ವೈಜ್ಞಾನಿಕವಾಗಿ ಅಮರಾಂತುಸ್ ಎಂದು ಕರೆಯಲ್ಪಡುವ ಹರಿವೆ ಸೊಪ್ಪು ಆರೋಗ್ಯದ ಮೂಲ. ದಂಟಿನ ಸೊಪ್ಪು ಎನ್ನುವ ಹೆಸರಿನಿಂದಲೂ ಕರೆಯಲ್ಪಡುವ ಇದರಲ್ಲಿ ಸುಮಾರು ೫೦ ಕ್ಕೂ ಹೆಚ್ಚು ಬಗೆಗಳಿವೆ. ಹಲವಾರು ಬಣ್ಣ, ರುಚಿ, ಎತ್ತರಗಳನ್ನು ಒಳಗೊಂಡಿರುವ ಈ ಸೊಪ್ಪು ಪ್ರೋಟೀನ್, ಕ್ಯಾಲ್ಸಿುಂಂ, ಕಬ್ಬಿಣ, ತಾಮ್ರ ಹಾಗೂ ಅಗತ್ಯ ಜೀವಸತ್ವಗಳ ಆಗರ.
ರಿಬೊಫ್ಲಾವಿನ್, ನಿಾಂಸಿನ್, ಥೈಮೇನ್, ವಿಟಮಿನ್ ಬಿ ೬ ಅಂಶಗಳು ಹರಿವೆುಂಲ್ಲಿ ಇದ್ದು, ಇವು ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚಲು ಸಹಾಯ ಮಾಡುತ್ತವೆ. ಅಲ್ಲದೇ ದೇಹದಲ್ಲಿ ರೋಗನಿರೋಧಕ ಶಕ್ತಿಯೂ ಹೆಚ್ಚುತ್ತದೆ.
ಈ ಸೊಪ್ಪಿನಲ್ಲಿ ಕೊಬ್ಬಿನ ಅಂಶ ಇಲ್ಲದೇ ಇರುವುದರಿಂದ ತೂಕ ಇಳಿಸಬೇಕು ಎಂದುಕೊಂಡವರಿಗೆ ಇದು ಒಳ್ಳೆಯ ಆಯ್ಕೆ. ಜೊತೆಗೆ ಅತಿ ಹೆಚ್ಚಿನ ನಾರಿನ ಅಂಶ ಇದರಲ್ಲಿ ಇರುವುದರಿಂದ ಜೀರ್ಣಕ್ರಿಯೆಗೆ ಸಹಕಾರಿ.
ಹರಿವೆಯ ಅನುಕೂಲ
* ಹರಿವೆ ಸೊಪ್ಪು ರಕ್ತದಲ್ಲಿನ ಕೊಲೆಸ್ಟಾಲ್ ಅಂಶವನ್ನು ಕಡಿಮೆಗೊಳಿಸುತ್ತದೆ. ಇದರಿಂದ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳ ನಿಯಂತ್ರಣವಾಗುತ್ತದೆ. ಅಲ್ಲದೇ ರಕ್ತದ ಒತ್ತಡವೂ ಕಡಿಮೆಯಾಗುತ್ತದೆ.
* ಹರಿವೆ ಸೊಪ್ಪು ದೇಹಕ್ಕೆ ಬೇಕಾಗಿರುವ ಶೇ.೯೭ರಷ್ಟು ವಿಟಮಿನ್ ಒದಗಿಸುತ್ತದೆ. ದೇಹದಲ್ಲಿ ಕರಗಬಲ್ಲ ಫೈಬರ್, ಬೆಟಾ ಕೆರೊಟೆನ್, ಝಿುಂಕ್ಸಾಂಥಿನ್ ಮತ್ತು ಲುಟೇನ್ ಅಂಶವಿದ್ದು, ಇವು ಕ್ಯಾನ್ಸರ್ ನಿವಾರಕಗಳಾಗಿ ಕೆಲಸ ಮಾಡುತ್ತವೆ.
* ಸೊಪ್ಪಿನಲ್ಲಿ ಇರುವ ವಿಟಮಿನ್ ಎ ನಿಂದಾಗಿ ಚರ್ಮ ಹಾಗೂ ಕಣ್ಣಿನ ಆರೋಗ್ಯ ವೃದ್ಧಿಯಾಗುತ್ತದೆ. ಅಲ್ಲದೇ ತಲೆ ಕೂದಲು ಉದುರುವುದು ಕಡಿಮೆಯಾಗುತ್ತದೆ.
* ನಿಯಮಿತ ಹರಿವೆ ಸೊಪ್ಪಿನ ಸೇವನೆಯಿಂದ ಜೀರ್ಣಕ್ರಿೆುಂ ಉತ್ತಮಗೊಳ್ಳುತ್ತದೆ. ಸಸ್ಯಜನ್ಯ ಪ್ರೋಟೀನ್ಗೆ ಇದು ಉತ್ತಮ ಆಗರ.
* ಹರಿವೆ ಬೀಜಗಳೂ ಉತ್ತಮ ಆರೋಗ್ಯಕ್ಕೆ ಪೂರಕವಾಗಿದ್ದು, ಇವುಗಳನ್ನು ಹಿಟ್ಟು ಮಾಡಿಸಿ ಇತರ ಹಿಟ್ಟುಗಳೊಂದಿಗೆ ಮಿಶ್ರಮ ಮಾಡಿ ಸೇವನೆ ಮಾಡಬಹುದು.
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…