ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು | ಬದುಕು ಕೊಟ್ಟ ಮೇಷ್ಟ್ರಿಗೆ ಸಾವಿರ ಶರಣು

– ಶಿಲ್ಪ ಎಚ್.ಎಸ್. ಶಿಕ್ಷಕರು

ನನ್ನ ನೆಚ್ಚಿನ ಶಿಕ್ಷಕ ಸಾಲಿನಲ್ಲಿ ಮೊದಲು ನಿಲ್ಲುವವರು ಎಂ.ವಿ. ಮಹಾದೇವಪ್ಪ. ಕನ್ನಡ ಮೇಷ್ಟ್ರು, ನಮ್ಮ ಪ್ರೀತಿಯ ಮೇಷ್ಟ್ರು. ನಾನು ಓದಿದ್ದು ಎಚ್.ಡಿ.ಕೋಟೆಯ ಚಂದ್ರಮೌಳೇಶ್ವರ ಪ್ರೌಢಶಾಲೆಯಲ್ಲಿ. ಖಾಸಗಿ ಶಾಲೆ ಆಗಿದ್ದರೂ ಅಂದಿನ ಕಾಲಕ್ಕೆ ಸೂಕ್ತ ಪೀಠೋಪಕರಣಗಳ ಕೊರತೆ ಇತ್ತು. ಆದರೆ ಅದೆಲ್ಲವನ್ನೂ ಮರೆಸಿ ನಮ್ಮನ್ನು ಪರಿಸರದ ಮಡಿಲಿನಲ್ಲಿ ಕೂರಿಸಿ ಪಾಠ ಮಾಡುತ್ತಿದ್ದರು. ಅಲ್ಲಿಯೇ ನಮಗೆ ಕೊರತೆಗಳನ್ನು ಮರೆತು ಇರುವುದರಲ್ಲಿಯೇ ಚೆಂದದ ಅನುಭವ ಕಟ್ಟಿಕೊಳ್ಳಬೇಕು ಎಂದು ಕಲಿಸಿಕೊಟ್ಟಿದ್ದರು.

ನಾನು ೮ನೇ ತರಗತಿಯಲ್ಲಿದ್ದಾಗ ಗಣಿತ ಮತ್ತು ಭೌತಶಾಸ್ತ್ರ ಶಿಕ್ಷಕರು ಇರಲಿಲ್ಲ. ಆಗ ಈ ವಿಷಯಗಳನ್ನು ನಮ್ಮ ಮುಖ್ಯ ಶಿಕ್ಷಕರಾದ ಮಹಾದೇವಪ್ಪನವೇ ಬೋಧಿಸುತ್ತಿದ್ದರು. ಅವರ ಬೋಧನೆ ಯಾವ ಪರಿಣತ ಶಿಕ್ಷಕರಿಗೂ ಕಡಿಮೆ ಇರಲಿಲ್ಲ. ನನಗೆ ಬೇರೆ ವಿಷಯಗಳಲ್ಲಿ ಆಸಕ್ತಿ ಕಡಿಮೆಯಾಗಿ ಗಣಿತ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಬೆಳೆಯಿತು. ನಂತರ ೯ನೇ ತರಗತಿಗೆ ಬಂದಾಗ ಹೊಸದಾಗಿ ವಿಜ್ಞಾನ ಶಿಕ್ಷಕರು ನೇಮಕವಾದರು. ಅವರೂ ಅತ್ಯುತ್ತಮವಾಗಿ ಪಾಠ ಮಾಡುತ್ತಿದ್ದರು. ಅವರ ಪ್ರಕಾರ ಮೊದಲ ಕಿರು ಪರೀಕ್ಷೆಯಲ್ಲಿ ಎಷ್ಟು ಅಂಕ ಗಳಿಸುತ್ತೆವೆಯೋ ಅದಕ್ಕಿಂತ ಹೆಚ್ಚು ಅಂಕಗಳನ್ನು ಮುಂದಿನ ಕಿರು ಪರೀಕ್ಷೆಯಲ್ಲಿ ಪಡೆಯಬೇಕಿತ್ತು. ಆದರೆ ನಾನು ಭೌತಶಾಸ್ತ್ರದಲ್ಲಿ ಮೊದಲು ೨೪ ಅಂಕಗಳಿಸಿ ನಂತರ ೧೮ ಅಂಕ ಗಳಿಸಿದ್ದೆ. ಇದಕ್ಕೆ ಸಿಟ್ಟಾಗಿದ್ದ ವಿಜ್ಞಾನ ಶಿಕ್ಷಕರು ನನಗೆ ಪೆಟ್ಟು ನೀಡಿದ್ದರು. ಇದನ್ನು ಗಮನಿಸಿದ ನಮ್ಮ ಮುಖ್ಯ ಶಿಕ್ಷಕರಾದ ಮಹಾದೇವಪ್ಪನವರು ನನ್ನನ್ನು ಕರೆದು ನಾನು ಮಾಡಿದ ತಪ್ಪಿನ ಬಗ್ಗೆ ತಿಳಿಸಿದರು. ಹೇಗೆ ಪರೀಕ್ಷೆ ಎದುರಿಸಬೇಕು, ಏನು ಮಾಡಬೇಕು ಎಂದು ತಿಳಿಸಿದರು.

ಅಂದಿನಿಂದ ನಾನು ಆಸಕ್ತಿಯಿಂದ ಭೌತಶಾಸ್ತ್ರ ಓದಲು ಶುರುಮಾಡಿದೆ. ೧೦ನೇ ತರಗತಿಯಲ್ಲಿ ವಿಜ್ಞಾನದಲ್ಲಿ ಅತಿ ಹೆಚ್ಚು ಅಂಕಗಳಿಸಿ ತಾಲ್ಲೂಕು ಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡೆ. ನಂತರ ವಿಜ್ಞಾನ ವಿಷಯದಲ್ಲಿಯೇ ಬಿಎಸ್ಸಿ ಮಾಡಿ, ಬಿಎಡ್ ಓದಿ ಇಂದು ವಿಜ್ಞಾನ ಶಿಕ್ಷಕಿಯಾಗಿದ್ದೇನೆ.

ಇದಕ್ಕೆಲ್ಲ ನಮ್ಮ ಗುರುಗಳೇ ಕಾರಣ. ಅವರ ಕಲಿಸಿದ ಪಾಠ, ಅವರ ಸರಳ ಮಾತು, ನಡೆ, ಮೃದು ಸ್ವಭಾವ, ನಮ್ಮನ್ನು ತಿದ್ದಿ, ಬುದ್ದಿ ಹೇಳಿದ ಪರಿ ಅನನ್ಯ. ನನ್ನ ಜೀವನ ರೂಪಿಸಿಕೊಳ್ಳಲು ನೆರವಾದ ನನ್ನ ಗುರು ಮಹಾದೇವಪ್ಪನವರಿಗೆ ಅನಂತ ಧನ್ಯವಾದಗಳು.

– ಶಿಲ್ಪ ಎಚ್.ಎಸ್. ಶಿಕ್ಷಕರು

 

andolanait

Recent Posts

ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಎಚ್‌.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…

27 mins ago

ಮಂತ್ರಾಲಯದಲ್ಲಿ 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್‌ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…

53 mins ago

ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…

1 hour ago

ಓದುಗರ ಪತ್ರ: ಈಡೇರಿದ ಭಾರತ್ ಜೋಡೋ ಪಾದಯಾತ್ರೆ ಆಶ್ವಾಸನೆ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…

4 hours ago

ಓದುಗರ ಪತ್ರ: ಅರ್ಥಪೂರ್ಣ ಲೇಖನ

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…

4 hours ago

ಓದುಗರ ಪತ್ರ: ಹಾರ್ಡಿಂಜ್ ವೃತ್ತದಲ್ಲಿರುವ ನಿಲ್ದಾಣದಲ್ಲೇ ಬಸ್ ನಿಲುಗಡೆಯಾಗಲಿ

ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…

4 hours ago