ಆಂದೋಲನ ಪುರವಣಿ

ಯೋಗ ಕ್ಷೇಮ : ಆರೋಗ್ಯಕ್ಕೆ ಒಳ್ಳೆಯದ್ದು ಹರಿವೆ ಸೊಪ್ಪು

ವೈಜ್ಞಾನಿಕವಾಗಿ ಅಮರಾಂತುಸ್ ಎಂದು ಕರೆಯಲ್ಪಡುವ ಹರಿವೆ ಸೊಪ್ಪು ಆರೋಗ್ಯದ ಮೂಲ. ದಂಟಿನ ಸೊಪ್ಪು ಎನ್ನುವ ಹೆಸರಿನಿಂದಲೂ ಕರೆಯಲ್ಪಡುವ ಇದರಲ್ಲಿ ಸುಮಾರು ೫೦ ಕ್ಕೂ ಹೆಚ್ಚು ಬಗೆಗಳಿವೆ. ಹಲವಾರು ಬಣ್ಣ, ರುಚಿ, ಎತ್ತರಗಳನ್ನು ಒಳಗೊಂಡಿರುವ ಈ ಸೊಪ್ಪು ಪ್ರೋಟೀನ್, ಕ್ಯಾಲ್ಸಿುಂಂ, ಕಬ್ಬಿಣ, ತಾಮ್ರ ಹಾಗೂ ಅಗತ್ಯ ಜೀವಸತ್ವಗಳ ಆಗರ.

ರಿಬೊಫ್ಲಾವಿನ್, ನಿಾಂಸಿನ್, ಥೈಮೇನ್, ವಿಟಮಿನ್ ಬಿ ೬ ಅಂಶಗಳು ಹರಿವೆುಂಲ್ಲಿ ಇದ್ದು, ಇವು ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚಲು ಸಹಾಯ ಮಾಡುತ್ತವೆ. ಅಲ್ಲದೇ ದೇಹದಲ್ಲಿ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ.

ಈ ಸೊಪ್ಪಿನಲ್ಲಿ ಕೊಬ್ಬಿನ ಅಂಶ ಇಲ್ಲದೇ ಇರುವುದರಿಂದ ತೂಕ ಇಳಿಸಬೇಕು ಎಂದುಕೊಂಡವರಿಗೆ ಇದು ಒಳ್ಳೆಯ ಆಯ್ಕೆ. ಜೊತೆಗೆ ಅತಿ ಹೆಚ್ಚಿನ ನಾರಿನ ಅಂಶ ಇದರಲ್ಲಿ ಇರುವುದರಿಂದ ಜೀರ್ಣಕ್ರಿಯೆಗೆ ಸಹಕಾರಿ.

ಹರಿವೆಯ ಅನುಕೂಲ

* ಹರಿವೆ ಸೊಪ್ಪು ರಕ್ತದಲ್ಲಿನ ಕೊಲೆಸ್ಟಾಲ್ ಅಂಶವನ್ನು ಕಡಿಮೆಗೊಳಿಸುತ್ತದೆ. ಇದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳ ನಿಯಂತ್ರಣವಾಗುತ್ತದೆ. ಅಲ್ಲದೇ ರಕ್ತದ ಒತ್ತಡವೂ ಕಡಿಮೆಯಾಗುತ್ತದೆ.

* ಹರಿವೆ ಸೊಪ್ಪು ದೇಹಕ್ಕೆ ಬೇಕಾಗಿರುವ ಶೇ.೯೭ರಷ್ಟು ವಿಟಮಿನ್ ಒದಗಿಸುತ್ತದೆ. ದೇಹದಲ್ಲಿ ಕರಗಬಲ್ಲ ಫೈಬರ್, ಬೆಟಾ ಕೆರೊಟೆನ್, ಝಿುಂಕ್ಸಾಂಥಿನ್ ಮತ್ತು ಲುಟೇನ್ ಅಂಶವಿದ್ದು, ಇವು ಕ್ಯಾನ್ಸರ್ ನಿವಾರಕಗಳಾಗಿ ಕೆಲಸ ಮಾಡುತ್ತವೆ.

* ಸೊಪ್ಪಿನಲ್ಲಿ ಇರುವ ವಿಟಮಿನ್ ಎ ನಿಂದಾಗಿ ಚರ್ಮ ಹಾಗೂ ಕಣ್ಣಿನ ಆರೋಗ್ಯ ವೃದ್ಧಿಯಾಗುತ್ತದೆ. ಅಲ್ಲದೇ ತಲೆ ಕೂದಲು ಉದುರುವುದು ಕಡಿಮೆಯಾಗುತ್ತದೆ.

* ನಿಯಮಿತ ಹರಿವೆ ಸೊಪ್ಪಿನ ಸೇವನೆಯಿಂದ ಜೀರ್ಣಕ್ರಿೆುಂ ಉತ್ತಮಗೊಳ್ಳುತ್ತದೆ. ಸಸ್ಯಜನ್ಯ ಪ್ರೋಟೀನ್‌ಗೆ ಇದು ಉತ್ತಮ ಆಗರ.

* ಹರಿವೆ ಬೀಜಗಳೂ ಉತ್ತಮ ಆರೋಗ್ಯಕ್ಕೆ ಪೂರಕವಾಗಿದ್ದು, ಇವುಗಳನ್ನು ಹಿಟ್ಟು ಮಾಡಿಸಿ ಇತರ ಹಿಟ್ಟುಗಳೊಂದಿಗೆ ಮಿಶ್ರಮ ಮಾಡಿ ಸೇವನೆ ಮಾಡಬಹುದು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago