ಆಂದೋಲನ ಪುರವಣಿ

ಯೋಗ ಕ್ಷೇಮ: ಅರಿವಳಿಕೆ ಬಗ್ಗೆ ಅರಿವಿರಲಿ

ಅ. ೧೬ರಂದು ವಿಶ್ವ ಅರಿವಳಿಕೆ ಆವಿಷ್ಕಾರ ದಿನ; ಶಸ್ತ್ರ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುವ ಅನಸ್ತೇಶಿಯಾಲಜಿಸ್ಟ್

– ಡಾ. ವೈದ್ಯನಾಥ್, ಅನಸ್ತೇಶಿಯಾಲಜಿಸ್ಟ್, ಮೈಸೂರು

೧೮೪೬ರ ಅ. ೧೬ರಂದು ಅರಿವಳಿಕೆ ಅಥವಾ ಅನಸ್ತೇಶಿಯವನ್ನು ಎಲ್ಲರಿಗೂ ನೀಡಬಹುದು ಎಂದು ಅಮೆರಿಕದ ಬೋಸ್ಟನ್ನಲ್ಲಿ ಪ್ರಥಮ ಬಾರಿಗೆ ಪ್ರದರ್ಶಿಸಲಾಯಿತು. ಅದರ ಅಂಗವಾಗಿ ಪ್ರತಿ ವರ್ಷ ಅ. ೧೬ರನ್ನು ವಿಶ್ವ ಅರವಳಿಕೆ ಆವಿಷ್ಕಾರ ದಿನವನ್ನಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ.


ಶಸ್ತ್ರ ಚಿಕಿತ್ಸೆ ಸಾಮಾನ್ಯ ಎನ್ನುವಂತಾಗಿರುವ ಇಂದಿನ ದಿನಗಳಲ್ಲಿ, ಶಸ್ತ್ರ ಚಿಕಿತ್ಸೆ ಯಶಸ್ವಿಯಾಗುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುವ ಅನಸ್ತೇಶಿಯಾ ಅಥವಾ ಅರಿವಳಿಕೆ ಇಂಜೆಕ್ಷನ್, ಅನಸ್ತೇಶಿಯಾಲಜಿಸ್ಟ್ (ಅರವಳಿಕೆ ತಜ್ಞ) ಬಗ್ಗೆ ತುಸುವಾದರೂ ತಿಳಿದುಕೊಂಡಿರುವುದು ಉತ್ತಮ.

ಯಾವುದೇ ಶಸ್ತ್ರ ಚಿಕಿತ್ಸೆಗೂ ಮುನ್ನ ರೋಗಿಗೆ ಅರವಳಿಕೆ ಮದ್ದು ನೀಡುವುದು ಸಾಮಾನ್ಯ. ಶಸ್ತ್ರ ಚಿಕಿತ್ಸೆ ವಿಧಾನ, ದೇಹದ ಭಾಗಗಳ ಆಧಾರದ ಮೇಲೆ ಅರಿವಳಿಕೆ ತಜ್ಞರು ತಪಾಸಣೆ ಅರವಳಿಕೆ ನೀಡುತ್ತಾರೆ. ಇದರಿಂದ ವಿಷಯ ತಜ್ಞ ವೈದ್ಯರು ಶಸ್ತ್ರ ಚಿಕಿತ್ಸೆ ಮುಂದುವರಿಸಲು ಸಹಾಯವಾಗುತ್ತದೆ.

ಶಸ್ತ್ರ ಚಿಕಿತ್ಸೆಯ ನಂತರವೂ ಅರಿವಳಿಕೆ ತಜ್ಞರು ರೋಗಿಯ ತಪಾಸಣೆ ನಡೆಸುವ ಮೂಲಕ ರೋಗಿಯ ಮೇಲ್ವಿಚಾರಣೆಯಲ್ಲಿಯೂ ಭಾಗಿಯಾಗಿರುತ್ತಾರೆ.

ಹೃದ್ರೋಗ ಸಂಬಂಧಿತ ಕ್ಯಾತ್ ಲ್ಯಾಬ್ ಪ್ರಕ್ರಿಯೆಗಳು, ಎಂಡೊಸ್ಕೋಪಿ, ಮಕ್ಕಳ ಎಂಆರ್‌ಐ ಸ್ಕ್ಯಾನ್, ಹೆರಿಗೆ ಸಂದರ್ಭಗಳಲ್ಲಿ ಅರವಳಿಗೆ ಮದ್ದು ಮತ್ತು ತಜ್ಞರ ಜವಾಬ್ದಾರಿ ಹೆಚ್ಚಿರುತ್ತದೆ.

ಅರಿವಳಿಕೆ  ನೀಡುವ ವಿಧಾನಗಳು

ಅರಿವಳಿಕೆ ತಜ್ಞ ವೈದ್ಯರು ಸಾಮಾನ್ಯವಾಗಿ ಎರಡು- ಮೂರು ರೀತಿಯ ಅರಿವಳಿಕೆ ಆರೈಕೆಯನ್ನು ಒದಗಿಸುತ್ತಾರೆ

ಸಂಪೂರ್ಣ ಅರಿವಳಿಕೆ

ಸಂಪೂರ್ಣ ಅರಿವಳಿಕೆಯನ್ನು ರಕ್ತ ನಾಳಗಳಿಗೆ ನೀಡಲಾಗುತ್ತದೆ. ಇದು ರೋಗಿಯನ್ನು ಪ್ರಜ್ಞೆ ಕಳೆದುಕೊಳ್ಳುವಂತೆ ಮಾಡುತ್ತದೆ. ಇದನ್ನು ಕುತ್ತಿಗೆ ಅಥವಾ ಎದೆಯ ಭಾಗದ ಶಸ್ತ್ರಚಿಕಿತ್ಸೆ, ಮೆದುಳಿಗೆ ಸಂಬಂಧಿತ ಶಸ್ತ್ರ ಚಿಕಿತ್ಸೆ ಹಾಗೂ ತೆರೆದ ಹೃದಯ ಶಸ್ತ್ರಚಿಕಿತ್ಸೆಯ oತಹ ಸನ್ನಿವೇಶಗಳಲ್ಲಿ ಪ್ರಯೋಗಿಸಲಾಗುತ್ತದೆ.

ಪ್ರಾಂತೀಯ ಅರಿವಳಿಕೆ:

ಆಂಗ್ಲದಲ್ಲಿ ರೀಜನಲ್ ಅನಾಸ್ತೇಶಿಯ ಎನ್ನುವ ಈ ಪ್ರಕ್ರಿಯೆಯಲ್ಲಿ ಸೊಂಟದಿಂದ ಕೆಳಭಾಗ, ದೇಹದ ದೊಡ್ಡ ಭಾಗವನ್ನು ಮರಗಟ್ಟಲು ಅರವಳಿಗೆ ಪ್ರಯೋಗಿಸಲಾಗುತ್ತದೆ. ಈ ಇಂಜೆಕ್ಷನ್ ಅನ್ನು ಕ್ಯಾತಿಟರ್ ಎಂಬ ಸಣ್ಣ ಕೊಳವೆಯ ಮೂಲಕ ಬೆನ್ನು ಹುರಿಗೆ ನೀಡಲಾಗುತ್ತದೆ. ಇದರಿಂದ ರೋಗಿ ಎಚ್ಚರದಿಂದ ಇದ್ದರೂ ನಿಗದಿತ ಭಾಗದಲ್ಲಿ ನಡೆಸುವ ಶಸ್ತ್ರ ಚಿಕಿತ್ಸೆಯಿಂದ ನೋವಿನ ಅನುಭವ ಆಗುವುದಿಲ್ಲ. ಬೆನ್ನುಮೂಳೆಯ ಬ್ಲಾಕ್‌ಗಳು ಮತ್ತು ಎಪಿಡ್ಯೂರಲ್‌ಗಳನ್ನು ಒಳಗೊಂಡಂತೆ ಈ ರೀತಿಯ ಅರಿವಳಿಕೆಯನ್ನು ಹೆಚ್ಚಾಗಿ ಹೆರಿಗೆಯ ಸಮಯದಲ್ಲಿ ಮತ್ತು ಕಾಲು ಅಥವಾ ಹೊಟ್ಟೆಯ ಶಸ್ತ್ರಚಿಕಿತ್ಸೆ ವೇಳೆ ಬಳಸಲಾಗುತ್ತದೆ.

ಸ್ಥಳೀಯ ಅರಿವಳಿಕೆ
ಆಂಗ್ಲ ಭಾಷೆಯಲ್ಲಿ ಲೋಕಲ್ ಅನಾಸ್ತೇಶಿಯ ಎಂದು ಕರೆಯ ಲ್ಪಡುವ ಈ ಪ್ರಕ್ರಿಯೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸುವ ದೇಹದ ಒಂದು ಸಣ್ಣ ಪ್ರದೇಶವನ್ನು ಮಾತ್ರ ಮರಗಟ್ಟಿಸಲಾಗುತ್ತದೆ. ಉದಾಹರಣೆಗೆ ಕಣ್ಣಿನ ಕಟರಾಕ್ಟ್ ಶಸ್ತ್ರ ಚಿಕಿತ್ಸೆ,
ಸಣ್ಣ ಪುಟ್ಟ ಗೆಡ್ಡೆಗಳನ್ನು ತೆಗೆಯುವುದು, ಆಳವಾದ ಗಾಯಗಳನ್ನು ಹೊಲಿಯುವುದು ಅಥವಾ ಸಣ್ಣ ಪುಟ್ಟ ಗಂಟುಗಳು ನಿರ್ಮೂಲನೆ ಮುಂತಾದ ಕಾರ್ಯವಿಧಾನ ಗಳಿಗೆ ಇದನ್ನು ಹೆಚ್ಚಾಗಿ ಬಳಸಲಾಗುತ್ತದೆ.

ಅನಸ್ತೇಶಿಯಾ ತಜ್ಞರೊಂದಿಗೆ ಏನನ್ನೂ ಮುಚ್ಚಿಡಬೇಡಿ

– ಹೃದಯ ವೈಫಲ್ಯ, ಮಧುಮೇಹ ಅಥವಾ ಆಸ್ತವಾದಂತಹ ಯಾವುದೇ   ವೈದ್ಯಕೀಯ ಸಮಸ್ಯೆಗಳ ಬಗ್ಗೆ ನಿಮ್ಮ ಅರಿವಳಿಕೆ ತಜ್ಞ ವೈದ್ಯರಿಗೆ ತಿಳಿಸಲು ಮರೆಯದಿರಿ.

– ನೀವು  ಯಾವ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೀರಿ ಎಂಬ ವಾಹಿತಿಯನ್ನು ತಪ್ಪದೇ ಅರವಳಿಗೆ ತಜ್ಞರೊಂದಿಗೆ ಹಂಚಿಕೊಳ್ಳಿ. ಅಲರ್ಜಿ ಇದ್ದಲ್ಲಿ ತಪ್ಪದೇ ತಿಳಿಸಿ.

– ನೀವು ಅರಿವಳಿಕೆ ಇಂಜೆಕ್ಷನ್ ಪಡೆದು ತೊಂದರೆ ಅನುಭವಿಸಿದ್ದರೆ, ಈ ಬಗ್ಗೆ ಏನಾದರೂ ಪ್ರಶ್ನೆಗಳಿದ್ದರೆ ತಜ್ಞರೊಂದಿಗೆ ಹಂಚಿಕೊಳ್ಳಿ.

– ಮೈಗ್ರೇನ್, ಬೆನ್ನು ನೋವು, ಕ್ಯಾನ್ಸರ್ ನೋವು ಅಥವಾ ಫೈಬ್ರೊವ್ಯಾಲ್ಗಿಯದಂತಹ ಸಮಸ್ಯೆಗಳು ಇದ್ದರೆ ತಕ್ಷಣ ಅರವಳಿಗೆ ತಜ್ಞರನ್ನು ಭೇಟಿಯಾಗುವುದು ಸೂಕ್ತ.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

7 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

8 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

9 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

14 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

21 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

21 hours ago