ಅ. ೧೬ರಂದು ವಿಶ್ವ ಅರಿವಳಿಕೆ ಆವಿಷ್ಕಾರ ದಿನ; ಶಸ್ತ್ರ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುವ ಅನಸ್ತೇಶಿಯಾಲಜಿಸ್ಟ್
– ಡಾ. ವೈದ್ಯನಾಥ್, ಅನಸ್ತೇಶಿಯಾಲಜಿಸ್ಟ್, ಮೈಸೂರು
೧೮೪೬ರ ಅ. ೧೬ರಂದು ಅರಿವಳಿಕೆ ಅಥವಾ ಅನಸ್ತೇಶಿಯವನ್ನು ಎಲ್ಲರಿಗೂ ನೀಡಬಹುದು ಎಂದು ಅಮೆರಿಕದ ಬೋಸ್ಟನ್ನಲ್ಲಿ ಪ್ರಥಮ ಬಾರಿಗೆ ಪ್ರದರ್ಶಿಸಲಾಯಿತು. ಅದರ ಅಂಗವಾಗಿ ಪ್ರತಿ ವರ್ಷ ಅ. ೧೬ರನ್ನು ವಿಶ್ವ ಅರವಳಿಕೆ ಆವಿಷ್ಕಾರ ದಿನವನ್ನಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ.
ಶಸ್ತ್ರ ಚಿಕಿತ್ಸೆ ಸಾಮಾನ್ಯ ಎನ್ನುವಂತಾಗಿರುವ ಇಂದಿನ ದಿನಗಳಲ್ಲಿ, ಶಸ್ತ್ರ ಚಿಕಿತ್ಸೆ ಯಶಸ್ವಿಯಾಗುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುವ ಅನಸ್ತೇಶಿಯಾ ಅಥವಾ ಅರಿವಳಿಕೆ ಇಂಜೆಕ್ಷನ್, ಅನಸ್ತೇಶಿಯಾಲಜಿಸ್ಟ್ (ಅರವಳಿಕೆ ತಜ್ಞ) ಬಗ್ಗೆ ತುಸುವಾದರೂ ತಿಳಿದುಕೊಂಡಿರುವುದು ಉತ್ತಮ.
ಯಾವುದೇ ಶಸ್ತ್ರ ಚಿಕಿತ್ಸೆಗೂ ಮುನ್ನ ರೋಗಿಗೆ ಅರವಳಿಕೆ ಮದ್ದು ನೀಡುವುದು ಸಾಮಾನ್ಯ. ಶಸ್ತ್ರ ಚಿಕಿತ್ಸೆ ವಿಧಾನ, ದೇಹದ ಭಾಗಗಳ ಆಧಾರದ ಮೇಲೆ ಅರಿವಳಿಕೆ ತಜ್ಞರು ತಪಾಸಣೆ ಅರವಳಿಕೆ ನೀಡುತ್ತಾರೆ. ಇದರಿಂದ ವಿಷಯ ತಜ್ಞ ವೈದ್ಯರು ಶಸ್ತ್ರ ಚಿಕಿತ್ಸೆ ಮುಂದುವರಿಸಲು ಸಹಾಯವಾಗುತ್ತದೆ.
ಶಸ್ತ್ರ ಚಿಕಿತ್ಸೆಯ ನಂತರವೂ ಅರಿವಳಿಕೆ ತಜ್ಞರು ರೋಗಿಯ ತಪಾಸಣೆ ನಡೆಸುವ ಮೂಲಕ ರೋಗಿಯ ಮೇಲ್ವಿಚಾರಣೆಯಲ್ಲಿಯೂ ಭಾಗಿಯಾಗಿರುತ್ತಾರೆ.
ಹೃದ್ರೋಗ ಸಂಬಂಧಿತ ಕ್ಯಾತ್ ಲ್ಯಾಬ್ ಪ್ರಕ್ರಿಯೆಗಳು, ಎಂಡೊಸ್ಕೋಪಿ, ಮಕ್ಕಳ ಎಂಆರ್ಐ ಸ್ಕ್ಯಾನ್, ಹೆರಿಗೆ ಸಂದರ್ಭಗಳಲ್ಲಿ ಅರವಳಿಗೆ ಮದ್ದು ಮತ್ತು ತಜ್ಞರ ಜವಾಬ್ದಾರಿ ಹೆಚ್ಚಿರುತ್ತದೆ.
ಅರಿವಳಿಕೆ ನೀಡುವ ವಿಧಾನಗಳು
ಅರಿವಳಿಕೆ ತಜ್ಞ ವೈದ್ಯರು ಸಾಮಾನ್ಯವಾಗಿ ಎರಡು- ಮೂರು ರೀತಿಯ ಅರಿವಳಿಕೆ ಆರೈಕೆಯನ್ನು ಒದಗಿಸುತ್ತಾರೆ
ಸಂಪೂರ್ಣ ಅರಿವಳಿಕೆ
ಸಂಪೂರ್ಣ ಅರಿವಳಿಕೆಯನ್ನು ರಕ್ತ ನಾಳಗಳಿಗೆ ನೀಡಲಾಗುತ್ತದೆ. ಇದು ರೋಗಿಯನ್ನು ಪ್ರಜ್ಞೆ ಕಳೆದುಕೊಳ್ಳುವಂತೆ ಮಾಡುತ್ತದೆ. ಇದನ್ನು ಕುತ್ತಿಗೆ ಅಥವಾ ಎದೆಯ ಭಾಗದ ಶಸ್ತ್ರಚಿಕಿತ್ಸೆ, ಮೆದುಳಿಗೆ ಸಂಬಂಧಿತ ಶಸ್ತ್ರ ಚಿಕಿತ್ಸೆ ಹಾಗೂ ತೆರೆದ ಹೃದಯ ಶಸ್ತ್ರಚಿಕಿತ್ಸೆಯ oತಹ ಸನ್ನಿವೇಶಗಳಲ್ಲಿ ಪ್ರಯೋಗಿಸಲಾಗುತ್ತದೆ.
ಪ್ರಾಂತೀಯ ಅರಿವಳಿಕೆ:
ಆಂಗ್ಲದಲ್ಲಿ ರೀಜನಲ್ ಅನಾಸ್ತೇಶಿಯ ಎನ್ನುವ ಈ ಪ್ರಕ್ರಿಯೆಯಲ್ಲಿ ಸೊಂಟದಿಂದ ಕೆಳಭಾಗ, ದೇಹದ ದೊಡ್ಡ ಭಾಗವನ್ನು ಮರಗಟ್ಟಲು ಅರವಳಿಗೆ ಪ್ರಯೋಗಿಸಲಾಗುತ್ತದೆ. ಈ ಇಂಜೆಕ್ಷನ್ ಅನ್ನು ಕ್ಯಾತಿಟರ್ ಎಂಬ ಸಣ್ಣ ಕೊಳವೆಯ ಮೂಲಕ ಬೆನ್ನು ಹುರಿಗೆ ನೀಡಲಾಗುತ್ತದೆ. ಇದರಿಂದ ರೋಗಿ ಎಚ್ಚರದಿಂದ ಇದ್ದರೂ ನಿಗದಿತ ಭಾಗದಲ್ಲಿ ನಡೆಸುವ ಶಸ್ತ್ರ ಚಿಕಿತ್ಸೆಯಿಂದ ನೋವಿನ ಅನುಭವ ಆಗುವುದಿಲ್ಲ. ಬೆನ್ನುಮೂಳೆಯ ಬ್ಲಾಕ್ಗಳು ಮತ್ತು ಎಪಿಡ್ಯೂರಲ್ಗಳನ್ನು ಒಳಗೊಂಡಂತೆ ಈ ರೀತಿಯ ಅರಿವಳಿಕೆಯನ್ನು ಹೆಚ್ಚಾಗಿ ಹೆರಿಗೆಯ ಸಮಯದಲ್ಲಿ ಮತ್ತು ಕಾಲು ಅಥವಾ ಹೊಟ್ಟೆಯ ಶಸ್ತ್ರಚಿಕಿತ್ಸೆ ವೇಳೆ ಬಳಸಲಾಗುತ್ತದೆ.
ಸ್ಥಳೀಯ ಅರಿವಳಿಕೆ
ಆಂಗ್ಲ ಭಾಷೆಯಲ್ಲಿ ಲೋಕಲ್ ಅನಾಸ್ತೇಶಿಯ ಎಂದು ಕರೆಯ ಲ್ಪಡುವ ಈ ಪ್ರಕ್ರಿಯೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸುವ ದೇಹದ ಒಂದು ಸಣ್ಣ ಪ್ರದೇಶವನ್ನು ಮಾತ್ರ ಮರಗಟ್ಟಿಸಲಾಗುತ್ತದೆ. ಉದಾಹರಣೆಗೆ ಕಣ್ಣಿನ ಕಟರಾಕ್ಟ್ ಶಸ್ತ್ರ ಚಿಕಿತ್ಸೆ,
ಸಣ್ಣ ಪುಟ್ಟ ಗೆಡ್ಡೆಗಳನ್ನು ತೆಗೆಯುವುದು, ಆಳವಾದ ಗಾಯಗಳನ್ನು ಹೊಲಿಯುವುದು ಅಥವಾ ಸಣ್ಣ ಪುಟ್ಟ ಗಂಟುಗಳು ನಿರ್ಮೂಲನೆ ಮುಂತಾದ ಕಾರ್ಯವಿಧಾನ ಗಳಿಗೆ ಇದನ್ನು ಹೆಚ್ಚಾಗಿ ಬಳಸಲಾಗುತ್ತದೆ.
ಅನಸ್ತೇಶಿಯಾ ತಜ್ಞರೊಂದಿಗೆ ಏನನ್ನೂ ಮುಚ್ಚಿಡಬೇಡಿ
– ಹೃದಯ ವೈಫಲ್ಯ, ಮಧುಮೇಹ ಅಥವಾ ಆಸ್ತವಾದಂತಹ ಯಾವುದೇ ವೈದ್ಯಕೀಯ ಸಮಸ್ಯೆಗಳ ಬಗ್ಗೆ ನಿಮ್ಮ ಅರಿವಳಿಕೆ ತಜ್ಞ ವೈದ್ಯರಿಗೆ ತಿಳಿಸಲು ಮರೆಯದಿರಿ.
– ನೀವು ಯಾವ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೀರಿ ಎಂಬ ವಾಹಿತಿಯನ್ನು ತಪ್ಪದೇ ಅರವಳಿಗೆ ತಜ್ಞರೊಂದಿಗೆ ಹಂಚಿಕೊಳ್ಳಿ. ಅಲರ್ಜಿ ಇದ್ದಲ್ಲಿ ತಪ್ಪದೇ ತಿಳಿಸಿ.
– ನೀವು ಅರಿವಳಿಕೆ ಇಂಜೆಕ್ಷನ್ ಪಡೆದು ತೊಂದರೆ ಅನುಭವಿಸಿದ್ದರೆ, ಈ ಬಗ್ಗೆ ಏನಾದರೂ ಪ್ರಶ್ನೆಗಳಿದ್ದರೆ ತಜ್ಞರೊಂದಿಗೆ ಹಂಚಿಕೊಳ್ಳಿ.
– ಮೈಗ್ರೇನ್, ಬೆನ್ನು ನೋವು, ಕ್ಯಾನ್ಸರ್ ನೋವು ಅಥವಾ ಫೈಬ್ರೊವ್ಯಾಲ್ಗಿಯದಂತಹ ಸಮಸ್ಯೆಗಳು ಇದ್ದರೆ ತಕ್ಷಣ ಅರವಳಿಗೆ ತಜ್ಞರನ್ನು ಭೇಟಿಯಾಗುವುದು ಸೂಕ್ತ.
ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…
ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…
ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…
ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು…
ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ…
ಲಕ್ಷ್ಮಿಕಾಂತ್ ಕೊಮಾರಪ್ಪ ಹತ್ತಾರು ಸಮಸ್ಯೆಗಳ ನಡುವೆಯೂ ಕಾಫಿ ಬೆಳೆದಿದ್ದವರಿಗೆ ನಷ್ಟದ ಭೀತಿ; ಮತ್ತಷ್ಟು ದರ ಕುಸಿತಗೊಳ್ಳುವ ಸಾಧ್ಯತೆ ಸೋಮವಾರಪೇಟೆ: ಕಾರ್ಮಿಕರ ಕೊರತೆ,…