ಆಂದೋಲನ ಪುರವಣಿ

ಯೋಗ ಕ್ಷೇಮ : ಆರೋಗ್ಯಕ್ಕೆ ಒಳ್ಳೆಯದ್ದು ಹರಿವೆ ಸೊಪ್ಪು

ವೈಜ್ಞಾನಿಕವಾಗಿ ಅಮರಾಂತುಸ್ ಎಂದು ಕರೆಯಲ್ಪಡುವ ಹರಿವೆ ಸೊಪ್ಪು ಆರೋಗ್ಯದ ಮೂಲ. ದಂಟಿನ ಸೊಪ್ಪು ಎನ್ನುವ ಹೆಸರಿನಿಂದಲೂ ಕರೆಯಲ್ಪಡುವ ಇದರಲ್ಲಿ ಸುಮಾರು ೫೦ ಕ್ಕೂ ಹೆಚ್ಚು ಬಗೆಗಳಿವೆ. ಹಲವಾರು ಬಣ್ಣ, ರುಚಿ, ಎತ್ತರಗಳನ್ನು ಒಳಗೊಂಡಿರುವ ಈ ಸೊಪ್ಪು ಪ್ರೋಟೀನ್, ಕ್ಯಾಲ್ಸಿುಂಂ, ಕಬ್ಬಿಣ, ತಾಮ್ರ ಹಾಗೂ ಅಗತ್ಯ ಜೀವಸತ್ವಗಳ ಆಗರ.

ರಿಬೊಫ್ಲಾವಿನ್, ನಿಾಂಸಿನ್, ಥೈಮೇನ್, ವಿಟಮಿನ್ ಬಿ ೬ ಅಂಶಗಳು ಹರಿವೆುಂಲ್ಲಿ ಇದ್ದು, ಇವು ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚಲು ಸಹಾಯ ಮಾಡುತ್ತವೆ. ಅಲ್ಲದೇ ದೇಹದಲ್ಲಿ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ.

ಈ ಸೊಪ್ಪಿನಲ್ಲಿ ಕೊಬ್ಬಿನ ಅಂಶ ಇಲ್ಲದೇ ಇರುವುದರಿಂದ ತೂಕ ಇಳಿಸಬೇಕು ಎಂದುಕೊಂಡವರಿಗೆ ಇದು ಒಳ್ಳೆಯ ಆಯ್ಕೆ. ಜೊತೆಗೆ ಅತಿ ಹೆಚ್ಚಿನ ನಾರಿನ ಅಂಶ ಇದರಲ್ಲಿ ಇರುವುದರಿಂದ ಜೀರ್ಣಕ್ರಿಯೆಗೆ ಸಹಕಾರಿ.

ಹರಿವೆಯ ಅನುಕೂಲ

* ಹರಿವೆ ಸೊಪ್ಪು ರಕ್ತದಲ್ಲಿನ ಕೊಲೆಸ್ಟಾಲ್ ಅಂಶವನ್ನು ಕಡಿಮೆಗೊಳಿಸುತ್ತದೆ. ಇದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳ ನಿಯಂತ್ರಣವಾಗುತ್ತದೆ. ಅಲ್ಲದೇ ರಕ್ತದ ಒತ್ತಡವೂ ಕಡಿಮೆಯಾಗುತ್ತದೆ.

* ಹರಿವೆ ಸೊಪ್ಪು ದೇಹಕ್ಕೆ ಬೇಕಾಗಿರುವ ಶೇ.೯೭ರಷ್ಟು ವಿಟಮಿನ್ ಒದಗಿಸುತ್ತದೆ. ದೇಹದಲ್ಲಿ ಕರಗಬಲ್ಲ ಫೈಬರ್, ಬೆಟಾ ಕೆರೊಟೆನ್, ಝಿುಂಕ್ಸಾಂಥಿನ್ ಮತ್ತು ಲುಟೇನ್ ಅಂಶವಿದ್ದು, ಇವು ಕ್ಯಾನ್ಸರ್ ನಿವಾರಕಗಳಾಗಿ ಕೆಲಸ ಮಾಡುತ್ತವೆ.

* ಸೊಪ್ಪಿನಲ್ಲಿ ಇರುವ ವಿಟಮಿನ್ ಎ ನಿಂದಾಗಿ ಚರ್ಮ ಹಾಗೂ ಕಣ್ಣಿನ ಆರೋಗ್ಯ ವೃದ್ಧಿಯಾಗುತ್ತದೆ. ಅಲ್ಲದೇ ತಲೆ ಕೂದಲು ಉದುರುವುದು ಕಡಿಮೆಯಾಗುತ್ತದೆ.

* ನಿಯಮಿತ ಹರಿವೆ ಸೊಪ್ಪಿನ ಸೇವನೆಯಿಂದ ಜೀರ್ಣಕ್ರಿೆುಂ ಉತ್ತಮಗೊಳ್ಳುತ್ತದೆ. ಸಸ್ಯಜನ್ಯ ಪ್ರೋಟೀನ್‌ಗೆ ಇದು ಉತ್ತಮ ಆಗರ.

* ಹರಿವೆ ಬೀಜಗಳೂ ಉತ್ತಮ ಆರೋಗ್ಯಕ್ಕೆ ಪೂರಕವಾಗಿದ್ದು, ಇವುಗಳನ್ನು ಹಿಟ್ಟು ಮಾಡಿಸಿ ಇತರ ಹಿಟ್ಟುಗಳೊಂದಿಗೆ ಮಿಶ್ರಮ ಮಾಡಿ ಸೇವನೆ ಮಾಡಬಹುದು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago