವನ್ನು ಕಡಿಮೆಗೊಳಿಸುತ್ತದೆ. ಇದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳ ನಿಯಂತ್ರಣವಾಗುತ್ತದೆ. ಅಲ್ಲದೇ ರಕ್ತದ ಒತ್ತಡವೂ ಕಡಿಮೆಯಾಗುತ್ತದೆ.

* ಹರಿವೆ ಸೊಪ್ಪು ದೇಹಕ್ಕೆ ಬೇಕಾಗಿರುವ ಶೇ.೯೭ರಷ್ಟು ವಿಟಮಿನ್ ಒದಗಿಸುತ್ತದೆ. ದೇಹದಲ್ಲಿ ಕರಗಬಲ್ಲ ಫೈಬರ್, ಬೆಟಾ ಕೆರೊಟೆನ್, ಝಿುಂಕ್ಸಾಂಥಿನ್ ಮತ್ತು ಲುಟೇನ್ ಅಂಶವಿದ್ದು, ಇವು ಕ್ಯಾನ್ಸರ್ ನಿವಾರಕಗಳಾಗಿ ಕೆಲಸ ಮಾಡುತ್ತವೆ.

* ಸೊಪ್ಪಿನಲ್ಲಿ ಇರುವ ವಿಟಮಿನ್ ಎ ನಿಂದಾಗಿ ಚರ್ಮ ಹಾಗೂ ಕಣ್ಣಿನ ಆರೋಗ್ಯ ವೃದ್ಧಿಯಾಗುತ್ತದೆ. ಅಲ್ಲದೇ ತಲೆ ಕೂದಲು ಉದುರುವುದು ಕಡಿಮೆಯಾಗುತ್ತದೆ.

* ನಿಯಮಿತ ಹರಿವೆ ಸೊಪ್ಪಿನ ಸೇವನೆಯಿಂದ ಜೀರ್ಣಕ್ರಿೆುಂ ಉತ್ತಮಗೊಳ್ಳುತ್ತದೆ. ಸಸ್ಯಜನ್ಯ ಪ್ರೋಟೀನ್‌ಗೆ ಇದು ಉತ್ತಮ ಆಗರ.

* ಹರಿವೆ ಬೀಜಗಳೂ ಉತ್ತಮ ಆರೋಗ್ಯಕ್ಕೆ ಪೂರಕವಾಗಿದ್ದು, ಇವುಗಳನ್ನು ಹಿಟ್ಟು ಮಾಡಿಸಿ ಇತರ ಹಿಟ್ಟುಗಳೊಂದಿಗೆ ಮಿಶ್ರಮ ಮಾಡಿ ಸೇವನೆ ಮಾಡಬಹುದು.

andolanait

Recent Posts

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

41 seconds ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

7 mins ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

3 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

3 hours ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

3 hours ago